Suicide | ಸಾಲಬಾಧೆ ; ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ

0 243

ಕಡೂರು : ಸಾಲಬಾಧೆ ತಾಳಲಾರದೆ ರೈತ ಮಹಿಳೆಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ರಂಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ಹನುಮಮ್ಮ (75) ಎಂದು ಗುರುತಿಸಲಾಗಿದೆ. ಕೃಷಿಗಾಗಿ ಕೆನರಾ ಬ್ಯಾಂಕ್‌ನಿಂದ 6 ಲಕ್ಷ ರೂ. ಸಾಲ ಮಾಡಿದ್ದ ಹನುಮಮ್ಮ ಮಳೆ ಕೈಕೊಟ್ಟ ಹಿನ್ನೆಲೆ ಬೆಳೆ ನಾಶದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಘಟನೆ ಸಂಬಂಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply

Your email address will not be published.

error: Content is protected !!