Categories: Chikkamagaluru

Udupi – Chikkamagaluru Loksabha Constituency | ಮಧ್ಯಾಹ್ನ 01 ಗಂಟೆ ಹೊತ್ತಿಗೆ ಶೇ.ಎಷ್ಟು ಮತದಾನವಾಗಿದೆ ಗೊತ್ತಾ ?

ಚಿಕ್ಕಮಗಳೂರು : ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಮಧ್ಯಾಹ್ನ 01 ಗಂಟೆಯ ಸುಮಾರಿಗೆ ಶೇ. 46.43 ಮತದಾನವಾಗಿದೆ.

ಉಡುಪಿಯಲ್ಲಿ 47.04% , ಕುಂದಾಪುರದಲ್ಲಿ 49.14% , ಕಾರ್ಕಳ 48.96% ಹಾಗೂ ಕಾಪು 49.58% ನಡೆದರೆ ಚಿಕ್ಕಮಗಳೂರು 40.44%, ಮೂಡಿಗೆರೆ 46.44% ಶೃಂಗೇರಿ 49.49% ಹಾಗೂ ತರೀಕೆರೆ 41.57% ಮತದಾನವಾಗಿದೆ.

ಕಾಫಿನಾಡಿನಲ್ಲಿ ಲೋಕಸಭಾ ಚುನಾವಣೆ ಮತದಾನ ಪ್ರಕ್ರಿಯೆ ಶಾಂತಿ ಯುತವಾಗಿ ಸಾಗುತ್ತಿದ್ದು, ಇಂದು ಹಸೆಮಣೆ ಏರಬೇಕಿದ್ದ ನವವಧು ಮತದಾನ ಮಾಡಿದ್ದು ವಿಶೇಷವಾಗಿದೆ.

ಮೂಡಿಗೆರೆ ತಾಲೂಕು ಕುಂದೂರು ಮತಕೇಂದ್ರದಲ್ಲಿ ನವವಧು ತಳವಾರ ಗ್ರಾಮದ ಸೌಮ್ಯ ಹಸೆಮಣೆ ಏರುವ ಮೊದಲು ತಮ್ಮ ಹಕ್ಕು ಚಲಾಯಿಸಿದರು.

ಇನ್ನೂ ಸ್ವಾಮೀಜಿಗಳು ಹಾಗೂ ಗಣ್ಯರು ತಮ್ಮ ಹಕ್ಕು ಚಲಾಯಿಸಿದ್ದು ಬಾಳೆಹೊನ್ನೂರು ರಂಭಾಪುರಿ ಶ್ರೀ ರಂಭಾಪುರಿ ಮಠದ ಮತಗಟ್ಟೆಗೆ ತೆರಳಿ ಹಕ್ಕು ಚಲಾಯಿಸಿದರು. ನಂತರ ಮಾತನಾಡಿದ ಅವರು, ಮತದಾನ ಸಂವಿಧಾನ ಕೊಟ್ಟ ಅಧಿಕಾರ ಎಂಬುದನ್ನು ಮರೆಯಬೇಡಿ, ಸಧೃಡ ಭಾರತ ನಿರ್ಮಾಣಕ್ಕಾಗಿ ಮತದಾನ ಮಾಡಿ ಎಂದು ಮನವಿ ಮಾಡಿದರು.

ಕೊಪ್ಪ ತಾಲೂಕು ಹರಿಹರಪುರ ಶ್ರೀಮಠದ ಶ್ರೀ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮೀಜಿ ಹರಿಹರಪುರ ಸರ್ಕಾರಿ ಶಾಲೆಯಲ್ಲಿ ತೆರೆಯಲಾಗಿರುವ ಮತಗಟ್ಟೆಗೆ ತೆರಳಿ ಮತದಾನ ಮಾಡಿದರು. ಎಲ್ಲರೂ ತಪ್ಪದೆ ಮತದಾನ ಮಾಡುವಂತೆ ವಿನಂತಿಸಿದರು.

ಚಿಕ್ಕಮಗಳೂರು ಕ್ಷೇತ್ರದ ಶಾಸಕ ಎಚ್.ಡಿ.ತಮ್ಮಯ್ಯ ಚಿಕ್ಕಕುರುಬರಹಳ್ಳಿ ಸರ್ಕಾರಿ ಶಾಲೆಯಲ್ಲಿ ತೆರೆಯಲಾಗಿರುವ ಮತಗಟ್ಟೆ ಸಂಖ್ಯೆ 138 ಮತಗಟ್ಟೆಗೆ ತೆರಳಿ ಮತ ಚಲಾಯಿಸಿದರು.

ಇವಿಎಂ ದೋಷ ಸ್ಥಗಿತಗೊಂಡ ಯಂತ್ರ ಗಂಟೆಗೂ ಹೆಚ್ಚು ಕಾಲ ಕಾದು ಕುಳಿತ ಮತದಾರರು ಚಿಕ್ಕಮಗಳೂರು ತಾಲೂಕು ಅರೆನೂರು ಗ್ರಾಮದಲ್ಲಿ ತೆರೆಯಲಾಗಿರುವ ಮತಗಟ್ಟೆ ಸಂಖ್ಯೆ 53ರಲ್ಲಿ ಇವಿಎಂ ಯಂತ್ರದಲ್ಲಿ ದೋಷ ಕಂಡು ಬಂದಿದ್ದು ಮತದಾರರು ಒಂದು ಗಂಟೆಗೂ ಹೆಚ್ಚುಕಾಲ ಕಾದು ಕುಳಿತುಕೊಳ್ಳಬೇಯಿತು. ಮತಗಟ್ಟೆ ಅಧಿಕಾರಿಗಳು ಇವಿಎಂ ಯಂತ್ರದಲ್ಲಿ ದೋಷವನ್ನು ಸರಿಪಡಿಸಿ ಮತದಾನ‌ ಪ್ರಕ್ರಿಯೆಗೆ ಅನುವು ಮಾಡಿಕೊಡಲಾಯಿತು.

ನರಸಿಂಹರಾಜಪುರ ತಾಲೂಕು ಮೆಣಸೂರು ಗ್ರಾಮದಲ್ಲಿ ತೆರೆಯಲಾಗಿರುವ ಮತಗಟ್ಟೆಯಲ್ಲಿ ಇವಿಎಂ ದೋಷ ಕಂಡು ಬಂದಿದ್ದು ಒಂದು ಗಂಟೆಗೂ ಹೆಚ್ಚು ಕಾಲ ಮತದಾನ ಸ್ಥಗಿತಗೊಂಡಿತ್ತು. ಕೆಲಸಕ್ಕೆ ತೆರಳುವ ಕಾರ್ಮಿಕರು ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಇವಿಎಂ ಮಿಶಿನ್ ದುರಸ್ತಿ ನಂತರ‌ ಮತದಾನ ಪ್ರಕ್ರಿಯೆ ಮುಂದೂವರೆಯಿತು.

ಬಯಲು ಸೀಮೆ ಭಾಗದಲ್ಲಿ ಉರಿ ಬಿಸಿಲಿನ‌ ನಡುವೆ ಮತದಾರರು ಮತಗಟ್ಟೆಯಲ್ಲಿ ಸರತಿಯಲ್ಲಿ ನಿಂತು ಮತದಾನ ಮಾಡಿದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

12 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

16 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

16 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

19 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

19 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

1 day ago