ಮೂಡಿಗೆರೆ : ಪತ್ನಿಯನ್ನು ಬಸ್ಸು ಹತ್ತಿಸಿ ಬೈಕಿನಲ್ಲಿ ಬರುತ್ತೇನೆಂದು ಹೇಳಿದ ಪತಿ ಹೆಬ್ಬರಿಗೆ ಸಮೀಪ ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾದ ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹೆಬ್ಬರಿಗೆಯಲ್ಲಿ ಬುಧವಾರ ನಡೆದಿದೆ.
ಚಿಕ್ಕಮಗಳೂರು ತಾಲ್ಲೂಕಿನ ತೇಗೂರಿನ ದಿಲೀಪ್ (40) ಮೃತ ಪಟ್ಟ ವ್ಯಕ್ತಿ. ಧರ್ಮಸ್ಥಳದಲ್ಲಿ ಮುಡಿ ತೆಗೆಯುವ ಕಾರ್ಯ ಮಾಡುತ್ತಿದ್ದ ದಿಲೀಪ್ ಉಜಿರೆಯಲ್ಲಿ ವಾಸವಿದ್ದರು. ಪತ್ನಿಯೊಂದಿಗೆ ತೇಗೂರಿಗೆ ಬಂದಿದ್ದ ದಿಲೀಪ್ ಬುಧವಾರ ಬೈಕ್ನಲ್ಲಿ ಉಜಿರೆಗೆ ಹೊರಟ್ಟಿದ್ದು ಕೊಟ್ಟಿಗೆಹಾರ ಸಮೀಪ ಬರುತ್ತಿದ್ದಂತೆ ಮಳೆ ಪ್ರಾರಂಭವಾಗಿದ್ದರಿಂದ ಪತ್ನಿಯನ್ನು ಬಸ್ಸಿಗೆ ಹತ್ತಿಸಿ ಉಜಿರೆಗೆ ಹೋಗಿರಲು ಹೇಳಿ ತಾನು ಮಳೆ ನಿಂತ ಮೇಲೆ ಬೈಕ್ನಲ್ಲಿ ಬರುವುದಾಗಿ ತಿಳಿಸಿದ್ದಾರೆ.
ಬುಧವಾರ ಸಂಜೆ ಹೆಬ್ಬರಿಗೆ ಸಮೀಪ ರಸ್ತೆ ಬದಿಯಲ್ಲಿ ದಿಲೀಪ್ ಅವರ ಮೃತದೇಹ ಪತ್ತೆಯಾಗಿದೆ. ಮೃತದೇಹದ ಜೊತೆಗಿದ್ದ ಮೊಬೈಲ್ನಿಂದಾಗಿ ಮೃತದೇಹದ ಗುರುತು ಪತ್ತೆಯಾಗಿದ್ದು ಈ ಬಗ್ಗೆ ಸ್ಥಳಕ್ಕೆ ಬಣಕಲ್ ಪೊಲೀಸ್ ಠಾಣಾ ಪಿಎಸ್ಐ ಜಂಬೂರಾಜ್ ಮಹಾಜನ್, ಎಎಸ್ಐ ಶಶಿ, ಸಿಬ್ಬಂದಿಗಳಾದ ಜಗದೀಶ್ ಮುಂತಾದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಕೈಗೊಂಡಿದ್ದಾರೆ.
ಚಿಕ್ಕಮಗಳೂರು: ದತ್ತಪೀಠದಿಂದ ಮಾಣಿಕ್ಯಾಧಾರಕ್ಕೆ ತೆರಳುತ್ತಿದ ಪ್ರವಾಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ 100 ಅಡಿ ಕಂದಕಕ್ಕೆ ಉರುಳಿ ಬಿದ್ದು, ಆರು…
ಎನ್.ಆರ್.ಪುರ : ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ಮೇ ತಿಂಗಳ ಪ್ರವಾಸ…
ತೀರ್ಥಹಳ್ಳಿ : ಏ. 28 ಭಾನುವಾರ ಗುರುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ: ಭಾರತ ದೇಶದ ಪ್ರಜೆಗಳಾದ ನಾವು ಕಡ್ಡಾಯವಾಗಿ ಮತದಾನದಲ್ಲಿ ಭಾಗವಹಿಸಿ ಮತದಾನ ಮಾಡಬೇಕು. ಮತದಾನ ಮಾಡುವುದು ಪ್ರತಿಯೊಬ್ಬ ದೇಶದ ಪ್ರಜೆಯ…
ಹೊಸನಗರ: ತಾಲ್ಲೂಕಿನ ನಗರ ಹೋಬಳಿಯ ಯಡೂರು ಗ್ರಾಪಂ ವ್ಯಾಪ್ತಿಯ ಕವರಿಯ ಮಾಗಲು ಗ್ರಾಮ ಮೂಲಭೂತ ಸೌಲಭ್ಯದಿಂಸಸಹ ದ ವಂಚಿತವಾಗಿದೆ ಎಂದು…
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಶೇ.75.02 ರಷ್ಟು ಮತದಾನ ನಡೆದಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ…