ಶೃಂಗೇರಿ : ಚಿಪ್ಸ್ ಕರಿಯುವ ಎಣ್ಣೆ ಬಾಣಲೆಗೆ ಬಿದ್ದು 13 ದಿನಗಳ ಬಳಿಕ ಯುವಕ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಶೃಂಗೇರಿ ತಾಲೂಕಿನ ಕಿಕ್ರೆ ಗ್ರಾಮದಲ್ಲಿ ನಡೆದಿದೆ. ಮೃತನನ್ನ ಸಂದೇಶ್ (25) ಎಂದು ಗುರುತಿಸಲಾಗಿದೆ.
ಮೇಲ್ಛಾವಣಿಯಿಂದ ಆಯಾ ತಪ್ಪಿ ದೊಡ್ಡ ಬಾಣಲೆಗೆ ಬಿದ್ದಿದ್ದ ಯುವಕ :
ಮೃತ ಸಂದೇಶ್ ಕಿಕ್ರೆ ಗ್ರಾಮದಲ್ಲಿ ಚಿಪ್ಸ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದನು. ಚಿಫ್ಸ್ ಫ್ಯಾಕ್ಟರಿಯಲ್ಲಿ 20ಕ್ಕೂ ಹೆಚ್ಚು ಯುವಕರು ಕೆಲಸ ಮಾಡುತ್ತಿದ್ದಾರೆ. ಕಳೆದ 13 ದಿನಗಳ ಹಿಂದೆ ಚಿಪ್ಸ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುವ ವೇಳೆ ಚಿಪ್ಸ್ ಕರೆಯುವ ಒಲೆಗೆ ತಾಪಮಾನ ಹೆಚ್ಚಿರಲಿ, ಎಣ್ಣೆ ಬೇಗ ಬಿಸಿಯಾಗಿಲಿ ಎಂಬ ಕಾರಣಕ್ಕೆ ಎಣ್ಣೆ ಅಂಶ ಇರುವ ತಾಪಮಾನವೂ ಹೆಚ್ಚಿರುವ ಗೇರು ಬೀಜದ ಸಿಪ್ಪೆ ಹಾಕುತ್ತಾರೆ. ಹೊಗೆ ಹೆಚ್ಚಾಗಿ ಹೊಗೆ ಕಟ್ಟಿಕೊಂಡಿದ್ದ ಹೊಗೆ ಪೈಪ್ ಕ್ಲೀನ್ ಮಾಡಲು ಫ್ಯಾಕ್ಟರಿಯ ಮೇಲ್ಛಾವಣಿಗೆ ಹತ್ತಿದ್ದ ಸಂದೇಶ್ ಆಯಾ ತಪ್ಪಿ ಸೀದಾ ಚಿಪ್ಸ್ ಕರಿಯುವ ದೊಡ್ಡ ಬಾಣಲೆಗೆ ಬಿದ್ದಿದ್ದರು. ದೇಹದ ಶೇಕಡ 80 ರಷ್ಟು ಭಾಗ ಸುಟ್ಟು ಹೋಗಿತ್ತು. ಕೂಡಲೇ ಶೃಂಗೇರಿಯ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿತ್ತು.
ಕಳೆದ 13 ದಿನಗಳಿಂದ ಸಾವು-ಬದುಕಿನ ಮಧ್ಯೆ ಹೋರಾಡಿದ್ದ ಸಂದೇಶ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಸಂದೇಶ್ ಮೇಲ್ಛಾವಣಿಗೆ ಹತ್ತಿದಾಗ ಕಬ್ಬಿಣದ ರಾಡ್ ಮೇಲೆ ನಡೆದು ಹೋಗಿದ್ದರೆ ಯಾವುದೇ ಅನಾಹುತ ಸಂಭವಿಸಿರಲಿಲ್ಲ. ಆದರೆ, ಸಂದೇಶ್ ಸಿಮೆಂಟ್ ಶೀಟ್ಗಳ ಮೇಲೆ ನಡೆದು ಹೋದ ಪರಿಣಾಮ ಆಯಾ ತಪ್ಪಿ ಬಿದ್ದು ಈ ದುರ್ಘಟನೆ ಸಂಭವಿಸಿದೆ.
ಅವರೇ ಬೆಂಕಿ ಹಾಕಿ ಕಾಯಿಸಿದ್ದ ಕುದಿಯತ್ತಿದ್ದ ಎಣ್ಣೆ ಬಾಣಲೆಗೆ ಬಿದ್ದು ತಲೆ ಹಾಗೂ ಕಾಲು ಬಿಟ್ಟು ದೇಹದ ಬಹುತೇಕ ಭಾಗ ಸುಟ್ಟು ಹೋಗಿತ್ತು. 13 ದಿನಗಳ ಕಾಲ ಸಾವು-ಬದುಕಿನ ಮಧ್ಯೆ ಹೋರಾಡಿದ ಸಂದೇಶ್ ಸಾವನ್ನಪ್ಪಿದ್ದಾರೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…