Categories: N.R pura

ಬದುಕನ್ನು ಪರಿಶುದ್ಧಗೊಳಿಸುವುದೇ ಸತ್ಪುರುಷರ ಗುರಿ ; ಶ್ರೀ ರಂಭಾಪುರಿ ಜಗದ್ಗುರುಗಳು

ಎನ್.ಆರ್.ಪುರ: ಆಗ ಬಾಳಿನ ನಿಜವಾದ ಸಂಪತ್ತು ಸಂಸ್ಕಾರ. ಸಂಸ್ಕಾರ ಸಂಸ್ಕೃತಿಯಿಲ್ಲದ ಮಾನವ ಜೀವನ ವ್ಯರ್ಥ. ಮಾನವೀಯತೆಯಿಂದ ದೈವತ್ವಕ್ಕೆ ಕರೆದೊಯ್ಯುವ ಮಾರ್ಗವೇ ಸಂಸ್ಕೃತಿ. ಮನುಷ್ಯನ ಬದುಕನ್ನು ಪರಿಶುದ್ಧಗೊಳಿಸುವುದೇ ಸತ್ಪುರುಷರ ಗುರಿಯಾಗಿದೆ ಎಂದು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.


ಅವರು ಗುರುವಾರ ಶ್ರೀ ಜಗದ್ಗುರು ರಂಭಾಪುರಿ ಪೀಠದಲ್ಲಿ ಜರುಗಿದ ಶ್ರಾವಣ ಪೂಜಾ ತಪೋನುಷ್ಠಾನ ಹಾಗೂ ಹುಣ್ಣಿಮೆ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.
ಜೀವನ ಸುಖ ದುಃಖಗಳ ಸಂಕಲನ. ಸುಖ ದು:ಖಗಳನ್ನು ಸಮಾನವಾಗಿ ಕಂಡು ನಡೆಯುವ ವ್ಯಕ್ತಿ ಜೀವನದಲ್ಲಿ ಶ್ರೇಯಸ್ಸನ್ನು ಕಾಣಬಲ್ಲ. ಒಡಕಿನಿಂದ ಧರ್ಮ ಸುಖ ಶಾಂತಿ ಮತ್ತು ಗೌರವಗಳು ಮಣ್ಣು ಪಾಲಾಗುವವು. ಆದರ್ಶ ವಿಚಾರಗಳನ್ನು ಅಳವಡಿಸಿಕೊಂಡು ಬಾಳಲು ಸತ್ಪುರುಷರ ಮಾರ್ಗದರ್ಶನ ಅವಶ್ಯಕವಾಗಿದೆ. ಮನುಷ್ಯ ಲೌಕಿಕ ಮತ್ತು ಪಾರಮಾರ್ಥಿಕಗಳೆರಡನ್ನು ಅನುಸರಿಸಿ ಬಾಳಬೇಕಾಗುತ್ತದೆ. ಇವುಗಳನ್ನು ಅರಿತು ಬಾಳಲೆಂದೇ ಧರ್ಮ, ದೇವರು ಮತ್ತು ಗುರು ಮಾರ್ಗದರ್ಶನ ಮನುಷ್ಯನ ಜೀವನದಲ್ಲಿ ಹೊಸ ಬೆಳಕು ಮೂಡಿಸುತ್ತದೆ ಎಂದು ಶ್ರೀ ಜಗದ್ಗುರು ರೇಣುಕಾಚಾರ್ಯರ ರೇಣುಕ ಗೀತೆಯಲ್ಲಿ ಬೋಧಿಸಿದ್ದಾರೆ. ಮನುಷ್ಯ ಆಸ್ತಿ ಅಧಿಕಾರ ಕಳೆದುಕೊಂಡಾಗ ಬಡವನಾಗುವುದಿಲ್ಲ. ಆದರೆ ಆತ್ಮೀಯರನ್ನು ಕಳೆದುಕೊಂಡಾಗ ಬಡವನಾಗುತ್ತಾನೆ. ನಿಂತ ನೀರಿನಲ್ಲಿ ಕ್ರಿಮಿಗಳು ಹುಟ್ಟುವಂತೆ ಕೆಲಸವಿಲ್ಲದ ಮನುಷ್ಯನಲ್ಲಿ ಕೆಟ್ಟ ವಿಚಾರಗಳು ಹುಟ್ಟುತ್ತವೆ. ಸತ್ಯ ಶುದ್ಧ ಧರ್ಮ ದಾರಿಯಲ್ಲಿ ನಡೆದರೆ ಬಾಳು ಉಜ್ವಲಗೊಳ್ಳುವುದೆಂದರು.

ಇದೇ ಸಂದರ್ಭದಲ್ಲಿ ಕೂಡ್ಲಿಗಿ ತಾಲೂಕಿನ ಆಲೂರು ಹಿರೇಮಠದಿಂದ ಮುದ್ರಣಗೊಂಡ ಶ್ರೀ ಉಜ್ಜಯಿನಿ ಜಗದ್ಗುರು ಮರುಳಸಿದ್ಧೇಶ್ವರ ಲೀಲಾಮೃತ ಕೃತಿಯನ್ನು ಶ್ರೀ ರಂಭಾಪುರಿ ಜಗದ್ಗುರುಗಳು ಬಿಡುಗಡೆಗೊಳಿಸಿದರು.
ಶ್ರೀ ಜಗದ್ಗುರು ರೇಣುಕ ವಿಜಯ ಪುರಾಣ ಪ್ರವಚನ ಮಾಡಿದ ಮಾದನ ಹಿಪ್ಪರಗಿ ಶಾಂತವೀರ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ ಮನುಷ್ಯನಿಗೆ ಎಷ್ಟು ಗಳಿಸಿದರೂ ತೃಪ್ತಿಯಿರುವುದಿಲ್ಲ. ಮನುಷ್ಯನಿಗೆ ಸಂಪತ್ತಿನಿಂದ ಶಾಂತಿ ಸಿಗುವುದಿಲ್ಲ. ಅಧಿಕಾರ ಅಂತಸ್ತಿನಿಂದ ಸಂತೃಪ್ತಿ ಸಿಗುವುದಿಲ್ಲ. ಆಚಾರ್ಯರ ಋಷಿಮುನಿಗಳ ಮೌಲ್ಯ ತುಂಬಿದ ಮಾತುಗಳು ಬದುಕಿಗೆ ಉನ್ನತಿಯನ್ನು ತಂದು ಕೊಡಬಲ್ಲವು. ಶ್ರೀ ಜಗದ್ಗುರು ರೇಣುಕಾಚಾರ್ಯರ ವಿಶ್ವ ಬಂಧುತ್ವ ಶಾಂತಿ ಸಂದೇಶ ಸಾಮರಸ್ಯ ಬದುಕಿಗೆ ಬಹು ದೊಡ್ಡ ಶಕ್ತಿ ಎಂದರು.


ಈ ಪವಿತ್ರ ಸಮಾರಂಭದಲ್ಲಿ ದೇವರಭೂಪುರದ ಅಭಿನವ ಗಜದಂಡ ಶಿವಾಚಾರ್ಯರು, ಬೀರೂರಿನ ರುದ್ರಮುನಿ ಶಿವಾಚಾರ್ಯರು, ಮಾದಿಹಳ್ಳಿ ಚನ್ನಮಲ್ಲಿಕಾರ್ಜುನ ಶಿವಾಚಾರ್ಯರು, ಪಾಲ್ಗೊಂಡು ನುಡಿನಮನ ಸಲ್ಲಿಸಿದರು. ದೇವರ ಹಿಪ್ಪರಗಿ ಸದಯ್ಯನಮಠದ ಶ್ರೀಗಳು, ಕೂಡ್ಲಿಗಿ ತಾಲೂಕ ಆಲೂರು ನಿರಂಜನ ದೇವರು, ಸಿದ್ಧಲಿಂಗಯ್ಯಸ್ವಾಮಿ, ಬುಕ್ಕಾಂಬುಧಿ ಎಸ್.ಎಂ.ವೀರಭದ್ರಪ್ಪ, ಲಿಂಗಸುಗೂರಿನ ಶಿವಕುಮಾರ ನಂದಿಕೋಲಮಠ, ಆಸಂದಿ ರುದ್ರಯ್ಯನವರು, ಬಾಬುಗೌಡ ವದ್ದಲ ಮೊದಲಾದ ಗಣ್ಯರು ಪಾಲ್ಗೊಂಡು ಶ್ರೀ ರಂಭಾಪುರಿ ಜಗದ್ಗುರುಗಳಿಂದ ಗುರುರಕ್ಷೆ ಸ್ವೀಕರಿಸಿದರು.


ಶ್ರೀ ಜಗದ್ಗುರು ರೇಣುಕಾಚಾರ್ಯ ಗುರಕುಲ ಸಾಧಕರಿಂದ ವೇದಘೋಷ, ಗಂಗಾಧರ ಹಿರೇಮಠ ಇವರಿಂದ ಭಕ್ತಿ ಗೀತೆ ಜರುಗಿತು. ಶಿಕ್ಷಕ ವೀರೇಶ ಕುಲಕರ್ಣಿ ನಿರೂಪಿಸಿದರು. ಸಮಾರಂಭದ ನಂತರ ಅನ್ನ ದಾಸೋಹ ಜರುಗಿತು.
ಪ್ರಾತಃಕಾಲ ಶ್ರೀ ಪೀಠದ ಎಲ್ಲ ದೈವಗಳಿಗೆ ವಿಶೇಷ ಪೂಜೆಗಳು ಜರುಗಿದವು.

Malnad Times

Share
Published by
Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

1 day ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

1 day ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

1 day ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

1 day ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

1 day ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

2 days ago