ಎನ್.ಆರ್.ಪುರ : ನಾಯಿಯನ್ನು ನುಂಗಿ ಮುಂದೆ ಚಲಿಸಲಾಗದೇ ನರಳಾಡುತ್ತಿದ್ದ ಬೃಹತ್ ಗಾತ್ರದ ಹೆಬ್ಬಾವನ್ನು ತಾಲೂಕಿನ ಹಂತುವಾನಿ ಗ್ರಾಮದಲ್ಲಿ ರಕ್ಷಣೆ ಮಾಡಲಾಗಿದೆ.
15 ಅಡಿ ಉದ್ದ ಹಾಗೂ 60 ಕೆ.ಜಿ. ತೂಕವುಳ್ಳ ಹೆಬ್ಬಾವು ಹಂತುವಾನಿ ಗ್ರಾಮದ ಶ್ರೀಮತಿ ಎಂಬುವರ ಮನೆ ಪಕ್ಕದಲ್ಲಿ ಕಾಣಿಸಿಕೊಂಡಿತು. ನಾಯಿಯನ್ನು ನುಂಗಿದ್ದರಿಂದ ಓಡಾಡಲು ಆಗದೆ ಒಂದೇ ಕಡೆ ಮಲಗಿತ್ತು. ಮುಂದೆ ಚಲಿಸುವ ಪ್ರಯತ್ನ ಮಾಡಿದರೂ ಅದರ ಕೈಯಲ್ಲಿ ಆಗದೇ ನರಳಾಡುತ್ತಿತ್ತು.
ಹೆಬ್ಬಾವನ್ನು ನೋಡಿ ಶ್ರೀಮತಿ ಅವರು ತಕ್ಷಣ ಉರಗತಜ್ಞ ಹರೀಂದ್ರ ಅವರಿಗೆ ಕರೆ ಮಾಡಿ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ಹರೀಂದ್ರ ಅವರು ಅರಣ್ಯ ಅಧಿಕಾರಿ ರಾಘವೇಂದ್ರ ಅವರ ಸಮ್ಮುಖದಲ್ಲಿ ಹೆಬ್ಬಾವನ್ನು ರಕ್ಷಿಸಿ, ಮರಳಿ ಅರಣ್ಯಕ್ಕೆ ಬಿಡಲಾಯಿತು.
ಹೆಬ್ಬಾವನ್ನು ರಕ್ಷಣೆ ಮಾಡುತ್ತಿರುವ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಭಾರೀ ಗಾತ್ರ ಹಾವನ್ನು ನೋಡಿ ನೆಟ್ಟಿಗರು ಹುಬ್ಬೇರಿಸಿದ್ದಾರೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…