Categories: Koppa

ಕೇವಲ 750 ರೂ. ಸಾಲಕ್ಕೆ ವಿದ್ಯಾರ್ಥಿ ಆತ್ಮಹತ್ಯೆ ! ಡೆತ್‌ನೋಟ್‌ನಲ್ಲಿ ಹೊರಬಿತ್ತು ಆಘಾತಕಾರಿ ಅಂಶ

ಕೊಪ್ಪ : ಪಟ್ಟಣದ ಬಿಜಿಎಸ್ (ವೆಂಕಟೇಶ್ವರ ವಿದ್ಯಾ ಮಂದಿರ) ಶಾಲೆಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ ಈಗ ಹೊಸ ಟ್ವಿಸ್ಟ್ ಸಿಕ್ಕಿದೆ. ಕೇವಲ 750 ರೂ. ಸಾಲಕ್ಕೆ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಆಘಾತಕಾರಿ ಅಂಶ ಹೊರಬಿದ್ದಿದೆ.

ಕಡೂರು ತಾಲ್ಲೂಕಿನ ಹಿರೇಬಳ್ಳೇಕೆರೆ ಮೂಲದ ವಿದ್ಯಾರ್ಥಿ ಶ್ರೀನಿವಾಸ್ ಆಗಸ್ಟ್ 22ರಂದು ಹಾಸ್ಟೆಲ್ ನಲ್ಲಿ ನೇಣುಬಿಗಿದುಕೊಂಡಿದ್ದ. ಆದರೆ ಇದೀಗ ವಿದ್ಯಾರ್ಥಿ ಬರೆದಿಟ್ಟಿದ್ದ ಡೆತ್ ನೋಟ್ ವೈರಲ್ ಆಗಿದ್ದು ಸಾವಿನ ಸುತ್ತ ಅನುಮಾನದ ಹುತ್ತ ಮೂಡಿಸಿದೆ.

ಕೊಪ್ಪ ತಾಲೂಕಿನ ಖಾಸಗಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ. ಶಾಲೆಯ ಹಾಸ್ಟೇಲ್‍ನಲ್ಲೇ ಇದ್ದ. ಮೂಲತಃ ಕಡೂರು ತಾಲೂಕಿನ ಹಿರೇಬಳ್ಳೆಕೆರೆ ಗ್ರಾಮದವನು. ಹಾಸ್ಟೆಲ್‍ನಲ್ಲೇ ಇದ್ದ ಶ್ರೀನಿವಾಸ್ ಇದೇ ಆಗಸ್ಟ್ 22ರಂದು ಹಾಸ್ಟೆಲ್‍ನಲ್ಲೇ ನೇಣಿಗೆ ಶರಣಾಗಿದ್ದ. ಅಂದು ಆತ್ಮಹತ್ಯೆಗೆ ಕಾರಣ ಗೊತ್ತಾಗಿರಲಿಲ್ಲ. ಆದರೀಗ, ಆತ ಬರೆದಿದ್ದ ಡೆತ್‍ನೋಟ್ ವೈರಲ್ ಆಗಿದ್ದು ಸಾವಿನ ಸತ್ಯ ಹೊರಬಿದ್ದಿದೆ. ಆತ ಮಾಡಿದ್ದ 750 ಸಾಲಕ್ಕೆ ಬೆದರಿ ಆತ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಹಾಸ್ಟೆಲ್ ಸಿಬ್ಬಂದಿಯೊಬ್ಬರ ಬಳಿ ಪಡೆದಿದ್ದ 750 ಸಾಲಕ್ಕೆ ಅವರು 3 ಸಾವಿರ ಕೊಡಬೇಕು ಎಂದು ಹೇಳಿದ್ದರಂತೆ. ಅಷ್ಟೊಂದು ದುಡ್ಡು ಎಲ್ಲಿಂದ ತರೋದು. ಅಪ್ಪನಿಗೆ ಗೊತ್ತಾದ್ರೆ ಬೈತಾರೆ ಎಂದು ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಮೃತ ಬಾಲಕ ಪೋಷಕರು ಆರೋಪಿಸಿದ್ದು. ಸೇನೆಯಲ್ಲಿ ಸೇವೆಗೈದು ಬಂದಿದ್ದ ತಂದೆ ರಾಮಚಂದ್ರ ಇಂದು ಮಗನನ್ನ ನೆನೆದು ಕಣ್ಣೀರಿಡುತ್ತಿದ್ದಾರೆ.

ಬಾಲಕನ ಆತ್ಮಹತ್ಯೆಗೆ ಆ ಸಾಲ ಕೊಟ್ಟಿದ್ದೇ ಕಾರಣ ಅಂತಿದೆ ಮೃತ ಶ್ರೀನಿವಾಸ್ ಕುಟುಂಬ. ಕೊಟ್ಟ ಹಣಕ್ಕಿಂತ ಹೆಚ್ಚಿನ ಹಣ ಕೇಳಿದಕ್ಕೇ ಆತ ಮನನೊಂದು, ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾನೆ ಅಂತ ಶ್ರೀನಿವಾಸ್ ಪೋಷಕರು ಆರೋಪಿಸಿದ್ದಾರೆ. ಆ ಸಿಬ್ಬಂದಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ನಿವೃತ್ತ ಸೈನಿಕ ಕುಟುಂಬ ಆಗ್ರಹಿಸಿದೆ.

ಈಗಾಗಲೇ ದೂರು ನೀಡಿ, ತನಿಖೆ ನಡೆಸಿ ಅಂತ ಮನವಿ ಮಾಡಿದ್ದಾರೆ. ಮಗನ ಸಾವಿಗೆ ಸೂಕ್ತ ನ್ಯಾಯ ಒದಗಿಸದಿದ್ದರೆ ಎಸ್ಪಿ ಕಚೇರಿ ಮುಂದೆ ಪ್ರತಿಭಟಿಸೋದಾಗಿ ಎಚ್ಚರಿಕೆ ನೀಡಿದ್ದಾರೆ. ಬಾಲಕನ ಸಾವಿನಿಂದ ನೋವಿಗೀಡಾಗಿರೋ ಗ್ರಾಮಸ್ಥರು ಕೂಡ ಮೃತನ ಬಾಲಕನ ಪೋಷಕರ ಜೊತೆಗೂಡಿ ನ್ಯಾಯಕ್ಕಾಗಿ ಹೋರಾಡೋ ಎಚ್ಚರಿಕೆ ನೀಡಿದ್ದಾರೆ.

ಡೆತ್‍ನೋಟ್ ನಲ್ಲಿ ಏನಿದೆ :

ಇದೀಗ ವೈರಲ್ ಆಗಿರುವ ಡೆತ್ ನೋಟ್ ನಲ್ಲಿ ‘ನನ್ನ ಸಾವಿಗೆ ಕಾರಣ drushya was trochring to give to money and I take 750₹ from anty and anty said 3000₹ for my death reason person are sahil drushya ಎಂದು ಬರೆದುಕೊಂಡಿದ್ದಾನೆ ಎನ್ನಲಾಗಿದೆ.

ಮೃತ ವಿದ್ಯಾರ್ಥಿ ಶ್ರೀನಿವಾಸ್ ಅವರ ತಂದೆ ರಮೇಶ್ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಸದ್ಯ ಕಂದಾಯ ಇಲಾಖೆಯಲ್ಲಿ ಗ್ರಾಮ ಆಡಳಿತಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ. ತನ್ನ ಮಗನ ಡೆತ್ ನೋಟ್ ನೋಡಿ ಕಣ್ಣೀರಿಟ್ಟಿರುವ ರಮೇಶ್, ಮಗನ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿದ್ದಾರೆ.

ಶಾಲೆಗೆ ಫೀಸ್ ಕಟ್ಟಿರ್ತಾರೆ. ಹಾಸ್ಟೆಲ್‍ಗೆ ಮಂತ್ಲಿ ಹಣ ಕೊಡ್ತಾರೆ. ಆ ಹುಡಗು 750 ರೂಪಾಯಿ ಸಾಲ ಮಾಡಿದ್ದೇಕೆ. ಹಾಸ್ಟೆಲ್ ಸಿಬ್ಬಂದಿಗಳು ಮಕ್ಕಳಿಗೆ ಸಾಲ ನೀಡಿದ್ದೇಕೆ. ಕೊಟ್ಟ ಹಣಕ್ಕಿಂತ ಹೆಚ್ಚು ಹಣ ಕೇಳಿದ್ಯಾಕೆ ಎಂಬೆಲ್ಲಾ ಪ್ರಶ್ನೆ ಮೂಡಿದೆ. ಆದ್ರೆ, ಕಾರಣ ಏನೇ ಇದ್ರು, 9ನೇ ಕ್ಲಾಸ್ ಬಾಲಕನ ಸಾವು ಮಾತ್ರ ನಿಜಕ್ಕೂ ದುರಂತ. ಆದ್ರೆ, ಆತನ ಸಾವಿಗೆ ಕಾರಣವಾಗಿದ್ದು ಅದೇ 750 ರೂಪಾಯಿಯೇ ಕಾರಣವಾ ಎಂಬ ಪ್ರಶ್ನೆಯೂ ಮೂಡಿದೆ. ಪೊಲೀಸರ ನಿಷ್ಪಕ್ಷಪಾತವಾದ ತನಿಖೆಯಿಂದ ಬಾಲಕನ ಸಾವಿಗೆ ನ್ಯಾಯ ಸಿಗಬೇಕಿದೆ.

Malnad Times

Share
Published by
Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

11 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

15 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

15 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

17 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

18 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

1 day ago