Categories: N.R pura

ಸಜ್ಜನರ ಒಡನಾಟದಿಂದ ಶ್ರೇಷ್ಠ ಫಲ ಪ್ರಾಪ್ತಿ ; ಶ್ರೀ ರಂಭಾಪುರಿ ಜಗದ್ಗುರುಗಳು

ಎನ್.ಆರ್.ಪುರ; ಸತ್ವ ಗುಣ ಬೆಳೆಸಿ ಮನಸ್ಸಿನ ಪರಿಶುದ್ಧತೆಯನ್ನು ಉಂಟು ಮಾಡಲು ಆರ‍್ಶ ವ್ಯಕ್ತಿಗಳ ಮರ‍್ಗರ‍್ಶನ ಅವಶ್ಯಕ. ಸಜ್ಜನ ಸತ್ಪುರುಷರು ಸ್ವಾರ್ಥಿಗಳಲ್ಲ ಅವರು ಲೋಕ ಚಿಂತಕರು. ಸಜ್ಜನರ ಒಡನಾಟದಿಂದ ಮನುಷ್ಯನಿಗೆ ಶ್ರೇಷ್ಠ ಫಲ ಪ್ರಾಪ್ತಿಯಾಗುತ್ತದೆ ಎಂದು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.


ಅವರು ಗುರುವಾರ ಶ್ರೀ ಜಗದ್ಗುರು ರಂಭಾಪುರಿ ಪೀಠದಲ್ಲಿ ಶ್ರಾವಣ ಮಾಸದ ಅಂಗವಾಗಿ ಜರುಗಿದ ಶ್ರೀ ಜಗದ್ಗುರು ರೇಣುಕ ವಿಜಯ ಪುರಾಣ ಪ್ರವಚನ ರ‍್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.
ವಿಚಾರ ವಿಮರ್ಶೆಗಳು ಸಂಸ್ಕೃತಿಯ ಮೇಲೆ ಹೊಸ ಬೆಳಕು ಮೂಡಿಸಬೇಕಲ್ಲದೇ ನಾಸ್ತಿಕರನ್ನಾಗಿ ಮಾಡಬಾರದು. ಎಲ್ಲ ರಂಗಗಳಲ್ಲಿ ಸಂಘಟನೆಗಳು ನಡೆಯಲಿ ಆದರೆ ಸಂರ‍್ಷಗಳು ನಡೆಯಬಾರದು. ಮನುಷ್ಯನ ವರ್ತನೆಗಳು ಅತಿರೇಕಗೊಂಡಾಗ ದೇವರು ಯಾವ ರೂಪದಲ್ಲಾದರೂ ಬಂದು ಅಹಂಕಾರವನ್ನು ನಾಶಗೊಳಿಸಬಲ್ಲ. ಕತ್ತಲನ್ನು ಮೀರಿ ಬೆಳಕು ನೀಡುವುದರಿಂದಲೇ ದೀಪಕ್ಕೊಂದು ಬೆಲೆ. ಕಷ್ಟಗಳನ್ನು ಮೀರಿ ಬೆಳೆದು ನಿಂತಾಗಲೇ ಬದುಕಿಗೊಂದು ಬೆಲೆ ಬರಲು ಸಾಧ್ಯವಾಗುತ್ತದೆ. ಎಳೆಯ ಬಿದಿರು ಸುಲಭವಾಗಿ ಮಣಿಯುತ್ತದೆ. ಆದರೆ ಬಲಿತ ಬಿದಿರು ಬಗ್ಗದು. ಹಾಗೆಯೇ ಎಳೆಯ ಮನಸ್ಸನ್ನು ತಿದ್ದಿ ತೀಡಬಹುದು. ಆದರೆ ಬಲಿತ ಮನಸ್ಸನ್ನು ತಿದ್ದುವುದು ಸುಲಭವಲ್ಲ. ಮನುಷ್ಯನಲ್ಲಿ ಪ್ರಾಪಂಚಿಕ ವಾಸನೆಗಳು ಸೋಂಕುವ ಮುನ್ನ ಯೋಗ್ಯ ಸಂಸ್ಕಾರ ಕೊಟ್ಟರೆ ಅವರನ್ನು ಸದ್ಗುಣಿಗಳನ್ನಾಗಿ ಮಾಡಲು ಸಾಧ್ಯವಾಗುವುದೆಂದು ಶ್ರೀ ಜಗದ್ಗುರು ರೇಣುಕಾಚಾರ್ಯರು ಸಿದ್ಧಾಂತ ಶಿಖಾಮಣಿ ರ‍್ಮ ಗ್ರಂಥದಲ್ಲಿ ಬೋಧಿಸಿದ್ದಾರೆ. ಬದುಕಿನ ಉನ್ನತಿಗೆ ರ‍್ಮ ಅಡಿಪಾಯವಾಗಿದ್ದು ಉತ್ತಮರ ಒಡನಾಟದಲ್ಲಿ ಬದುಕನ್ನು ಕಟ್ಟಿಕೊಳ್ಳಲು ಪ್ರಯತ್ನ ಮಾಡಬೇಕಾಗಿದೆ ಎಂದರು.


ಮಾದನ ಹಿಪ್ಪರಗಿ ಹಿರೇಮಠದ ಶಾಂತವೀರ ಶಿವಾಚಾರ್ಯ ಸ್ವಾಮಿಗಳು ಶ್ರೀ ಜಗದ್ಗುರು ರೇಣುಕ ವಿಜಯ ಪುರಾಣ ಪ್ರವಚನದಲ್ಲಿ ಮಾತನಾಡಿ ಚಿಂತೆಗಿಂತ ದೊಡ್ಡ ಕಾಯಿಲೆ ಇಲ್ಲ. ಖುಷಿಗಿಂತ ದೊಡ್ಡ ಔಷಧಿ ಯಾವುದು ಇಲ್ಲ. ಮನುಷ್ಯನ ಮನಸ್ಸು ವಿಷಯ ವಾಸನೆಗಳಲ್ಲಿ ಸಿಲುಕಿ ಸಂಕಷ್ಟಕ್ಕೆ ಒಳಗಾಗುತ್ತಿದ್ದಾನೆ. ಶ್ರೀ ಜಗದ್ಗುರು ರೇಣುಕಾಚಾರ‍್ಯರ ವಿಶ್ವ ಬಂಧುತ್ವದ ವಿಚಾರಗಳು ಸರ್ವ ಕಾಲಕ್ಕೂ ಸರ್ವರಿಗೂ ಅನ್ವಯಿಸುತ್ತವೆ ಎಂದರು.


ಚಿಕ್ಕಮಗಳೂರಿನ ಶ್ರೀ ಜಗದ್ಗುರು ರೇಣುಕಾಚರ‍್ಯ ಟ್ರಸ್ಟಿನ ಖಜಾಂಚಿ ಉಪ್ಪಳ್ಳಿ ಬಸವರಾಜ, ಆಲ್ದೂರು ಬಿ.ಬಿ.ರೇಣುಕರ‍್ಯರು, ಕೆ.ವೀರರಾಜ್, ಎ.ಎಸ್.ಸೋಮಶೇಖರಯ್ಯ, ಎಂ.ಡಿ.ಪುಟ್ಟಸ್ವಾಮಿ, ಎಸ್.ಎಂ.ದೇವಣ್ಣಗೌಡ, ಬಿ.ಎ.ಶಿವಶಂಕರ, ಅ.ಭಾ.ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಹೆಚ್.ಎಂ.ಲೋಕೇಶ, ಹಗರಿಬೊಮ್ಮನಹಳ್ಳಿ ತಿಪ್ಪೆಸ್ವಾಮಿ ಮೊದಲಾದ ಗಣ್ಯರು ಪಾಲ್ಗೊಂಡು ಶ್ರೀ ರಂಭಾಪುರಿ ಜಗದ್ಗುರುಗಳಿಂದ ಆಶರ‍್ವಾದ ಪಡೆದರು.


ಶ್ರೀ ಜಗದ್ಗುರು ರೇಣುಕಾಚರ‍್ಯ ಗುರುಕುಲ ಸಾಧಕರಿಂದ ವೇದಘೋಷ, ಶಿವಮೊಗ್ಗದ ಶಾಂತಾ ಆನಂದ ಇವರಿಂದ ಭಕ್ತಿ ಗೀತೆ ಜರುಗಿತು. ಶಿಕ್ಷಕ ವೀರೇಶ ಕುಲಕರ್ಣಿ ನಿರೂಪಿಸಿದರು. ಸಮಾರಂಭದ ನಂತರ ಅನ್ನ ದಾಸೋಹ ಜರುಗಿತು. ಇದೇ ಸಂದರ್ಭದಲ್ಲಿ ಚಿಕ್ಕಮಗಳೂರು ಶ್ರೀ ಜಗದ್ಗುರು ರೇಣುಕಾಚಾರ್ಯ ಟ್ರಸ್ಟ್‌ನ 185ನೇ ವಾರ್ಷಿಕ ಸಮಾವೇಶ ಶ್ರೀ ರಂಭಾಪುರಿ ಜಗದ್ಗುರುಗಳವರ ಸಾನ್ನಿಧ್ಯದಲ್ಲಿ ಜರುಗಿ ಕೆಲವು ಮಹತ್ವಪೂರ್ಣ ನಿರ್ಣಯಗಳನ್ನು ಕೈಗೊಳ್ಳಲಾಯಿತು.


ಬೆಳಿಗ್ಗೆ ಶ್ರೀ ಪೀಠದ ಎಲ್ಲ ದೈವಗಳಿಗೆ ಶ್ರಾವಣ ವಿಶೇಷ ಪೂಜೆ ಜೊತೆಗೆ ಶ್ರೀ ರಂಭಾಪುರಿ ಜಗದ್ಗುರುಗಳು ಇಷ್ಟಲಿಂಗ ಮಹಾಪೂಜೆ ನೆರವೇರಿಸಿ ಶುಭ ಹಾರೈಸಿದರು.

Malnad Times

Share
Published by
Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

17 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

21 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

21 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

23 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

23 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

1 day ago