ಚಿಕ್ಕಮಗಳೂರು: ರಾಗಿ ಬೆಳೆದಿದ್ದಂತ ರೈತ, ಬೆಂಬಲ ಬೆಲೆಯಡಿ ಖರೀದಿಗೆ ಬೆಲೆ ನಿಗದಿ ಮಾಡುವಂತೆ ಆ ಅಧಿಕಾರಿಯನ್ನು ಕೋರಿದ್ದರು. ಆದ್ರೇ ಬೆಂಬಲ ಬೆಲೆಯಡಿ ರಾಗಿ ಖರೀದಿಸಲು ಬೆಲೆ ನಿಗದಿ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು, ಈಗ ಸಹಾಯಕ ಮ್ಯಾನೇಜರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಚಿಕ್ಕಮಗಳೂರಿನ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಸಹಾಯ ವ್ಯವಸ್ಥಾಪಕಿ ಅನುಸೂಯಮ್ಮ ಎಂಬುವರಲ್ಲಿ ಮರ್ಲೆ ಗ್ರಾಮದ ತಿಮ್ಮನಹಳ್ಳಿಯ ಮಂಜುನಾಥ್ ಎನ್ನುವಂತ ರೈತ, ತನ್ನ ಪತ್ನಿ, ತಾಯಿಯ ಹೆಸರಿನಲ್ಲಿ 35 ಕ್ವಿಂಟಾಲ್ ರಾಗಿಯನ್ನು ಬೆಂಬಲ ಬೆಲೆ ಯೋಜನೆಯಡಿ ನೀಡಿದ್ದರು.
ರಾಗಿಗೆ ಸೂಕ್ತ ಬೆಂಬಲ ಬೆಲೆ ನೀಡುವಂತೆ ಅನೇಕ ಬಾರಿ ಕಚೇರಿಗೆ ಭೇಟಿಯಾಗಿದ್ದರು. ಈ ವೇಳೆ ಸಹಾಯಕ ವ್ಯವಸ್ಥಾಪಕಿ ಅನಸೂಯಮ್ಮ ಪ್ರತಿ ಚೀಲಕ್ಕೆ 30 ರೂ. ನಂತೆ 362 ಚೀಲಕ್ಕೆ ರೂ.9,050 ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಈ ಹಿನ್ನಲೆಯಲ್ಲಿ ರೈತ ಮಂಜುನಾಥ್ ಮುಂಗಡವಾಗಿ ರೂ.4000 ಲಂಚ ನೀಡಿದ ಬಳಿಕ, ಬಾಕಿ ಲಂಚ ನೀಡಲಾಗದೇ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಇಂದು ಬಾಕಿ ಲಂಚದ ಹಣವನ್ನು ನೀಡುವ ವೇಳೆಯಲ್ಲಿ ಲೋಕಾಯುಕ್ತ ಡಿವೈಎಸ್ಪಿ ತಿರುಮಲೇಶ್, ಇನ್ಸ್ಪೆಕ್ಟರ್ ಮಲ್ಲಿಕಾರ್ಜನ್ ಹಾಗೂ ಅನಿಲ್ ರಾಥೋಡ್ ನೇತೃತ್ವದಲ್ಲಿ ದಾಳಿ ನಡೆಸಿ, ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಶೇ.75.02 ರಷ್ಟು ಮತದಾನ ನಡೆದಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ…
ಶಿವಮೊಗ್ಗ : ಏ.30ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಶಿವಮೊಗ್ಗ ಆಗಮಿಸಲಿದ್ದು ರಾಷ್ಟ್ರೀಯತೆಯ ಬಗ್ಗೆ ಕಾರ್ಯಕರ್ತರಲ್ಲಿ ಹುಮ್ಮಸ್ಸು…
ರಿಪ್ಪನ್ಪೇಟೆ: ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ…
ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ..... ಶೃಂಗೇರಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಫಿನಾಡು ವಿಶೇಷತೆಗಳಿಗೆ…
ಹೊಸನಗರ : ಏ. 26 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಶಿವಮೊಗ್ಗ : ಮೇ 2ರಂದು ಕಾಂಗ್ರೆಸ್ ನಾಯಕ ರಾಹುಲ್ಗಾಂಧಿ ನಗರದ ಫ್ರೀಡಂ ಪಾರ್ಕ್ನಲ್ಲಿ ಗೀತಾಶಿವರಾಜ್ಕುಮಾರ್ ಬಹಿರಂಗ ಪ್ರಚಾರ ಮಾಡಲಿದ್ದಾರೆ ಎಂದು…