Categories: Mudigere

Heavy Rain | Chikkamagaluru | ಕಾಫಿನಾಡಿನ ಹಲವೆಡೆ ಬಿರುಗಾಳಿ ಸಹಿತ ಧಾರಾಕಾರ ಮಳೆ ; ಜನಜೀವನ ಅಸ್ತವ್ಯಸ್ಥ

ಮೂಡಿಗೆರೆ : ಕಾದ ಕಾವಲಿಯಂತಾಗಿದ್ದ ಕಾಫಿನಾಡಿನ ಮಲೆನಾಡು ಭಾಗಕ್ಕೆ ವರುಣದೇವ ಕೃಪೆ ತೋರಿದ್ದು, ಕಳೆದೊಂದು ಗಂಟೆಯಿಂದ ಮೂಡಿಗೆರೆ ತಾಲೂಕಿನ ಸುತ್ತಮುತ್ತ ಧಾರಾಕಾರವಾಗಿ ಆಲಿಕಲ್ಲು ಮಳೆ ಸುರಿಯುತ್ತಿತ್ತು ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬಣಕಲ್ ಬಾಳೂರು, ಹೊರಟ್ಟಿ, ಸಬ್ಬೇನಹಳ್ಳಿ ಸೇರಿದಂತೆ ಸುತ್ತಮುತ್ತ ಆಲಿಕಲ್ಲು ಸಮೇತ ಭಾರೀ ಮಳೆ ಸುರಿಯುತ್ತಿದೆ. ಮಳೆಗಾಗಿ ಆಕಾಶ ನೋಡುತ್ತಿದ್ದ ಮಲೆನಾಡಿಗರ ಮೊಗದಲ್ಲಿ ಮಂದಹಾಸ ಮೂಡಿದೆ.

ಭಾರಿ ಮಳೆ-ಗಾಳಿಯಿಂದ ಕೊಟ್ಟಿಗೆಹಾರ ಹಾಗೂ ಚಾರ್ಮಾಡಿ ಘಾಟಿಯಲ್ಲಿ ಅಲ್ಲಲ್ಲಿ ವಾಹನದಟ್ಟಣೆ ಕೂಡ ಉಂಟಾಗಿದೆ. ಮಲೆನಾಡಿಗರಿಗೆ ಮಳೆ ತೀರಾ ಅನಿವಾರ್ಯವಾಗಿತ್ತು.

ಮಳೆ ಇಲ್ಲದೆ ಬೆಳೆಗಾರರಿಗೆ ಕಾಫಿ, ಅಡಿಕೆ ಹಾಗೂ ಮೆಣಸನ್ನ ಉಳಿಸಿಕೊಳ್ಳುವುದೇ ಕಷ್ಟವಾಗಿತ್ತು. ಬೆಳೆಗಳಿಗೆ ನಿತ್ಯ ನೀರಿನ ಸೌಲಭ್ಯ ಕಲ್ಪಿಸುವುದು ಅಸಾಧ್ಯವಾಗಿತ್ತು. ಕಳೆದ ವರ್ಷ ಈ ವೇಳೆಯಲ್ಲಿ ಮಲೆನಾಡಲ್ಲಿ ಸಮೃದ್ಧ ಮಳೆಯಾಗಿತ್ತು. ಹಾಗಾಗಿ, ಮೇ ಮುಗಿಯುವ ಹಂತಕ್ಕೆ ಬಂದರೂ ಮಳೆಯಾಗದ್ದನ್ನ ಕಂಡು ಮಲೆನಾಡಿಗರು ಆತಂಕಕ್ಕೀಡಾಗಿದ್ದರು.

ನಿತ್ಯ ಸಂಜೆ ವೇಳೆಗೆ ಮೋಡ ಕಡುಗಟ್ಟುತ್ತಿದ್ದರು ಮಳೆಯಾಗುತ್ತಿರಲಿಲ್ಲ. ಇದೀಗ, ಭಾರೀ ಗುಡುಗು-ಸಿಡಿಲಿನ ಸಮೇತ ಧಾರಾಕಾರವಾಗಿ ಆಲುಕಲ್ಲು ಮಳೆ ಸುರಿಯುತ್ತಿದ್ದು ಮಲೆನಾಡಿಗರು ಸಂತಸಗೊಂಡಿದ್ದಾರೆ.

ಭಾರಿ ಮಳೆಯಿಂದ ಮಲೆನಾಡಿನ ಕೆಲಭಾಗದಲ್ಲಿ ಮರಗಳು ರಸ್ತೆಗೆ ಉಳಿರುವುದರಿಂದ ಗ್ರಾಮೀಣ ಭಾಗದ ಸಂಪರ್ಕ ಕವಿತಗೊಂಡಿದೆ. ವಿದ್ಯುತ್ ತಂತಿಗಳ ಮೇಲೆ ಮಳೆ ಗಾಳಿಗೆ ಮರಗಳು ಬಿದ್ದ ಪರಿಣಾಮ ಗ್ರಾಮೀಣ ಭಾಗದಲ್ಲಿ ಅಲ್ಲಲ್ಲಿ ವಿದ್ಯುತ್ ಸಂಪರ್ಕ ಕೂಡ ಕಡಿತಗೊಂಡಿದೆ.

Malnad Times

Recent Posts

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

7 hours ago

ಹೆಮ್ಮಕ್ಕಿ ಶ್ರೀ ಭದ್ರಕಾಳಿ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಜೀರ್ಣಾಷ್ಟಬಂಧ ಮತ್ತು ಬ್ರಹ್ಮ ಕಲಶಾಭಿಷೇಕ

ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…

9 hours ago

ರಜತ ಉತ್ಸವದ ಗಣಪತಿ ಮೂರ್ತಿಯನ್ನು ದೇವಸ್ಥಾನಕ್ಕೆ ಸಮರ್ಪಣೆ

ರಿಪ್ಪನ್‌ಪೇಟೆ: ನಾಳೆ ನಡೆಯುವ ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀಮನ್ಮಹಾರಥೋತ್ಸವಕ್ಕೆ ಇಲ್ಲಿನ ಗಣೇಶಪ್ರಸಾದ್ ಹೋಟೆಲ್‌ನ ದಿ.ರೇವತಿ ಹೆಬ್ಬಾರ್ ಮತ್ತು ಸತ್ಯನಾರಾಯಣ ಹೆಬ್ಬಾರ್ ಸ್ಮರಣಾರ್ಥ…

10 hours ago

ರಾಜಕೀಯದ ಪರಿಜ್ಞಾನವೇ ಇಲ್ಲದವರು ಸಂಸತ್‌ಗೆ ಹೋದರೆ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಹೇಗೆ ಸಾಧ್ಯ ; ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಳಿಕ ಹಿನ್ನಲೆಯ ಅರಿವೇ ಇಲ್ಲದೆ, ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ…

11 hours ago

ಒಂದೇ ಪರವಾನಗಿಯಲ್ಲಿ ಎರಡು ಕಡೆ ನಾಟಾ ಸಾಗಾಟ ; ಅಕ್ರಮದ ಶಂಕೆ !?

ಹೊಸನಗರ : ತಾಲೂಕಿನ ಪುಣಜೆ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ನಿರ್ಮಿಸುತ್ತಿರುವ ನೂತನ ಮನೆಗೆ ಅಕ್ರಮ ನಾಟಾ ಸರಬರಾಜು ಆಗಿರುವುದಾಗಿ ಸ್ಥಳೀಯ…

12 hours ago

ಗೀತಕ್ಕ ಗೆಲುವು ಕ್ಷೇತ್ರದ ಸ್ವಾಭಿಮಾನದ ಪ್ರಶ್ನೆ, ಪ್ರಚಾರ ಸಭೆಯಲ್ಲಿ ನಟ ದುನಿಯಾ ವಿಜಯ್ ಹೇಳಿಕೆ

ಸಾಗರ: ಕ್ಷೇತ್ರದ ಅಭಿವೃದ್ಧಿಗೆ ಆಸರೆಯಾಗಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಕೊಡುಗೆ ಮರೆಯಕೂಡದು. ಇಲ್ಲಿ ಗೀತಕ್ಕ ಅವರ ಗೆಲುವು…

14 hours ago