ಮೂಡಿಗೆರೆ: ಒಂದು ವರ್ಷದ ಹಿಂದೆ ನಡೆದ ಸಹೋದರಿಯರಿಬ್ಬರ ಕಲಹ ಬೀದಿಗೆ ಬಂದು ಪೊಲೀಸ್ ಠಾಣೆ ಕಟ್ಟಡದ ಮೇಲಿನಿಂದ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪಟ್ಟಣದಲ್ಲಿ ನಡೆದಿದೆ.
ಕಳೆದ ವರ್ಷ ಶಿಲ್ಪ ಹಾಗೂ ಆಕೆಯ ಸಹೋದರಿ ನಡುವೆ ಜಗಳವಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದ ಶಿಲ್ಪ ವಿರುದ್ಧವೇ ಕೇಸ್ ದಾಖಲಾಗಿತ್ತು. ಕಳೆದ ಒಂದು ವರ್ಷದಿಂದ ಶಿಲ್ಪ ಕೋರ್ಟ್ಗೆ ಹಾಜರಾಗಿರಲಿಲ್ಲ. ಪರಿಣಾಮ ಕೋರ್ಟ್ನಿಂದ ಸಮನ್ಸ್ ಜಾರಿಯಾಗಿತ್ತು. ಕೋರ್ಟ್ನಿಂದ ನೀಡಿದ ಸಮನ್ಸ್ ಹಿಡಿದುಕೊಂಡು ಮೂಡಿಗೆರೆ ಪೊಲೀಸ್ ಠಾಣೆ ಏರಿ ಕೆಳಗೆ ಬಿದ್ದು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಹೆದರಿಸಿದ್ದಾಳೆ. ನಂತರ ಪೊಲೀಸ್ ಠಾಣಾ ಸಿಬ್ಬಂದಿ ಠಾಣೆ ಮಹಡಿ ಏರಿ ತಡೆದು ಕೆಳಗಿಳಿಸಿದ್ದಾರೆ. ಬಳಿಕ ಚಿಕ್ಕಮಗಳೂರಿನ ಆಕೆಯ ಮನೆಗೆ ಕಳುಹಿಸಿದ್ದಾರೆ ಎನ್ನಲಾಗಿದೆ.
ಶಿಲ್ಪನ ಹಿರಿಯ ಸಹೋದರಿಯ ಮನೆ ಮೂಡಿಗೆರೆ. ಹೀಗಾಗಿ ಆಕೆ ಇಲ್ಲಿ ಬಂದು ಹೈಡ್ರಾಮ ಸೃಷ್ಟಿಸಿದ್ದಾಳೆ.
ಇಬ್ಬರು ಸಹೋದರಿಯ ನಡುವೆ ಜಗಳವಾಗಿತ್ತು. ಅಕ್ಕ ಮತ್ತು ಬಾವ ತನಗೆ ಬೈದು ಹೊಡೆದಿದ್ದಾರೆ ಎಂದು ದೂರು ನೀಡಲು ಮೂಡಿಗೆರೆ ಪೊಲೀಸ್ ಠಾಣೆಗೆ ಬಂದಿದ್ದಳು. ಈ ವೇಳೆ ಠಾಣೆಯ ಮಹಿಳಾ ಸಿಬ್ಬಂದಿ ಸುಜಾತ ಎನ್ನುವವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಸಮವಸ್ತ್ರ ಹರಿದು ಎಳೆದಾಡಿದ್ದಳಂತೆ. ಹೀಗಾಗಿ ಠಾಣಾ ಸಿಬ್ಬಂದಿ ಸುಜಾತ 29-05-2022ರಂದು ಆಕೆಯ ವಿರುದ್ಧ ದೂರ ದಾಖಲಿಸಿದರು.
ಈ ಸಂಬಂಧ ಕೋರ್ಟ್ಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಕಳೆದ ಒಂದು ವರ್ಷದಿಂದ ಶಿಲ್ಪ ಕೋರ್ಟ್ಗೆ ಹಾಜರಾಗಿರಲಿಲ್ಲ. ಪರಿಣಾಮ ಕೋರ್ಟ್ನಿಂದ ಸಮನ್ಸ್ ಜಾರಿಯಾಗಿತ್ತು. ಕೋರ್ಟ್ನಿಂದ ನೀಡಿದ ಸಮನ್ಸ್ ಹಿಡಿದುಕೊಂಡು ಬಂದು ಮೂಡಿಗೆರೆ ಪೊಲೀಸ್ ಠಾಣೆಯ ಮೇಲೇರಿ ಅಲ್ಲಿಂದ ಕೆಳಗೆ ಬಿದ್ದು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಹೆದರಿಸಿದ್ದಾಳೆ.
ಸ್ಥಳೀಯರ ಮಾಹಿತಿ ಪ್ರಕಾರ ಶಿಲ್ಪ (28) ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದಳು ಎನ್ನಲಾಗಿದೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…