Categories: N.R pura

ಹಲಗೂರು ಬೃಹನ್ಮಠಕ್ಕೆ ಉತ್ತರಾಧಿಕಾರಿ ನಿಯುಕ್ತಿ

ಎನ್‌.ಆರ್ ಪುರ: ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಶ್ರೀಮದ್ರಂಭಾಪುರಿ ಶಾಖಾ ಹಲಗೂರು ಬೃಹನ್ಮಠಕ್ಕೆ ವೈ.ಜೆ. ಶಿವಲಿಂಗಸ್ವಾಮಿ ಎಂಬ ವಟುವನ್ನು ನಿಯುಕ್ತಿಗೊಳಿಸಲಾಗಿದೆ ಎಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಪ್ರಕಟಪಡಿಸಿದರು.


ಅವರು ಶ್ರೀ ರಂಭಾಪುರಿ ಪೀಠದಲ್ಲಿ ಶನಿವಾರ ಹಲಗೂರು ಬೃಹನ್ಮಠದ ರುದ್ರಮುನಿ ಶಿವಾಚಾರ್ಯ ಸ್ವಾಮಿಗಳು ಹಾಗೂ ಹಲಗೂರು ಮಠದ ಶಿಷ್ಯ ಸದ್ಭಕ್ತ ಮಂಡಳಿಯವರು ಪರಸ್ಪರ ಸಮಾಲೋಚಿಸಿದ ನಂತರ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಯಗಟಿ ಗ್ರಾಮದ ವೇ.ಜಯದೇವ ಶಾಸ್ತ್ರಿ ಕಾತ್ಯಾಯಿನಿ ಇವರ ಸುಪುತ್ರರಾದ ವಿದ್ಯಾ ವಿನಯ ಸಂಪನ್ನರಾದ ಬಿ.ಎ.ಪದವೀಧರರಾಗಿರುವ, ವೇದ ಉಪನಿಷತ್ತುಗಳನ್ನು ಬಲ್ಲವರಾದ ವೈ.ಜೆ. ಶಿವಲಿಂಗಸ್ವಾಮಿ ಎಂಬ ವಟುವನ್ನು ನಿಯುಕ್ತಿಗೊಳಿಸಲಾಗಿದೆ. ವೀರಶೈವ ಧರ್ಮ ಪರಂಪರೆಯಂತೆ ಶ್ರೀ ರಂಭಾಪುರಿ ಜಗದ್ಗುರುಗಳ ಸಾನ್ನಿಧ್ಯದಲ್ಲಿ ಬರಲಿರುವ ಜೂನ್ 13 ಮತ್ತು 14ರಂದು ಶ್ರೀಮದ್ರಂಭಾಪುರಿ ಶಾಖಾ ಹಲಗೂರು ಬೃಹನ್ಮಠಕ್ಕೆ ಶ್ರೀ ಗುರು ಪಟ್ಟಾಧಿಕಾರ ನೆರವೇರಿಸಲು ತೀರ್ಮಾನಿಸಲಾಗಿದೆ. ಹಲಗೂರು ಮಠಾಧ್ಯಕ್ಷರಾದ ರುದ್ರಮುನಿ ಶಿವಾಚಾರ್ಯ ಸ್ವಾಮಿಗಳ ನೇತೃತ್ವದಲ್ಲಿ ಎಲ್ಲ ಕಾರ್ಯಕ್ರಮಗಳನ್ನು ನೆರವೇರಿಸುವ ನಿರ್ಧಾರ ಕೈಗೊಳ್ಳಲಾಯಿತು.


ಈ ಸಂದರ್ಭದಲ್ಲಿ ಹಂಪಸಾಗರದ ಶಿವಲಿಂಗ ರುದ್ರಮುನಿ ಶಿವಾಚಾರ್ಯ ಸ್ವಾಮಿಗಳು, ಹನುಮಾಪುರದ ಸೋಮಶೇಖರ ಶಿವಾಚಾರ್ಯ ಸ್ವಾಮಿಗಳು, ಹಲಗೂರಿನ ವೀರಶೈವ ಸಮಾಜದ ಅಧ್ಯಕ್ಷ ರವಿ ನಾಗರಾಜಪ್ಪ ಹಾಗೂ ಸಮಾಜದ ಗಣ್ಯರು ಉಪಸ್ಥಿತರಿದ್ದರು.

Malnad Times

Recent Posts

ಆನೆ ದಾಳಿಯಿಂದ ಮೃತಪಟ್ಟ ರೈತನ ಕುಟುಂಬಕ್ಕೆ ತಕ್ಷಣ ₹ 15 ಲಕ್ಷ ಪರಿಹಾರ ನೀಡಿ ; ಹರತಾಳು ಹಾಲಪ್ಪ ಆಗ್ರಹ

ಹೊಸನಗರ: ಶುಕ್ರವಾರ ಬೆಳಿಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ ರೈತ ತಿಮ್ಮಪ್ಪ ಎಂಬ ವ್ಯಕ್ತಿಯ ಮೇಲೆ ಆನೆ ದಾಳಿ ಮಾಡಿದ್ದು…

1 hour ago

ಶಿವಮೊಗ್ಗ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಪರ ರೋಡ್ ಷೋ | ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ ; ಪ್ರದೀಪ್ ಈಶ್ವರ್

ಶಿವಮೊಗ್ಗ: ರಾಜ್ಯದ ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ. ಆದ್ದರಿಂದ ಕ್ಷೇತ್ರದ ಹಿತ ಕಾಯಲು ಗೀತಕ್ಕಗೆ ಮತ ನೀಡಿ, ಆಶೀರ್ವದಿಸಿ…

2 hours ago

ಬಂಗಾರಪ್ಪರ ಋಣ ತೀರಿಸಲು ಗೀತಾಗೆ ಮತ ನೀಡಿ ; ಮಧು ಬಂಗಾರಪ್ಪ

ಸೊರಬ : ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಬಡವರ ಪರವಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದರು. ಅವರ ಋಣವನ್ನು…

4 hours ago

ನೈರುತ್ಯ ಶಿಕ್ಷಕರ, ನೈರುತ್ಯ ಪದವೀಧರರ ಕ್ಷೇತ್ರಗಳಿಗೆ ಜೂ. 03 ರಂದು ಚುನಾವಣೆ | ಮತದಾರರ ಪಟ್ಟಿಗೆ ಹೆಸರು ನೊಂದಾಯಿಸಲು ಮೇ 6 ಕಡೆಯ ದಿನ

ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…

17 hours ago

ಆನೆ ದಾಳಿಯಿಂದ ಮೃತನಾದ ರೈತನ ಕುಟುಂಬಕ್ಕೆ 24 ಗಂಟೆಯೊಳಗೆ ಪರಿಹಾರ ನೀಡದಿದ್ದಲ್ಲಿ ಸರ್ಕಾರಕ್ಕೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಹಾಲಪ್ಪ

ರಿಪ್ಪನ್‌ಪೇಟೆ: ಇಂದು ಬೆಳಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ್ದ ರೈತ ತಿಮ್ಮಪ್ಬ ಎಂಬ ರೈತ ಆನೆ ದಾಳಿಗೆ ಬಲಿಯಾಗಿದ್ದು ಮೃತ…

17 hours ago

Arecanut Today Price | ಮೇ 03ರ ಅಡಿಕೆ ರೇಟ್

ಹೊಸನಗರ : ಮೇ 03 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

18 hours ago