ಎತ್ತು ತಿವಿದು ಯುವ ರೈತ ಸಾವು !

0 44

ಕಡೂರು : ಹೊಲಕ್ಕೆ ತೆರಳುತ್ತಿದ್ದ ವೇಳೆ ಎತ್ತು ದಾಳಿ ಮಾಡಿ ತಿವಿದ ಪರಿಣಾಮ ಯುವ ರೈತನೋರ್ವ ಸಾವನ್ನಪ್ಪಿದ್ದಾನೆ.

ತಾಲೂಕಿನ ವಿ. ಸಿದ್ದರಹಳ್ಳಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ಅರುಣ್ (29) ಮೃತ ದುರ್ದೈವಿಯಾಗಿದ್ದು ಅರುಣ್, ಹೊಲಕ್ಕೆ ತೆರಳುತ್ತಿದ್ದ ವೇಳೆ ಎತ್ತು ಏಕಾಏಕಿ ದಾಳಿ ಮಾಡಿದೆ. ಕೊಂಬಿನಿಂದ ತಿವಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಅರುಣ್ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.

ಪ್ರಕರಣ ಸಂಬಂಧಿಸಿ ಎತ್ತಿನ ಮಾಲೀಕ ಕೃಷ್ಣಪ್ಪ ಎಂಬುವರ ವಿರುದ್ಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply

Your email address will not be published.

error: Content is protected !!