ಕಡೂರು: ಅಕ್ರಮ ಭೂ ಮಂಜೂರಾತಿ ಪ್ರಕರಣದ ಆರೋಪಿ ಈ ಹಿಂದಿನ ಕಡೂರು ತಾಲೂಕು ತಹಶೀಲ್ದಾರ್ ಜೆ.ಉಮೇಶ್ ಅವರನ್ನು ಕಡೂರು ಪೊಲೀಸರು ಬೆಂಗಳೂರಿನಲ್ಲಿ ವಶಕ್ಕೆ ಪಡೆದಿದ್ದಾರೆ.
ಸದ್ಯ ಕಾರವಾರದ ಸೀ ಬರ್ಡ್ ಭೂಸ್ವಾಧೀನ ಅಧಿಕಾರಿಯಾಗಿರುವ ಜೆ. ಉಮೇಶ್ ಅವರು ಅಕ್ರಮ ಭೂ ಮಂಜೂರಾತಿ ಆರೋಪ ಎದುರಿಸುತ್ತಿದ್ದರು. ಇತ್ತೀಚೆಗೆ ಕಾರವಾರ ಜಿಲ್ಲೆಗೆ ವರ್ಗಾವಣೆಗೊಂಡಿದ್ದರು.
ಅಕ್ರಮ ಬಹುಮಂಜೂರಾತಿ ಸಂಬಂಧ ತರೀಕೆರೆ ಉಪವಿಭಾಗ ಅಧಿಕಾರಿ ಕಡೂರು ಪೊಲೀಸ್ ಠಾಣೆಯಲ್ಲಿ ಹಿಂದಿನ ತಹಸಿಲ್ದಾರ್ ಜೆ. ಉಮೇಶ್ ಸೇರಿದಂತೆ ಮೂವರ ಮೇಲೆ ಪ್ರಕರಣ ದಾಖಲಿಸಿದ್ದರು. ಪ್ರಕರಣ ದಾಖಲಾಗುತ್ತಿದ್ದಂತೆ ಬಂಧನದ ಭೀತಿಯಿಂದ ತಹಸೀಲ್ದಾರ್ ಜೆ.ಉಮೇಶ್ ಕಣ್ಮರೆಯಾಗಿದ್ದರು.
ಅಕ್ರಮ ಭೂ ಮಂಜೂರಾತಿ ಪ್ರಕರಣದ ಆರೋಪಿ ಉಮೇಶ್ ರನ್ನು ಕಡೂರು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿನ ಭೂ ಅಕ್ರಮ ಮಂಜೂರಾತಿ ಸಂಬಂಧ ಸರ್ಕಾರ 15 ಜನ ತಹಶೀಲ್ದಾರುಳ್ಳ ತಂಡವನ್ನು ರಚಿಸಿದ್ದು ಈ ತಂಡ ತನಿಖೆಯಲ್ಲಿ ನಿರತವಾಗಿದೆ. ತನಿಖೆಯಿಂದ ಅಪಾರ ಪ್ರಮಾಣದ ಅಕ್ರಮ ಭೂ ಮಂಜೂರಾತಿ ಬೆಳಕಿಗೆ ಬರುತ್ತಿದ್ದು ಸದ್ಯ ಕಡೂರು ತಾಲೂಕಿನ ಹಿಂದಿನ ತಹಶೀಲ್ದಾರ್ ಜೆ. ಉಮೇಶ್ ರವರನ್ನು ಬಂಧನವಾಗಿದೆ. ಈ ಪ್ರಕರಣದ ಉಳಿದ ಇಬ್ಬರು ಅಧಿಕಾರಿಗಳ ಬಂಧನಕ್ಕೆ ಪೊಲೀಸರು ಮುಂದಾಗಿದ್ದಾರೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…