ಸ್ಕೂಟರ್ಗೆ ಪಿಕಪ್ ವಾಹನ ಡಿಕ್ಕಿ ; ಸವಾರ ಸ್ಥಳದಲ್ಲೇ ಸಾವು !
ಕಡೂರು: ಸ್ಕೂಟರ್ಗೆ ಪಿಕಪ್ ವಾಹನ ಡಿಕ್ಕಿ (Accident) ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ (Death) ಘಟನೆ ಕಡೂರು (Kadur) ತಾಲೂಕಿನ ದೊಡ್ಡಘಟ್ಟ ಗೇಟ್ ಬಳಿ ಶುಕ್ರವಾರ ರಾತ್ರಿ ನಡೆದಿದೆ.
ಮೃತಪಟ್ಟ ಯುವಕನನ್ನು ಕಡೂರು ತಾಲೂಕಿನ ಬೀರೂರು ಪಟ್ಟಣದ ನಿವಾಸಿ ವಿನಾಯಕ್ (28) ಎಂದು ಗುರುತಿಸಲಾಗಿದೆ.
ತರೀಕೆರೆಯಿಂದ ಕೆಲಸ ಮುಗಿಸಿ ಬೀರೂರಿಗೆ ವಾಪಸ್ ಆಗುವಾಗ ಈ ಅಪಘಾವುಂಟಾಗಿದ್ದು, ಪಿಕಪ್ ವಾಹನ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಈ ಘಟನೆ ಸಂಬಂಧ ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.