ಶೃಂಗೇರಿ : ಮಹಿಳೆಯೊಂದಿಗೆ ಅನೈತಿಕ ಸಂಬಂಧ ಇತ್ತು ಎನ್ನಲಾದ ಯುವಕನೋರ್ವ ತನ್ನ ಮದುವೆ ಬಳಿಕ ಮಹಿಳೆಯ ಬೆದರಿಕೆಗೆ ಕುಪಿತಗೊಂಡು ಆಕೆಯನ್ನು ಹತ್ಯೆ ಮಾಡಿ ಮರದ ಕೆಳಗೆ ಹೂತು ಹಾಕಿದ್ದ ತಾಲೂಕಿನ ತ್ಯಾವಣ ಗ್ರಾಮದಲ್ಲಿ ವರದಿಯಾಗಿದೆ.
ವಾಸಂತಿ (42) ಹತ್ಯೆಯಾದ ಮಹಿಳೆಯಾಗಿದ್ದು, ಕೊಟ್ಟಿಗೆಹಾರ ಮೂಲದ ಪ್ರಕಾಶ್ (29) ಕೊಲೆ ಆರೋಪಿಯಾಗಿದ್ದಾನೆ. ಈತ ಕಳೆದ ಮೂರು ತಿಂಗಳ ಹಿಂದೆ ವಾಸಂತಿ ಮೇಲೆ ಹಲ್ಲೆ ಮಾಡಿ ಹತ್ಯೆ ಮಾಡಿದ್ದು, ಮೃತ ದೇಹವನ್ನು ಯಾರಿಗೂ ತಿಳಿಯದಂತೆ ತ್ಯಾವಣ ಸಮೀಪದ ಕಾಡಿನಲ್ಲಿ ಮರದ ಕೆಳಗೆ ಹೂತು ಹಾಕಿ ಏನು ಅರಿಯದವನಂತಿದ್ದ. ಈ ಪ್ರಕರಣವನ್ನು ಬೇಧಿಸುವಲ್ಲಿ ಶೃಂಗೇರಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಘಟನೆ ವಿವರ:
ಶೃಂಗೇರಿ ತಾಲೂಕಿನ ತ್ಯಾವಣ ಗ್ರಾಮದ ವಾಸಂತಿ ಅವರನ್ನು ಕಳಸ ತಾಲೂಕಿನ ಎಡೂರು ಗ್ರಾಮದ ನಾರಾಯಣ ಎಂಬವರಿಗೆ ವಿವಾಹ ಮಾಡಿಕೊಡಲಾಗಿತ್ತು. ಈ ದಂಪತಿಗೆ ಇಬ್ಬರು ಮಕ್ಕಳಿದ್ದು, ಕೆಲ ವರ್ಷಗಳ ಹಿಂದೆ ವಾಸಂತಿ ಪತಿ ನಾರಾಯಣ ಮೃತ ಪಟ್ಟಿದ್ದರು. ಬಳಿಕ ವಾಸಂತಿ ತನ್ನ ಮಕ್ಕಳೊಂದಿಗೆ ತ್ಯಾವಣ ಗ್ರಾಮದ ತವರು ಮನೆಗೆ ಹಿಂದಿರುಗಿದ್ದರು. ಈ ವೇಳೆ ತ್ಯಾವಣ ಗ್ರಾಮದಲ್ಲಿರುವ ಪ್ಲಾಂಟೇಶನ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದ ಕೊಟ್ಟಿಗೆಹಾರ ಮೂಲದ ಯುವಕ ಪ್ರಕಾಶ್ ಪರಿಚಯವಾಗಿದ್ದು, ಪರಿಚಯ ಸಲುಗೆಗೆ ತಿರುಗಿದೆ ಎಂದು ತಿಳಿದು ಬಂದಿದೆ.
ಕಳೆದ ಮಾರ್ಚ್ ತಿಂಗಳಲ್ಲಿ ಪ್ರಕಾಶ್ ಬೇರೊಂದು ಯುವತಿಯೊಂದಿಗೆ ವಿವಾಹವಾಗಿದ್ದು, ಇದನ್ನು ತಿಳಿದ ವಾಸಂತಿ ಪ್ರಕಾಶ್ನನ್ನು ಕಳೆದ ಏಪ್ರಿಲ್ ತಿಂಗಳಿನಲ್ಲಿ ತ್ಯಾವಣ ಗ್ರಾಮಕ್ಕೆ ಕರೆಸಿಕೊಂಡಿದ್ದಳು. ಈ ವೇಳೆ ತನ್ನೊಂದಿಗೆ ಸಂಬಂಧ ಹೊಂದಿ ಬೇರೊಬ್ಬಳನ್ನು ವಿವಾಹವಾಗಿರುವುದನ್ನು ಪ್ರಶ್ನಿಸಿದ್ದಾಳೆ. ಅಲ್ಲದೇ ತಾನು ವಿಷ ಕುಡಿಯುವುದಾಗಿ ಬೆದರಿಸಿದ್ದಾಳೆ. ಈ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ. ಕುಪಿತನಾದ ಪ್ರಕಾಶ್ ಮನಬಂದಂತೆ ವಾಸಂತಿಗೆ ಥಳಿಸಿದ್ದಾನೆನ್ನಲಾಗಿದೆ. ಹಲ್ಲೆಯಿಂದ ತೀವ್ರ ಅಘಾತಕ್ಕೊಳಗಾದ ವಾಸಂತಿ ಕುಸಿದು ಬಿದ್ದಿದ್ದಾಳೆ. ಈ ವೇಳೆ ಆಕೆಗೆ ನೀರು ಕುಡಿಸಲು ಪ್ರಯತ್ನಿಸಿದಾಗ ಆಕೆ ಮೃತಪಟ್ಟಿರುವುದು ಗೊತ್ತಾಗಿದೆ.
ವಾಸಂತಿ ಮೃತಪಟ್ಟಿದ್ದನ್ನು ಕಂಡ ಪ್ರಕಾಶ್ ಭೀತಿಗೊಳಗಾಗಿ ಘಟನೆಯನ್ನು ಯಾರಿಗೂ ತಿಳಿಸದೇ ಗ್ರಾಮ ಸಮೀಪದ ಕಾಡಿಗೆ ಆಕೆಯ ಮೃತದೇಹ ಹೊತ್ತೊಯ್ದು ಮರದ ಕೆಳಗೆ ಹೂತು ಹಾಕಿ ಏನೂ ಅರಿಯದವನಂತೆ ತನ್ನ ಊರಿಗೆ ಬಂದು ನೆಲೆಸಿದ್ದ. ವಾಸಂತಿ ಹತ್ಯೆಯಾದ ಸುದ್ದಿ ತಿಳಿಯದ ಆಕೆಯ ಕುಟುಂಬಸ್ಥರು ಹಾಗೂ ಮಗ ನವೀನ್ ಸಂಬಂಧಿಕರ ಮನೆಗೆ ತೆರಳಿರಬಹುದೆಂದು ಸುಮ್ಮನಾಗಿದ್ದರು. ಆದರೆ 10 ದಿನ ಕಳೆದರೂ ಆಕೆಯ ಸುಳಿವು ಸಿಗದಿದ್ದಾಗ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.
ನಾಪತ್ತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆಕೆಯ ಪತ್ತೆಗಾಗಿ ತನಿಖೆ ನಡೆಸಿದರೂ ಆಕೆಯ ಬಗ್ಗೆ ಸುಳಿವು ಸಿಕ್ಕಿರಲಿಲ್ಲ. ವಾಸಂತಿಯ ಕಾಲ್ ಡೀಟೈಲ್ಸ್ ತೆಗೆಸಿದಾಗ ಆಕೆ ಪ್ರಕಾಶ್ ಜೊತೆ ಮೊಬೈಲ್ನಲ್ಲಿ ಮಾತನಾಡಿದ್ದ ವಿಷಯ ತಿಳಿದು ಬಂದಿದೆ. ಬಳಿಕ ಪ್ರಕಾಶ್ನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ ವಾಸಂತಿಯನ್ನು ಹತ್ಯೆ ಮಾಡಿ ಮರದ ಕೆಳಗೆ ಹೂತು ಹಾಕಿದ್ದ ಘಟನೆ ಬೆಳಕಿಗೆ ಬಂದಿದೆ.
ಮಂಗಳವಾರ ಪ್ರಕಾಶ್ನನ್ನು ಸ್ಥಳಕ್ಕೆ ಕರೆದೊಯ್ದ ಪೊಲೀಸರು ಶವ ಹೂತು ಹಾಕಿದ್ದ ಜಾಗದಲ್ಲಿ ಶೋಧಿಸಿದಾಗ ವಾಸಂತಿ ಮೃತ ದೇಹ ಪತ್ತೆಯಾಗಿದೆ. ಸ್ಥಳಕ್ಕೆ ಜಿಲ್ಲಾ ಎಸ್ಪಿ ಉಮಾ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…