ಶ್ರೀ ರಂಭಾಪುರಿ ಜಗದ್ಗುರುಗಳಿಂದ ಮತದಾನ

0 40

ಎನ್.ಆರ್ ಪುರ: ವಿಧಾನಸಭಾ ಚುನಾವಣೆಯ ಮತದಾನದದ ಅಂಗವಾಗಿ ಬಾಳೆಹೊನ್ನೂರು ಶ್ರೀ ರಂಭಾಪುರಿ ಮಠದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಮತ ಚಲಾಯಿಸಿದರು.


ಮತದಾನದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಶ್ರೀ ಜಗದ್ಗುರುಗಳು, ಮತದಾನ ಪ್ರತಿಯೊಬ್ಬರ ಹಕ್ಕು. ಈ ಪವಿತ್ರ ಕಾರ್ಯದಲ್ಲಿ ಪ್ರತಿಯೊಬ್ಬರೂ ಪಾಲ್ಗೊಂಡು ಮತ ಚಲಾಯಿಸಬೇಕಾದುದು ಮತದಾರರ ಕರ್ತವ್ಯವಾಗಿದೆ ಎಂದರು. ಇದಕ್ಕಾಗಿ ಚುನಾವಣಾ ಆಯೋಗ ಮತದಾರರಿಗೆ ತೊಂದರೆಯಾಗದಂತೆ ಎಲ್ಲ ರೀತಿಯ ವ್ಯವಸ್ಥೆ ಮಾಡಿದ್ದು ಸಮಾಧಾನದ ವಿಷಯ ಎಂದರು.

Leave A Reply

Your email address will not be published.

error: Content is protected !!