Accident | ಪ್ರಪಾತಕ್ಕೆ ಉರುಳಿದ ಕಾರು ; ನಾಲ್ವರ ಸ್ಥಿತಿ ಗಂಭೀರ !

0 81

ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿದ ಪ್ರವಾಸಿಗರಿದ್ದ ಕಾರೊಂದು ದತ್ತಪೀಠಕ್ಕೆ ತೆರಳುವ ಮಾರ್ಗದಲ್ಲಿ ಪ್ರಪಾತಕ್ಕೆ ಬಿದ್ದಿದ್ದು, ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುಧವಾರ ಸಂಜೆ ವರದಿಯಾಗಿದೆ.


ಮೈಸೂರಿನಿಂದ ಚಿಕ್ಕಮಗಳೂರಿಗೆ ಒಂದೇ ಕುಟುಂಬದ ನಾಲ್ವರು ಬುಧವಾರ ಪ್ರವಾಸಕ್ಕೆ ಬಂದಿದ್ದು, ಚಿಕ್ಕಮಗಳೂರಿನಿಂದ ದತ್ತಪೀಠಕ್ಕೆ ತೆರಳಿದ ಬಳಿಕ ಚಿಕ್ಕಮಗಳೂರು ನಗರಕ್ಕೆ ಹಿಂದಿರುಗುತ್ತಿದ್ದ ಮಾರ್ಗದಲ್ಲಿರುವ ಕವಿಕಲ್‍ಗಂಡಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಪ್ರಪಾತಕ್ಕೆ ಉರುಳಿ ಬಿದ್ದಿದೆ.

ಈ ವೇಳೆ ಕಾರಿನಲ್ಲಿದ್ದ ಸೀತಾರಾಮ್, ಸುಗುಣ, ಶ್ರೇಯಸ್, ಶುಭಾ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಚಿಕ್ಕಮಗಳೂರು ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಗಿದೆ.

ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದು ಬಂದಿದ್ದು, ಅಪಘಾತದಲ್ಲಿ ಕಾರು ನಜ್ಜುಗುಜ್ಜಾಗಿದೆ.

Leave A Reply

Your email address will not be published.

error: Content is protected !!