ಜಮೀನು ರಸ್ತೆ ವಿವಾದ ಕೊಲೆಯಲ್ಲಿ ಅಂತ್ಯ !

ಮೂಡಿಗೆರೆ: ಜಮೀನಿನ ರಸ್ತೆಗೆ ಸಂಬಂಧಿಸಿದಂತೆ ನಡೆಯುತ್ತಿದ್ದ ವಿವಾದಕ್ಕೆ ಯುವಕನೋರ್ವ ಬಲಿಯಾದ ಘಟನೆ ನಡೆದಿದೆ.

ಮೂಡಿಗೆರೆ ತಾಲೂಕಿನ ಚಿಕ್ಕಳ್ಳ ಗ್ರಾಮದ ಪ್ರವೀಣ್ (46) ಕೊಲೆಯಾದ ಯುವಕ. ರಸ್ತೆಗೆ ಸಂಬಂಧಿಸಿದಂತೆ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ವಿವಾದ ನಡೆಯುತ್ತಿತ್ತು.

ಮೇ.5 ರ ಬೆಳಿಗ್ಗೆ ತನ್ನ ಜಮೀನಿನಲ್ಲಿ ಹಾದುಹೋಗಿದ್ದ ವಿವಾದಿತ ರಸ್ತೆಯಲ್ಲಿ ವಿರೋಧಿ ಗುಂಪಿನವರು ಕೆಲಸ ಮಾಡುತ್ತಿದ್ದಾಗ ಅದನ್ನು ಪ್ರಶ್ನಿಸಲು ಬಂದ ಪ್ರವೀಣ್ ಮೇಲೆ ಗುಂಪು ಕತ್ತಿ ಹಾರೆಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು ಎಂದು ತಿಳಿದು ಬಂದಿದೆ. ಹಲ್ಲೆಯಾದ ಪರಿಣಾಮ ತೀವ್ರ ಗಾಯಗೊಂಡಿದ್ದ ಪ್ರವೀಣ್ ಕೊನೆಯುಸಿರೆಳೆದಿದ್ದಾರೆ.

ಈ ಸಂದರ್ಭದಲ್ಲಿ ಪ್ರವೀಣ್ ಅವರ ತಂದೆ ಲಕ್ಷ್ಮಣಗೌಡ ಅವರ ಬಲಗೈಗೂ ತೀವ್ರ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.

ಗ್ರಾಮದಲ್ಲಿ ರಸ್ತೆಗೆ ಸಂಬಂಧಿಸಿದಂತೆ ಕೆಲ ವರ್ಷಗಳಿಂದ ವಿವಾದ ನಡೆಯುತ್ತಿತ್ತು, ಕೆಲ ತಿಂಗಳ ಹಿಂದೆ ಪರಸ್ಪರ ಎರಡು ಕಡೆಯವರ ನಡುವೆ ಹೊಡೆದಾಟ ನಡೆದಿತ್ತು.

ಆಲ್ದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಚಿಕ್ಕಮಗಳೂರು ಆಸ್ಪತ್ರೆ ಸಾಗಿಸಲಾಗಿದೆ. ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,803FollowersFollow
0SubscribersSubscribe
- Advertisement -spot_img

Latest Articles

error: Content is protected !!