ನರಸಿಂಹರಾಜಪುರ : ನೂತನವಾಗಿ ನಿರ್ಮಿಸಿರುವ ಸೇತುವೆ ಬಳಿ ಎರಡು ಗೋವುಗಳ ತಲೆ, ಎಂಟು ಕಾಲು ಹಾಗೂ ಮೂಳೆಗಳು ಪತ್ತೆಯಾಗಿರುವ ಘಟನೆ ತಾಲೂಕಿನ ಮಾಗುಂಡಿ ಬಳಿ ಬೆಳಕಿಗೆ ಬಂದಿದೆ.
ಪ್ರತಿ ಮಳೆಗಾಲದಲ್ಲೂ ಮಾಗುಂಡಿ ಸಮೀಪದ ಮಹಲ್ಗೋಡು ಸೇತುವೆ ಸಂಪೂರ್ಣ ಮುಳುಗುತ್ತಿತ್ತು. ಯಾವ ಮಟ್ಟಕ್ಕೆ ಅಂದ್ರೆ ದಿನಕ್ಕೆ ಐದಾರು ಬಾರಿ ಗಂಟೆಗಟ್ಟಲೇ ಸೇತುವೆ ಮೇಲೆ ಐದಾರು ಅಡಿ ನೀರು ಹರಿಯುತ್ತಿತ್ತು. ಬಾಳೆಹೊನ್ನೂರು-ಕಳಸ ಮುಖ್ಯ ಮಾರ್ಗದ ಈ ರಸ್ತೆಯಲ್ಲಿ ಗಂಟೆಗಟ್ಟಲೇ ವಾಹನ ಸಂಚಾರ ಕೂಡ ಜಾಮ್ ಆಗುತ್ತಿತ್ತು. ಹಾಗಾಗಿ, ಸ್ಥಳಿಯರ ಹಲವು ವರ್ಷಗಳ ಬೇಡಿಕೆಯಂತೆ ಈ ಬಾರಿ ಈ ಮಹಲ್ಗೋಡು ಗ್ರಾಮಕ್ಕೆ ಹೊಸ ಸೇತುವೆ ನಿರ್ಮಾಣವಾಗಿದೆ. ಊರಿನಿಂದ ಸ್ವಲ್ಪ ದೂರದಲ್ಲಿ ಇರುವ ಈ ಸೇತುವೆ ದನಗಳ್ಳರಿಗೆ ವರದಾನವಾದಂತೆ ಕಾಣುತ್ತಿದೆ. ಏಕೆಂದರೆ, ಜಿಲ್ಲೆಯ ಮಲೆನಾಡು ಭಾಗದಲ್ಲಿ ದನಗಳ್ಳರ ಹಾವಳಿ ಹೊಸತೇನಲ್ಲ. ದಶಕಗಳಿಂದ ನೂರಾರು ರಾಸುಗಳು ದನಗಳ್ಳರ ಪಾಲಾಗಿವೆ. ಕಾರುಗಳಲ್ಲಿ ದನಗಳನ್ನ ಸಾಗಿಸೋದು ಕಷ್ಟ. ಗೋಮಾಂಸವನ್ನ ಸಾಗಿಸೋದು ಸುಲಭ. ಹಾಗಾಗಿ, ಸ್ವಲ್ಪ ಎತ್ತರದಲ್ಲಿ ನಿರ್ಮಾಣವಾಗಿರೋ ಸೇತುವೆ ದನಗಳ್ಳರ ಪಾಲಿಗೆ ವರವಾದಂತೆ ಕಾಣುತ್ತಿದೆ. ರಾತ್ರಿ ವೇಳೆಯಲ್ಲಿ ಜನಸಾಮಾನ್ಯರ ಓಡಾಟ ಕಡಿಮೆ ಇರುವ ಈ ಸೇತುವೆ ಕೆಳಭಾಗದಲ್ಲಿ ಸಮೃದ್ಧ ಜಾಗವಿರೋದ್ರಿಂದ ದನಗಳ್ಳರು ಅದೇ ಸೇತುವೆ ಕೆಳಗೆ ದನಗಳನ್ನ ಕಡಿದು ತಲೆ-ಕಾಲುಗಳನ್ನ ಅಲ್ಲೇ ಬಿಟ್ಟು ಮಾಂಸವನ್ನ ಕೊಂಡೊಯ್ದಿದ್ದಾರೆ.
ಸ್ಥಳಕ್ಕೆ ಬಾಳೆಹೊನ್ನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದರೆ, ಕಳೆದ ಎರಡು ದಿನದ ಹಿಂದೆ ಮೂಡಿಗೆರೆ ತಾಲೂಕಿನ ರಾಸುವೊಂದು ಕಳ್ಳತನವಾಗಿತ್ತು. ಈ ರಾಸು ಅದೇ ಇರಬಹುದಾ ಎಂದು ಸ್ಥಳಿಯರು ಅಂದಾಜು ಕೂಡ ಮಾಡಿದ್ದಾರೆ. ಆದರೆ, ಮಲೆನಾಡಲ್ಲಿ ಆಗಿಂದಾಗ್ಗೆ ಮೇಲಿಂದ ಮೇಲೆ ರಾಸುಗಳ ಮೂಲಕವೇ ಜೀವನ ಕಟ್ಟಿಕೊಂಡವರ ರಾಸುಗಳು ಕೂಡ ಕಳ್ಳತನವಾಗುತ್ತಿವೆ. ಹಾಗಾಗಿ, ಮಲೆನಾಡಿಗರು ಈ ಗೋಕಳ್ಳರ ಹಾವಳಿಗೆ ಎಂದು ಬ್ರೇಕ್ ಬೀಳುವುದೋ ಎಂದು ಗೋಕಳ್ಳರಿಗೆ ಹಿಡಿಶಾಪ ಹಾಕುತ್ತಿದ್ದಾರೆ.
ರಿಪ್ಪನ್ಪೇಟೆ : ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿಂದು ದರಗೆಲೆ ತರಲೆಂದು ಕಾಡಿಗೆ ತೆರಳಿದ್ದ ಕೂಲಿ ಕೆಲಸಗಾರ ತಿಮ್ಮಪ್ಪ…
ರಿಪ್ಪನ್ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ನಡೆದಿದೆ. ತಿಮ್ಮಪ್ಪ ಬಿನ್…
ರಿಪ್ಪನ್ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…
ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…
ರಿಪ್ಪನ್ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…