Categories: Chikkamagaluru

ಶಿಕ್ಷಕಿ ಸೇರಿದಂತೆ ಇಬ್ಬರಲ್ಲಿ ಮಂಗನ ಕಾಯಿಲೆ ಸೋಂಕು ಪತ್ತೆ !

ಚಿಕ್ಕಮಗಳೂರು : ಜಿಲ್ಲೆಯ ಮಲೆನಾಡು ಭಾಗದಲ್ಲಿ ಇಬ್ಬರಲ್ಲಿ ಮಂಗನ ಕಾಯಿಲೆ (ಕೆಎಫ್‍ಡಿ) ಕಾಣಿಸಿಕೊಂಡಿದೆ.

ಶೃಂಗೇರಿ ತಾಲೂಕಿನ 79 ವರ್ಷದ ವ್ಯಕ್ತಿಯೊಬ್ಬರಲ್ಲಿ ಕಳೆದ ಸೋಮವಾರ ಸೋಂಕು ಕಾಣಿಸಿಕೊಂಡಿದ್ದರೆ, ಬುಧವಾರ ಕೊಪ್ಪ ತಾಲೂಕಿನ 35 ವರ್ಷದ ಮಹಿಳೆಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಉಡುಪಿಯ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೊಪ್ಪ ತಾಲೂಕಿನ ಭತ್ರಹಳ್ಳಿ ಜೋಗಿಸರದ 35 ವರ್ಷದ ಖಾಸಗಿ ಶಾಲಾ ಶಿಕ್ಷಕಿಯಲ್ಲಿ ಸೋಂಕು ಪತ್ತೆಯಾಗಿದೆ. ಇವರು ಚಿಕ್ಕಮಗಳೂರು ನಗರದಲ್ಲಿ ತರಬೇತಿಗೆ ಬಂದು ಹೋಗಿದ್ದನ್ನು ಹೊರತುಪಡಿಸಿದರೇ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲವೆಂದು ಆರೋಗ್ಯ ಇಲಾಖೆಯ ಮೂಲಗಳಿಂದ ತಿಳಿದು ಬಂದಿದೆ. ಗ್ರಾಮದಲ್ಲಿನ ಪ್ರಾಣಿಗಳಲ್ಲಿನ ಉಣ್ಣೆಯಿಂದ ಸೋಂಕು ಬಂದಿರಬಹುದೆಂದು ಅಂದಾಜಿಸಲಾಗಿದೆ.

ಶಾಲಾ ಶಿಕ್ಷಕಿಯಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದ್ದಂತೆ ಶಿಕ್ಷಕಿಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದು, ಮಹಿಳೆ ಚೇತರಿಸಿಕೊಳ್ಳುತ್ತಿದ್ದಾರೆ. ಕೊಪ್ಪ ತಾಲೂಕಿನಲ್ಲಿ ಕಳೆದ ವರ್ಷ ಮೂರು ಮಂಗನ ಕಾಯಿಲೆ ಪ್ರಕರಣಗಳು ಕಾಣಿಸಿಕೊಂಡಿತ್ತು. 2024ರಲ್ಲಿ ಇದೇ ಮೊದಲ ಬಾರಿಗೆ ಇಬ್ಬರಲ್ಲಿ ಮಂಗನ ಕಾಯಿಲೆ ಸೋಂಕು ಕಾಣಿಸಿಕೊಂಡಿದೆ.

ಸೋಂಕು ಕಾಣಿಸಿಕೊಂಡ ಹಿನ್ನಲೆಯಲ್ಲಿ ಸಂಬಂಧಿಸಿದ ಗ್ರಾಮಗಳ ವ್ಯಾಪ್ತಿಯಲ್ಲಿ ಉಣ್ಣೆಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳಿಸಲಾಗಿದೆ. ಆರೋಗ್ಯ ಇಲಾಖೆಯಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

1 day ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

2 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

2 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

2 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

2 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

2 days ago