ಎನ್.ಆರ್ ಪುರ: ದೀರ್ಘ ಕಾಲ ಜೊತೆಗಿದ್ದವರೆಲ್ಲ ಒಳ್ಳೆಯ ಸ್ನೇಹಿತರಲ್ಲ. ಕಷ್ಟ ಕಾಲದಲ್ಲಿ ಜೊತೆಗಿದ್ದವರೆ ನಿಜವಾದ ಸ್ನೇಹಿತರು. ಜ್ಞಾನ ಮತ್ತು ಸಂಸ್ಕಾರ ಮನುಷ್ಯ ಜೀವನದ ನಿಜವಾದ ಆಸ್ತಿಯೆಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.
ಅವರು ಶ್ರೀ ರಂಭಾಪುರಿ ಪೀಠದಲ್ಲಿ ಹುಣ್ಣಿಮೆ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.
ಮನುಷ್ಯ ಬದುಕಲು ಹಣದ ಅವಶ್ಯಕತೆಯಿದೆ. ಆದರ್ಶ ವ್ಯಕ್ತಿಯಾಗಿ ಬಾಳಲು ಸದ್ಗುಣ ಬೇಕು. ಕರುಣೆ ಇದ್ದವರಿಗೆ ಕಷ್ಟ ಒಳ್ಳೆಯವರಿಗೆ ದುಃಖ ಜಾಸ್ತಿಯಿರುತ್ತದೆ. ನೋವಿರದ ವ್ಯಕ್ತಿ ಯಾರೂ ಇಲ್ಲ. ಒಬ್ಬೊಬ್ಬರಿಗೆ ಒಂದು ರೀತಿ ನೋವು ಇರುವುದು ಸಹಜ. ನೋವಿನಲ್ಲೂ ಛಲದಿಂದ ಬಾಳುವುದೇ ನಿಜವಾದ ಜೀವನವಾಗಿದೆ. ಒಳ್ಳೆಯ ಕೆಲಸಗಳು ಎಂದಿಗೂ ವ್ಯರ್ಥವಾಗುವುದಿಲ್ಲ. ಅದರ ಫಲ ಇದ್ದೇ ಇರುತ್ತದೆ. ದೇಹ ಶುದ್ದಿ, ನುಡಿ ಶುದ್ಧಿ ಮತ್ತು ಮನಃ ಶುದ್ಧಿಯಿಂದ ಬಾಳಿದರೆ ಜೀವನದಲ್ಲಿ ಸುಖ ಶಾಂತಿ ಪ್ರಾಪ್ತವಾಗುವುದೆಂದು ಶ್ರೀ ಜಗದ್ಗುರು ರೇಣುಕಾಚಾರ್ಯರು ಜೀವಾತ್ಮರನ್ನು ಎಚ್ಚರಿಸಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ “ರಂಭಾಪುರಿ ಬೆಳಗು” ಮಾಸ ಪತ್ರಿಕೆಯನ್ನು ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣ ಸಚಿವ ಬಿ.ಸಿ.ನಾಗೇಶ ಬಿಡುಗಡೆ ಮಾಡಿ ಮಾತನಾಡಿ, ಜನ ಸಮುದಾಯದಲ್ಲಿ ಜಾಗೃತಿ ಮತ್ತು ಅರಿವು ಮೂಡಿಸಲು ಪತ್ರಿಕೆಗಳ ಅವಶ್ಯಕತೆಯಿದೆ. ಧಾರ್ಮಿಕ ಸಾಮಾಜಿಕ ಅರಿವು ಹಾಗೂ ರಾಷ್ಟ್ರ ಭಕ್ತಿ ಮೂಡಿಸುವ ನಿಟ್ಟಿನಲ್ಲಿ ರಂಭಾಪುರಿ ಬೆಳಗು ಪ್ರಮುಖ ಪಾತ್ರ ವಹಿಸಿದೆ ಎಂದು ಹರುಷ ವ್ಯಕ್ತಪಡಿಸಿದರು.
ಹುಲಿಕೆರೆ ದೊಡ್ಡಮಠದ ವಿರೂಪಾಕ್ಷ ಶಿವಾಚಾರ್ಯ ಸ್ವಾಮಿಗಳು, ಕರ್ಪುರವಳ್ಳಿ ಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು, ಬಬಲಾದ ದಾನಯ್ಯ ದೇವರು, ಶ್ರೀ ಪೀಠದ ಆಡಳಿತಾಧಿಕಾರಿ ಎಸ್.ಬಿ.ಹಿರೇಮಠ, ಬೆಂಗಳೂರಿನ ಹಾಲ್ಜೇನು ವೀರಭದ್ರಯ್ಯ, ನ್ಯಾಮತಿ ಬಸವರಾಜ, ಬೆಂಗಳೂರಿನ ಬಾಳಯ್ಯ ಇಂಡಿಮಠ, ಬ್ಯಾಡಿಗಿ ರವೀಂದ್ರ ಮತ್ತು ಹುಬ್ಬಳ್ಳಿ ವೀರೇಶ ಪಾಟೀಲ ಉಪಸ್ಥಿತರಿದ್ದರು.
ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…
ರಿಪ್ಪನ್ಪೇಟೆ: ಇಂದು ಬೆಳಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ್ದ ರೈತ ತಿಮ್ಮಪ್ಬ ಎಂಬ ರೈತ ಆನೆ ದಾಳಿಗೆ ಬಲಿಯಾಗಿದ್ದು ಮೃತ…
ಹೊಸನಗರ : ಮೇ 03 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ರಿಪ್ಪನ್ಪೇಟೆ: ಭಕ್ತರು ಭಕ್ತಿಯಿಂದ ಪ್ರಾರ್ಥಿಸಿದರೆ ದೇವರು ನಮ್ಮ ಹೃದಯಗಳಲ್ಲಿ ನೆಲೆಸುತ್ತಾನೆ. ಶ್ರದ್ದಾಭಕ್ತಿಯಿಂದ ಭಗವಂತನ ನಾಮಸ್ಮರಣೆ ಮಾಡಿದರೆ ಶಾಂತಿ ನೆಮ್ಮದಿ ಕರುಣಿಸುತ್ತಾನೆಂದು…
ರಿಪ್ಪನ್ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಿಮಿತ್ತ ಮೇ…
ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…