ಕುಡಿದ ಮತ್ತಲ್ಲಿ ಕಾಂಗ್ರೆಸ್ ಮುಖಂಡರಿಂದ ಗುಂಡಾಗಿರಿ ; ಮಹಿಳೆ ಮನೆ ಮೇಲೆ ಕಲ್ಲು ತೂರಿ ಅಡಿಕೆ, ಬಾಳೆ ಗಿಡಗಳನ್ನು ಕಡಿದು ದುಷ್ಕೃತ್ಯ

0 55

ಕೊಪ್ಪ: ಕುಡಿದ ಮತ್ತಲ್ಲಿ ಕಾಂಗ್ರೆಸ್ ಮುಖಂಡರು ಗುಂಡಾಗಿರಿ ನಡೆಸಿರುವ ಘಟನೆ ಜಿಲ್ಲೆಯ ತಾಲೂಕಿನ ದೇವಗೋಡು ಗ್ರಾಮದಲ್ಲಿ ನಡೆದಿದೆ.

ತಡರಾತ್ರಿ ಹಳೆ ವೈಷಮ್ಯದ ಹಿನ್ನೆಲೆ ಶೃಂಗೇರಿ ತಾಲೂಕಿನ ಕಾಂಗ್ರೆಸ್ ಮುಖಂಡರಾದ ರಮೇಶ್, ಸಂದರ್ಶ, ಸುಧಾಕರ್, ಸುಂದರೇಶ್ ಕುಡಿದ ಮತ್ತಿನಲ್ಲಿ ದೇವಗೋಡು ಗ್ರಾಮದ ರಾಧಮ್ಮ ಅವರ ಮನೆಯ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ಅಲ್ಲದೇ ಮನೆಯ ಮುಂದಿದ್ದ ಬಾಳೆ‌, ಕಾಫಿ ಗಿಡಗಳನ್ನು ಕಡಿದು ಹಾಕಿ ದುಷ್ಕೃತ್ಯ ಮೆರೆದಿದ್ದಾರೆ.

ಕಾಂಗ್ರೆಸ್ ಮುಖಂಡರು ನಡೆಸಿದ ಕೃತ್ಯ ಮೊಬೈಲ್ ಕ್ಯಾಮರಾದಲ್ಲಿ‌ ಸೆರೆಯಾಗಿದೆ. ನಾಲ್ವರ ವಿರುದ್ಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply

Your email address will not be published.

error: Content is protected !!