ಎನ್.ಆರ್ ಪುರ: ಸ್ವಾತಂತ್ರ್ಯ ದಿನಾಚರಣೆಯ ಈ ಸಂದರ್ಭದಲ್ಲಿ ರಾಷ್ಟ್ರದ ಐಕ್ಯತೆ ಸಾಮರಸ್ಯ ಕಾಪಾಡಿಕೊಂಡು ಹೋಗುವ ಸಂಕಲ್ಪ ನಮ್ಮದಾಗಬೇಕು ಎಂದು ಶ್ರೀ ರಂಭಾಪುರಿ ಜಗದ್ಗುರು ಡಾ. ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಅಭಿಪ್ರಾಯಪಟ್ಟರು.
ಅವರು ಮಂಗಳವಾರ ಶ್ರೀ ಜಗದ್ಗುರು ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನ ಪೀಠದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಶಿಕ್ಷಣ ಪ್ರತಿಷ್ಠಾನದಿಂದ ಜರುಗಿದ 77ನೇ ಸ್ವಾತಂತ್ರ್ಯ ದಿನಾಚರಣೆಯಂದು ರಾಷ್ಟ್ರ ಧ್ವಜಾರೋಹಣ ಮಾಡಿ ಆಶೀರ್ವಚನ ನೀಡುತ್ತಿದ್ದರು.
ಹಲವಾರು ಮುತ್ಸದ್ದಿಗಳ ದೇಶಪ್ರೇಮಿಗಳ ತ್ಯಾಗ ಬಲಿದಾನದಿಂದಾಗಿ ರಾಷ್ಟ್ರವು ಬ್ರಿಟಿಷ್ರ ದಾಸ್ಯದಿಂದ ಹೊರಬಂದು ಸ್ವತಂತ್ರವಾಗಿದೆ. ಸ್ವಾತಂತ್ರ್ಯದ ನಂತರ ಈ ದೇಶ ಪ್ರಗತಿ ಪಥದಲ್ಲಿ ನಡೆಯುತ್ತಿರುವುದು ಶುಭೋದಯದ ಸಂಕೇತವಾಗಿದೆ. ರಾಷ್ಟ್ರಧ್ವಜದಲ್ಲಿರುವ ಕೇಸರಿ ಬಿಳಿ ಹಸಿರು ಬಣ್ಣಗಳು ಭಾವೈಕ್ಯತೆಯ ಸಂಕೇತಗಳಾದರೆ ಅಶೋಕ ಚಕ್ರ ಅಹಿಂಸೆಯ ಶ್ರೇಷ್ಠತೆಯನ್ನು ಪ್ರತಿಪಾದಿಸುತ್ತಿದೆ. ವೈಯಕ್ತಿಕ ಹಿತಾಸಕ್ತಿಗಳಿಂದಾಗಿ ದೇಶದ ಸುಭದ್ರತೆಗೆ ಯಾವುದೇ ಧಕ್ಕೆಯಾಗಬಾರದು. ದೇಶದ-ನಾಡಿನ ಬಗ್ಗೆ ಪ್ರತಿಯೊಬ್ಬರಲ್ಲಿಯೂ ಸ್ವಾಭಿಮಾನ ಬೆಳೆದು ಬಂದದ್ದಾದರೆ ಎಂತಹ ಕಠಿಣ ಪರಿಸ್ಥಿತಿಯನ್ನು ಎದುರಿಸಬಹುದಾಗಿದೆ. ರಾಷ್ಟçದ ಎಲ್ಲ ಜನತೆ ಸುಖ ಸಂತೋಷಗಳಿಂದ ಬಾಳಲಿ, ದೇಶ ಉತ್ತರೋತ್ತರ ಅಭಿವೃದ್ಧಿ ಹೊಂದಲಿ ಎಂದು ಶ್ರೀ ರಂಭಾಪುರಿ ಜಗದ್ಗುರುಗಳು ಶುಭ ಹಾರೈಸಿದರು.
ಗ್ರಾಮ ಪಂಚಾಯತಿ ಸದಸ್ಯರಾದ ಮಹೇಶ್ ಆಚಾರ್, ಜಗದೀಶ್ಚಂದ್ರ, ಕೋಕಿಲಮ್ಮ, ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ದೈಹಿಕ ಶಿಕ್ಷಕ ನಿಜಗುಣಿ ಕಟ್ಟೇಗೌಡರ ಶ್ರೀ ರಂಭಾಪುರಿ ಜಗದ್ಗುರುಗಳನ್ನು ಆಹ್ವಾನಿಸಿ ಧ್ವಜಾರೋಹಣ ಮಾಡಲು ಸಹಕರಿಸಿದರು. ಶಾಲಾ ಮಕ್ಕಳಿಂದ ರಾಷ್ಟ್ರಗೀತೆ, ಮುಖ್ಯೋಪಾಧ್ಯಾಯಿನಿ ಸುಜಾತಾ ಅಳವಂಡಿ ಇವರಿಂದ ಸ್ವಾಗತ, ಶಿಕ್ಷಕ ವೀರೇಶ ಕುಲಕರ್ಣಿ ಇವರಿಂದ ನಿರೂಪಣೆ ಜರುಗಿತು.
ಚಿಕ್ಕಮಗಳೂರು: ದತ್ತಪೀಠದಿಂದ ಮಾಣಿಕ್ಯಾಧಾರಕ್ಕೆ ತೆರಳುತ್ತಿದ ಪ್ರವಾಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ 100 ಅಡಿ ಕಂದಕಕ್ಕೆ ಉರುಳಿ ಬಿದ್ದು, ಆರು…
ಎನ್.ಆರ್.ಪುರ : ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ಮೇ ತಿಂಗಳ ಪ್ರವಾಸ…
ತೀರ್ಥಹಳ್ಳಿ : ಏ. 28 ಭಾನುವಾರ ಗುರುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ: ಭಾರತ ದೇಶದ ಪ್ರಜೆಗಳಾದ ನಾವು ಕಡ್ಡಾಯವಾಗಿ ಮತದಾನದಲ್ಲಿ ಭಾಗವಹಿಸಿ ಮತದಾನ ಮಾಡಬೇಕು. ಮತದಾನ ಮಾಡುವುದು ಪ್ರತಿಯೊಬ್ಬ ದೇಶದ ಪ್ರಜೆಯ…
ಹೊಸನಗರ: ತಾಲ್ಲೂಕಿನ ನಗರ ಹೋಬಳಿಯ ಯಡೂರು ಗ್ರಾಪಂ ವ್ಯಾಪ್ತಿಯ ಕವರಿಯ ಮಾಗಲು ಗ್ರಾಮ ಮೂಲಭೂತ ಸೌಲಭ್ಯದಿಂಸಸಹ ದ ವಂಚಿತವಾಗಿದೆ ಎಂದು…
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಶೇ.75.02 ರಷ್ಟು ಮತದಾನ ನಡೆದಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ…