Categories: Kalasa

ಎದೆ ಭಾಗಕ್ಕೆ ತಿವಿದ ಕಾಡುಕೋಣ ; ವೃದ್ಧನ ಸ್ಥಿತಿ ಗಂಭೀರ !

ಕಳಸ: ಕಾಡುಕೋಣವೊಂದು ಎದೆ ಭಾಗಕ್ಕೆ ಬಲವಾಗಿ ತಿವಿದು ವೃದ್ಧನೊರ್ವ ಗಂಭೀರ ಗಾಯಗೊಂಡ ಘಟನೆ ತಾಲೂಕಿನ ಮುಜೇಖಾನ್ ಗ್ರಾಮದಲ್ಲಿ ನಡೆದಿದೆ.

ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಮರೀಗೌಡ (60) ಎಂದು ಗುರುತಿಸಲಾಗಿದೆ.

ಇವರು ಕಾಡಂಚಿನ ಗ್ರಾಮ ಮುಜೇಖಾನ್ ನಿಂದ ಕಳಸ ಕಡೆಗೆ ಬರುವಾಗ ದಾರಿ ಮಧ್ಯೆ ಇದ್ದ ಕಾಡುಕೋಣ ಏಕಾಏಕಿ ವೃದ್ಧನ ಮೇಲೆರಗಿದೆ. ಈ ವೇಳೆ ಕಾಡುಕೋಣದ ಕೊಂಬು ವೃದ್ಧ ಮರೀಗೌಡ ಅವರ ಎಡಭಾಗಕ್ಕೆ ಚುಚ್ಚಿ ಎದೆ ಭಾಗಕ್ಕೆ ಗಂಭೀರವಾದ ಗಾಯವಾಗಿದೆ. ಸ್ಥಳೀಯರು ಕೂಡಲೇ ಮರೀಗೌಡ ಅವರನ್ನು ಕಳಸ ಆಸ್ಪತ್ರೆಗೆ ಕರೆ ತಂದು ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ತಪಾಸಣೆ ನಡೆಸಿದ ಆಸ್ಪತ್ರೆ ವೈದ್ಯೆ ಡಾ.ಮಾನಸ, ವೃದ್ಧನ ಶ್ವಾಸಕೋಶಕ್ಕೆ ಗಾಯವಾಗಿರುವುದನ್ನು ಗಮನಿಸಿದ್ದಾರೆ. ಸಂಬಂಧಿಕರು ವೃದ್ಧನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮಲೆನಾಡು ಭಾಗದಲ್ಲಿ ಕಾಡಾನೆ ಹಾವಳಿಯಿಂದ ತತ್ತರಿಸಿರುವ ರೈತರು, ಸಾರ್ವಜನಿಕರು ಸದ್ಯ ಕಾಡು ಕೋಣಗಳ ಹಾವಳಿಯಿಂದ ಆತಂಕದಲ್ಲಿ ಬದುಕುವಂತಾಗಿದೆ. ಕಳೆದ ವರ್ಷ ಕಾಡುಕೋಣ ದಾಳಿಯಿಂದಾಗಿ ಕಳಸ ಸಮೀಪದ ತೋಟದೂರು ಎಂಬಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಕಾಡುಕೋಣಗಳ ಹಾವಳಿ ನಿಯಂತ್ರಣಕ್ಕೆ ಅರಣ್ಯ ಇಲಾಖೆ ಅಗತ್ಯ ಕ್ರಮವಹಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಕಾಡುಪ್ರಾಣಿಗಳ ದಾಳಿಗೆ ಕಂಚಿನಕೆರೆ, ಮುಂಡಾನಿ, ಕಾಳಿಕೆರೆ, ಕೊಂಡದಮನೆ, ಗೊಡ್ಲುಮನೆ ಗ್ರಾಮಗಳ ಜನ ಕಂಗೆಟ್ಟಿದ್ದಾರೆ.

Malnad Times

Share
Published by
Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

15 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

19 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

19 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

21 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

22 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

1 day ago