Categories: N.R pura

ಭದ್ರಾ ನದಿಯಲ್ಲಿ ಕಾಲು ಜಾರಿ ಬಿದ್ದ ಮಗನನ್ನು ರಕ್ಷಿಸಲು ಹೋಗಿ ತಂದೆ, ಮಗ ಇಬ್ಬರೂ ಸಾವು !

ಎನ್.ಆರ್ ಪುರ: ಮಾಗುಂಡಿ ಸಮೀಪ ಭದ್ರಾ ನದಿಯಲ್ಲಿ ಮುಳುಗಿ ತಂದೆ-ಮಗ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಶನಿವಾರ ಸಂಜೆ ನಡೆದಿದೆ.


ಮೃತರನ್ನು ಮೂಡಿಗೆರೆ ತಾಲೂಕಿನ ಹಂಡುಗುಳಿ ಗ್ರಾಮದ ಲೋಕೇಶ್ (40) ಮತ್ತು ಅವರ ಮಗ ಸಾತ್ವಿಕ್(13) ಎಂದು ಗುರುತಿಸಲಾಗಿದೆ.

ಮಾಗುಂಡಿ ಸಮೀಪದ ಹುಯಿಗೆರೆ ಗ್ರಾಮದಲ್ಲಿ ತಮ್ಮ ಸಂಬಂಧಿಕರ ಮನೆಗೆ ಸುಗ್ಗಿ ಹಬ್ಬಕ್ಕೆಂದು ಲೋಕೇಶ್ ತನ್ನ ಪತ್ನಿ ಹಾಗೂ ಮೂವರು ಮಕ್ಕಳೊಂದಿಗೆ ತೆರಳಿದ್ದರು. ಶನಿವಾರ ಸಂಜೆ ಇವರು ಸಂಬಂಧಿಕರ ಜೊತೆ ಮನೆಯ ಸಮೀಪದಲ್ಲೇ ಹರಿಯುತ್ತಿರುವ ಭದ್ರಾ ನದಿ ತೀರಕ್ಕೆ ತೆರಳಿದ್ದಾರೆ. ನದಿಯಲ್ಲಿ ಬಂಡೆಯೊಂದರ ಮೇಲೆ ನಿಂತಿದ್ದ ಸಾತ್ವಿಕ್ ಆಕಸ್ಮಿಕವಾಗಿ ಕಾಲುಜಾರಿ ನೀರಿಗೆ ಬಿದ್ದಿದ್ದಾನೆ. ಈ ವೇಳೆ ಮಗನನ್ನು ರಕ್ಷಿಸಲು ತಂದೆ ಲೋಕೇಶ್ ಸಹ ನದಿಗೆ ಹಾರಿದ್ದಾರೆ. ನೀರಿನ ಸೆಳೆತಕ್ಕೆ ಸಿಲುಕಿ ಇಬ್ಬರು ಮುಳುಗಿ ಸಾವನ್ನಪ್ಪಿದ್ದಾರೆ. ಇಬ್ಬರಿಗೂ ಈಜು ಬರುತ್ತಿರಲಿಲ್ಲ ಎಂದು ತಿಳಿದುಬಂದಿದೆ.

ಕುಟುಂಬದವರ ಕಣ್ಣೆದುರೆ ಇಬ್ಬರು ನೀರಿನಲ್ಲಿ ಮುಳುಗಿದ್ದು, ಅವರನ್ನು ರಕ್ಷಿಸಲು ಸಂಬಂಧಿಕರು ನಡೆಸಿದ ಪ್ರಯತ್ನ ವಿಫಲವಾಗಿದೆ.

ಮೃತದೇಹಗಳನ್ನು ಮೇಲೆತ್ತಿ ಮರಣೋತ್ತರ ಪರೀಕ್ಷೆ ನಡೆಸಿ ರಾತ್ರಿ ಹಂಡುಗುಳಿ ಗ್ರಾಮಕ್ಕೆ ತರಲಾಗಿದೆ.

ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Malnad Times

Recent Posts

ಚುನಾವಣಾ ಬಹಿಷ್ಕಾರದಿಂದ ಹಿಂದೆ ಸರಿದ ಈಚಲುಕೊಪ್ಪ, ಕಾಪೇರಮನೆ ಗ್ರಾಮಸ್ಥರು

ಹೊಸನಗರ: ತಾಲ್ಲೂಕಿನ ಪುರಪ್ಪೆಮನೆ ಗ್ರಾಪಂ ವ್ಯಾಪ್ತಿಯ ವ್ಯಾಪ್ತಿ ಹಲುಸಾಲೆ - ಮಳವಳ್ಳಿ, ಕಾಪೇರಮನೆ ಗ್ರಾಮದ ಗ್ರಾಮಸ್ಥರು ಸಾಗರ-ಹೊಸನಗರದ ಮಧ್ಯ ಭಾಗದಲ್ಲಿದ್ದು…

3 hours ago

ಆನೆ ದಾಳಿಯಿಂದ ಮೃತಪಟ್ಟ ರೈತನ ಕುಟುಂಬಕ್ಕೆ ತಕ್ಷಣ ₹ 15 ಲಕ್ಷ ಪರಿಹಾರ ನೀಡಿ ; ಹರತಾಳು ಹಾಲಪ್ಪ ಆಗ್ರಹ

ಹೊಸನಗರ: ಶುಕ್ರವಾರ ಬೆಳಿಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ ರೈತ ತಿಮ್ಮಪ್ಪ ಎಂಬ ವ್ಯಕ್ತಿಯ ಮೇಲೆ ಆನೆ ದಾಳಿ ಮಾಡಿದ್ದು…

4 hours ago

ಶಿವಮೊಗ್ಗ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಪರ ರೋಡ್ ಷೋ | ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ ; ಪ್ರದೀಪ್ ಈಶ್ವರ್

ಶಿವಮೊಗ್ಗ: ರಾಜ್ಯದ ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ. ಆದ್ದರಿಂದ ಕ್ಷೇತ್ರದ ಹಿತ ಕಾಯಲು ಗೀತಕ್ಕಗೆ ಮತ ನೀಡಿ, ಆಶೀರ್ವದಿಸಿ…

5 hours ago

ಬಂಗಾರಪ್ಪರ ಋಣ ತೀರಿಸಲು ಗೀತಾಗೆ ಮತ ನೀಡಿ ; ಮಧು ಬಂಗಾರಪ್ಪ

ಸೊರಬ : ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಬಡವರ ಪರವಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದರು. ಅವರ ಋಣವನ್ನು…

7 hours ago

ನೈರುತ್ಯ ಶಿಕ್ಷಕರ, ನೈರುತ್ಯ ಪದವೀಧರರ ಕ್ಷೇತ್ರಗಳಿಗೆ ಜೂ. 03 ರಂದು ಚುನಾವಣೆ | ಮತದಾರರ ಪಟ್ಟಿಗೆ ಹೆಸರು ನೊಂದಾಯಿಸಲು ಮೇ 6 ಕಡೆಯ ದಿನ

ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…

20 hours ago

ಆನೆ ದಾಳಿಯಿಂದ ಮೃತನಾದ ರೈತನ ಕುಟುಂಬಕ್ಕೆ 24 ಗಂಟೆಯೊಳಗೆ ಪರಿಹಾರ ನೀಡದಿದ್ದಲ್ಲಿ ಸರ್ಕಾರಕ್ಕೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಹಾಲಪ್ಪ

ರಿಪ್ಪನ್‌ಪೇಟೆ: ಇಂದು ಬೆಳಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ್ದ ರೈತ ತಿಮ್ಮಪ್ಬ ಎಂಬ ರೈತ ಆನೆ ದಾಳಿಗೆ ಬಲಿಯಾಗಿದ್ದು ಮೃತ…

20 hours ago