ಮೂಡಿಗೆರೆ : ಡ್ಯೂಟಿ ಮುಗೀತು ಬೇರೆಯವರು ಪೆಟ್ರೋಲ್ ಹಾಕ್ತಾರೆ ಎಂದಿದ್ದಕ್ಕೆ ವಾಹನ ಸವಾರನೊಬ್ಬ ಪೆಟ್ರೋಲ್ ಬಂಕ್ ಸಿಬ್ಬಂದಿಗಳನ್ನ ಅಟ್ಟಾಡಿಸಿ ಹೊಡೆದ ಘಟನೆ ತಾಲೂಕಿನ ಜನ್ನಾಪುರ ಗ್ರಾಮದ ನಯಾರ ಪೆಟ್ರೋಲ್ ಬಂಕ್ನಲ್ಲಿ ನಡೆದಿದೆ.
ಕಾರಿಗೆ ಪೆಟ್ರೋಲ್ ಹಾಕಿಸುವ ವಿಚಾರವಾಗಿ ವಾಹನ ಸವಾರ ಮಧು ಹುರುಡಿ ಎಂಬಾತ ಸಿಬ್ಬಂದಿಗಳ ಜೊತೆ ಕಿರಿಕ್ ತೆಗೆದು ಕಾರಿನಲ್ಲಿದ್ದ ಕ್ರಿಕೆಟ್ ಬ್ಯಾಟ್ನಿಂದ ಸಿಬ್ಬಂದಿಗಳ ಮೇಲೆ ಮನಬಂದಂತೆ ಹಲ್ಲೆ ಮಾಡಿದ್ದಾನೆ. ಪೆಟ್ರೋಲ್ ಬಂಕ್ ಮ್ಯಾನೇಜರ್ ಸೇರಿದಂತೆ ನಾಲ್ವರ ಮೇಲೆ ಮಧು ಹುರುಡಿ ಹಲ್ಲೆ ಮಾಡಿದ್ದಾನೆ. ಹಲ್ಲೆ ಮಾಡಿದ ದೃಶ್ಯವನ್ನ ಸ್ಥಳೀಯರು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ.
ಬಂಕ್ ಸಿಬ್ಬಂದಿ ಡ್ಯೂಟಿ ಮುಗಿಸಿ ಹೊರಡುವ ವೇಳೆ ವೇಳೆಗೆ ಕಾರಿನಲ್ಲಿ ಬಂದು ಪೆಟ್ರೋಲ್ ಹಾಕಲು ಹೇಳಿದ್ದಾನೆ. ಈ ವೇಳೆ ಡ್ಯೂಟಿ ಮುಗೀತು ಹೊರಟಿದ್ದೇನೆ, ಮಹಿಳೆ ಪೆಟ್ರೋಲ್ ಹಾಕ್ತಾರೆ ಎಂದಿದ್ದಕ್ಕೆ ಹಲ್ಲೆ ಮಾಡಿದ್ದಾನೆ.
ಈ ಸಂಬಂಧ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಕಾರು ಸವಾರ ಮಧು ಹುರುಡಿ ವಿರುದ್ಧ ಪ್ರಕರಣ ದಾಖಲಾಗಿದೆ.
ರಿಪ್ಪನ್ಪೇಟೆ : ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿಂದು ದರಗೆಲೆ ತರಲೆಂದು ಕಾಡಿಗೆ ತೆರಳಿದ್ದ ಕೂಲಿ ಕೆಲಸಗಾರ ತಿಮ್ಮಪ್ಪ…
ರಿಪ್ಪನ್ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ನಡೆದಿದೆ. ತಿಮ್ಮಪ್ಪ ಬಿನ್…
ರಿಪ್ಪನ್ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…
ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…
ರಿಪ್ಪನ್ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…