ಶೃಂಗೇರಿ : ಇಲ್ಲಿನ ಹೊರವಲಯದ ಮೆಣಸೆ ಗ್ರಾಮದಲ್ಲಿ ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಬೈಕ್ ಸವಾರ ಮೃತಪಟ್ಟಿರುವ ಘಟನೆ ನಡೆದಿದೆ.
ಕೊಪ್ಪ ತಾಲೂಕಿನ ಎತ್ತಿನಹಟ್ಟಿ ಗ್ರಾಮದ ನಿವಾಸಿ ವೆಂಕಟೇಶ್ ಮೃತ ದುರ್ದೈವಿ ಆಗಿದ್ದಾರೆ. ಮೆಣಸೆಯ ರಾಜೀವ್ ಗಾಂಧಿ ಕಾಲೇಜು ಬಳಿ ಈ ಘಟನೆ ನಡೆದಿದೆ.

ಎತ್ತಿನಹಟ್ಟಿ ಗ್ರಾಮದಿಂದ ಶೃಂಗೇರಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ರಸ್ತೆಯಲ್ಲಿ ವೆಂಕಟೇಶ್ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಶೃಂಗೇರಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.