ಪತ್ನಿಯನ್ನು ಬಸ್ ಹತ್ತಿಸಿ ಬೈಕಿನಲ್ಲಿ ಬರುತ್ತೇನೆಂದು ಹೇಳಿದ ಪತಿ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿದ್ದ ಪತ್ತೆಯಾಗಿದ್ದ ಪ್ರಕರಣ ಭೇದಿಸಿದ ಪೊಲೀಸರು

0 46

ಮೂಡಿಗೆರೆ: ಏ.26 ರಂದು ಕೊಟ್ಟಿಗೆಹಾರದ ಸಮೀಪ ಹೆಬ್ಬರಿಗೆ ಎಂಬಲ್ಲಿ ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾದ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಘಟನೆ ಹಿನ್ನೆಲೆ:

ಬುಧವಾರ ಸಂಜೆ ಬಣಕಲ್-ಕೊಟ್ಟಿಗೆಹಾರ ಮಧ್ಯದ ಹೆಬ್ಬರಿಗೆ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಅಪರಿಚಿತ ಪುರುಷನ ಮೃತದೇಹವೊಂದು ಪತ್ತೆಯಾಗಿತ್ತು. ಅಲ್ಲದೆ ಅವರು ಚಲಾಯಿಸುತ್ತಿದ್ದ ಸ್ಕೂಟಿ ಚಾರ್ಮಾಡಿ ಘಾಟಿ ಬಳಿ ಪತ್ತೆಯಾಗಿತ್ತು.

ಮೃತ ವ್ಯಕ್ತಿ ಚಿಕ್ಕಮಗಳೂರು ಸಮೀಪದ ತೇಗೂರು ಮೂಲದ ದಿಲೀಪ ಎನ್ನಲಾಗಿದ್ದು ಅವರು ಧರ್ಮಸ್ಥಳದಲ್ಲಿ ಮುಡಿತೆಗೆಯುವ ಕಾಯಕ ಮಾಡುತ್ತಿದ್ದರು ಅಲ್ಲದೆ ಧರ್ಮಸ್ಥಳದಲ್ಲಿ ತಾನು ಕಟ್ಟಿಸಿದ ಮನೆಯ ಗೃಹಪ್ರವೇಶಕ್ಕೆ ಸಂಬಂಧಿಕರಿಗೆ ಆಹ್ವಾನ ಪತ್ರಿಕೆ ನೀಡಿ ಹೆಂಡತಿ ಮಕ್ಕಳೊಂದಿಗೆ ಸ್ಕೂಟಿಯಲ್ಲಿ ಉಜಿರೆಗೆ ಮರಳುತ್ತಿದ್ದಾಗ ಮಳೆ ಬಂದ ಪರಿಣಾಮ ಹೆಂಡತಿ ಮಕ್ಕಳನ್ನು ಬಸ್ಸಿನಲ್ಲಿ ಕಳುಹಿಸಿ ತಾನು ಸ್ಕೂಟಿಯಲ್ಲಿ ಬರುವುದಾಗಿ ಹೇಳಿ ಹೊರಟಿದ್ದರು ಆದರೆ ಅವರು ಧರ್ಮಸ್ಥಳಕ್ಕೆ ಬಾರದೆ ಹೆಬ್ಬರಿಗೆ ಸಮೀಪ ಮೃತಪಟ್ಟಿದ್ದರು ಈ ಕುರಿತು ಅಲ್ಲಿನ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಪ್ರಕರಣ ಭೇದಿಸಿದ ಪೊಲೀಸರು ಅಪಘಾತವೆಸಗಿದ್ದ ವಾಹನವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ತುಮಕೂರು ಜಿಲ್ಲೆಯ ಸಿರಾ ಮೂಲದ ಬೊಲೆಯೋ ಪಿಕಪ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಈ ವಾಹನವು ತರಕಾರಿ ಸಾಗಾಟ ಮಾಡುವುದಾಗಿದ್ದು, ಮಂಗಳೂರಿಗೆ ತರಕಾರಿ ತಲುಪಿಸಿ ವಾಪಾಸ್ಸು ಬರುತ್ತಿತ್ತು ಎನ್ನಲಾಗಿದೆ. ಚಾರ್ಮಾಡಿ ಸಮೀಪ ತಮ್ಮ ವಾಹನ ದಿಲೀಪ್ ಪ್ರಯಾಣಿಸುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದಿದೆ ಪರಿಣಾಮ ಗಾಯಗೊಂಡಿದ್ದ ದಿಲೀಪ್ ಅವರನ್ನು ತಮ್ಮದೇ ವಾಹನದಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ ಹೆಬ್ಬರಿಗೆ ಸಮೀಪ ಹೊಟ್ಟೆನೋವು ಮೂತ್ರವಿಸರ್ಜನೆ ಮಾಡಬೇಕು ಎಂದಾಗ ಅವರನ್ನು ಕೆಳಗೆ ಇಳಿಸಿದೆವು. ಮೂತ್ರ ವಿಸರ್ಜನೆಗೆ ಕುಳಿತವರು ಎಷ್ಟು ಕರೆದರು ಮೇಲೆ ಏಳಲಿಲ್ಲ. ಹಾಗಾಗಿ ಎದ್ದು ಸರಿಯಾಗಬಹುದು ಎಂದು ಹಾಗೆಯೇ ಬಿಟ್ಟು ಹೋದೆವು ಎಂದು ಹೇಳಿದ್ದಾರೆ.

ಆದರೆ ಹೊಟ್ಟೆಯ ಭಾಗಕ್ಕೆ ತೀವ್ರ ಹೊಡೆತ ಬಿದ್ದು ಅವರ ಲಿವರ್ ಗೆ ಪೆಟ್ಟಾಗಿತ್ತು ಎನ್ನಲಾಗಿದ್ದು, ನೋವನ್ನು ತಾಳಲಾರದೇ ರಸ್ತೆ ಬದಿಯಲ್ಲಿ ಒದ್ದಾಡಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಮೂಡಿಗೆರೆ ಸರ್ಕಲ್ ಇನ್ಸ್ ಪೆಕ್ಟರ್ ಸೋಮೇಗೌಡ, ಬಣಕಲ್ ಸಬ್ ಇನ್ಸ್ ಪೆಕ್ಟರ್ ಗಳಾದ ಜಂಬೂ ಮಹಾರಾಜನ್, ರನ್ನಗೌಡ ಪಾಟೀಲ್ ಅವರ ನೇತೃತ್ವದಲ್ಲಿ ಪ್ರಕರಣವನ್ನು ಬೇದಿಸಲಾಗಿದೆ.

Leave A Reply

Your email address will not be published.

error: Content is protected !!