ಕೊಪ್ಪ: ಹಾಸನಕ್ಕೆ ಹೋಗುತ್ತೇನೆ ಅಷ್ಟೆ. ಕಾರ್ಯಕರ್ತರನ್ನು ಭೇಟಿ ಮಾಡಲ್ಲ. ಸಮಾನ ಮನಸ್ಕರನ್ನು ಕಚೇರಿಗೆ ಬರಲು ಹೇಳಿದ್ದೇನೆ. ಜನರಲ್ಲಿ ಬೇರೆ ಭಾವನೆ ಬರದಬಾರದು ಅಂತ ಬರಲು ಹೇಳಿದ್ದೆ. ನಮ್ಮ ಪಕ್ಷದ ಬಗ್ಗೆ ಯಾರೂ ಬೆಟ್ಟು ಮಾಡುವಂತಿಲ್ಲ. ಹಾಸನದ ಗೊಂದಲದ ಬಗ್ಗೆ ಕಾರ್ಯಕರ್ತರ ಬಳಿ ಸಮಾಲೋಚನೆ ಮಾಡಲು ಬರ ಹೇಳಿದ್ದೆ ಅಷ್ಟೇ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದರು.
ಇಂದಿನ ಸಭೆ ರದ್ದಾಗಿದೆ ಎಂಬ ವಿಚಾರ ನನಗೆ ಗೊತ್ತಿಲ್ಲ. ಟಿಕೆಟ್ ವಿಚಾರದಲ್ಲಿ ನನ್ನ ತೀರ್ಮಾನವೇ ಅಂತಿಮ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಹಾಸನದ ಜೆಡಿಎಸ್ ಟಿಕೆಟ್ ಹಂಚಿಕೆ ವಿಚಾರವಾಗಿ ಚರ್ಚಿಸಲು ಭಾನುವಾರ ಕರೆದಿರುವ ಸಭೆ ರದ್ದಾಗಿದೆ ಎಂಬ ಸುದ್ದಿ ಹಬ್ಬಿತ್ತು. ಈ ಸಂಬಂಧ ದೇವರಾಜ್ ಎಂಬುವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ ಎನ್ನಲಾಗಿತ್ತು.
ಕೊಪ್ಪ ತಾಲೂಕಿನ ಹರಂದೂರು ಗ್ರಾಮದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ವಿಚಾರವಾಗಿ ಮಾಜಿ ಪ್ರಧಾನಿ ಹೆಚ್. ಡಿ ದೇವೇಗೌಡರ ಜೊತೆ ಮಾತನಾಡಿಲ್ಲ. ಬೇರೆಯವರಿಗೆ ದೇವೇಗೌಡರ ಆರೋಗ್ಯ ಬಗೆ ಕಾಳಜಿ ಇಲ್ಲ. ಹೆಚ್.ಡಿ.ದೇವೇಗೌಡರ ಆರೋಗ್ಯವನ್ನು ಕೆಡಿಸಲು ಬಯಸಲ್ಲ. ಹಾಸನ ಟಿಕೆಟ್ ಗೊಂದಲ ಬಗೆಹರಿಸುವ ಶಕ್ತಿ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಮೆಡಿಕಲ್ ಕಾಲೇಜ್ ಅಸಿಸ್ಟೆಂಟ್ ಪ್ರೊಫೆಸರ್ ನೇಮಕಕ್ಕೆ 50 ಲಕ್ಷ ರೂ. ಹಣ ಕೇಳಿಲ್ವಾ
ಹೆಚ್.ಡಿ ಕುಮಾರಸ್ವಾಮಿ ಗಾಳಿಯಲ್ಲಿ ಗುಂಡು ಹೊಡೆಯುವ ಹೇಳಿಕೆ ನೀಡುತ್ತಾರೆ ಎಂಬ ಸಚಿವ ಸುಧಾಕರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಿನ್ನೆ ಮೊನ್ನೆ ಬಿಜೆಪಿಗೆ ಸೇರಿಕೊಂಡು ಏನೇನೊ ಮಾತನಾಡುತ್ತಾನೆ. ಮೆಡಿಕಲ್ ಕಾಲೇಜಿಗೆ ವೈದ್ಯರನ್ನು ನೇಮಕ ಮಾಡಲು 20 ರಿಂದ 30 ಲಕ್ಷ ರೂ. ದುಡ್ಡು ವಸೂಲಿ ಮಾಡುತ್ತಾರೆ. ಆಸ್ಪತ್ರೆಯ ಪರಿಸ್ಥಿತಿ ಹೇಗಿದೆ ಅನ್ನುವುದು ಎಲ್ಲರಿಗೂ ಗೊತ್ತಿದೆ. ಬಿಜೆಪಿಯ ವಿಧಾನಪರಿಷತ್ ಸದಸ್ಯನ ಮಗಳಿಗೆ ಎಷ್ಟು ಲಕ್ಷ ಕೇಳಿದ್ರಿ? ಮೆಡಿಕಲ್ ಕಾಲೇಜ್ ಅಸಿಸ್ಟೆಂಟ್ ಪ್ರೊಫೆಸರ್ ನೇಮಕಕ್ಕೆ 50 ಲಕ್ಷ ರೂಪಾಯಿ ಹಣ ಕೇಳಿಲ್ವಾ ? ಎಂದು ಸಚಿವ ಡಾ. ಕೆ ಸುಧಾಕರ್ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಾಗ್ದಾಳಿ ಮಾಡಿದರು.
ಮುಖ್ಯಮಂತ್ರಿಗಳ ಬಳಿ 50 ಲಕ್ಷ ಎಲ್ಲಿಂದ ತರೋದು ಅಂತ ಕಂಪ್ಲೇಂಟ್ ಮಾಡಿಲ್ವಾ?. ಭ್ರಷ್ಟಾಚಾರದ ಬಗ್ಗೆ ನಾನು ಚರ್ಚೆ ಮಾಡುತ್ತಿಲ್ಲ. ಕಾಂಗ್ರೆಸ್ಗೂ ನನಗೂ ವ್ಯತ್ಯಾಸ ಇದೆ. ಬೇಕು ಅಂದರೇ ದಾಖಲೆ ಸಮೇತ ಕೊಡುತ್ತೇನೆ. ಯಡಿಯೂರಪ್ಪ ಕೆಜೆಪಿ ಕಟ್ಟಿದಾಗ ಆಗ ಯಾರೆಲ್ಲ ಆರೋಪ ಮಾಡಿದರು.
ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ ಮತ್ತು ಸದಾನಂದಗೌಡ ಮಾಡಿದ ಆರೋಪಗಳ ಪೇಪರ್ ಕಟಿಂಗ್ಸ್ ಇದೆ. 5 ಕೋಟಿ ಚೆಕ್ ವ್ಯವಹಾರದಲ್ಲಿ ಸದಾನಂದಗೌಡರದ್ದೇ ಸಹಿ ಇದೆ. ನಾನು ಸಾಬೀತು ಮಾಡದೆ ಇದ್ದರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಅಂತ ಯಡಿಯೂರಪ್ಪ ಹೇಳಿಲ್ವಾ? ಎಂದು ಪ್ರಶ್ನಿಸಿದರು.
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಶೇ.75.02 ರಷ್ಟು ಮತದಾನ ನಡೆದಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ…
ಶಿವಮೊಗ್ಗ : ಏ.30ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಶಿವಮೊಗ್ಗ ಆಗಮಿಸಲಿದ್ದು ರಾಷ್ಟ್ರೀಯತೆಯ ಬಗ್ಗೆ ಕಾರ್ಯಕರ್ತರಲ್ಲಿ ಹುಮ್ಮಸ್ಸು…
ರಿಪ್ಪನ್ಪೇಟೆ: ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ…
ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ..... ಶೃಂಗೇರಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಫಿನಾಡು ವಿಶೇಷತೆಗಳಿಗೆ…
ಹೊಸನಗರ : ಏ. 26 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಶಿವಮೊಗ್ಗ : ಮೇ 2ರಂದು ಕಾಂಗ್ರೆಸ್ ನಾಯಕ ರಾಹುಲ್ಗಾಂಧಿ ನಗರದ ಫ್ರೀಡಂ ಪಾರ್ಕ್ನಲ್ಲಿ ಗೀತಾಶಿವರಾಜ್ಕುಮಾರ್ ಬಹಿರಂಗ ಪ್ರಚಾರ ಮಾಡಲಿದ್ದಾರೆ ಎಂದು…