ಪೊಲೀಸ್ ಠಾಣೆ ಎದುರೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗುಂಪು ಘರ್ಷಣೆ ; ಲಘು ಲಾಠಿ ಪ್ರಹಾರ
ಎನ್.ಆರ್.ಪುರ: ತಾಲೂಕಿನ ಬಾಳೆಹೊನ್ನೂರು ಪಟ್ಟಣದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಹಲ್ಲೇ ಯತ್ನ ನಡೆದಿದ್ದು ಗುಂಪು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.
ಸಂಜೆ ವೇಳೆ ಪೊಲೀಸ್ ಠಾಣೆ ಎದುರು ಕೆಲವು ಯುವಕರು ಗುಂಪು ಕಟ್ಟಿಕೊಂಡು ಕಿಚ್ಚಬ್ಬಿ ಬಳಿಯ ಯುವಕನ ಮೇಲೆ ಹಲ್ಲೆ ನಡೆಸಲು ಮುಂದಾದ ವೇಳೆ ಸ್ಥಳದಲ್ಲಿದ್ದ ಪೊಲೀಸರು ತಡೆಯಲು ಮುಂದಾಗಿದ್ದಾರೆ. ಆಕ್ರೋಶಗೊಂಡಿದ್ದ ಯುವಕರು ಪೊಲೀಸರ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾರೆ. ತಕ್ಷಣ ಪೊಲೀಸರು ಯುವಕರನ್ನು ಠಾಣೆಗೆ ಕರೆದೊಯ್ದರು. ವಿಷಯ ತಿಳಿಯುತ್ತಿದ್ದಂತೆ ಠಾಣೆ ಎದುರು ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ನೆರೆದು ಪ್ರಕ್ಷುಬ್ಧ ವಾತಾವರಣ ಸೃಷ್ಟಿಸಿದರು.
ಘಟನೆ ಕೈ ಮೀರುವುದನ್ನು ತಿಳಿದ ಪೊಲೀಸರು ಗುಂಪು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿ, ಧ್ವನಿವರ್ಧಕದ ಮೂಲಕ ಎಚ್ಚರಿಕೆ ನೀಡಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ.