Chikmagaluru News

ಚಿಕ್ಕಮಗಳೂರಿನಲ್ಲಿ ಭಾರೀ ಮಳೆ – ಜಿಲ್ಲಾಧಿಕಾರಿಗಳಿಂದ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

ಚಿಕ್ಕಮಗಳೂರು, ಆಗಸ್ಟ್ 17 :ಮಲೆನಾಡು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ ಮತ್ತು ಬಿರುಗಾಳಿಯಿಂದ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಚಿಕ್ಕಮಗಳೂರು ಜಿಲ್ಲೆಯ ಹಲವು ತಾಲೂಕುಗಳಲ್ಲಿ ನದಿ, ಹಳ್ಳಗಳು ತುಂಬಿ ಹರಿಯುತ್ತಿದ್ದು, ಬೆಟ್ಟ-ಗಾಡು ಪ್ರದೇಶಗಳಲ್ಲಿ ಭೂ ಕುಸಿತದ ಅಪಾಯ ಹೆಚ್ಚಾಗಿದೆ. ಇಂತಹ ಪರಿಸ್ಥಿತಿಯನ್ನು ಮನಗಂಡು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ನಾಳೆ (ಆಗಸ್ಟ್ 18) ಒಂದು ದಿನಕ್ಕೆ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ .

WhatsApp Group Join Now
Telegram Group Join Now
Instagram Group Join Now

ಯಾವ ಶಾಲಾ-ಕಾಲೇಜುಗಳಿಗೆ ರಜೆ?

ರಜೆ ಘೋಷಣೆ ಜಿಲ್ಲೆಯ ಕೆಲವು ಭಾಗಗಳಿಗೆ ಮಾತ್ರ ಸೀಮಿತವಾಗಿದ್ದು, ಅವುಗಳು –

  • ಕೊಪ್ಪ, ಶೃಂಗೇರಿ, ಮೂಡಿಗೆರೆ, ಎನ್.ಆರ್.ಪುರ ಮತ್ತು ಕಳಸ ತಾಲೂಕುಗಳ = ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ

ಮಳೆ ಅಬ್ಬರ – ಆರೆಂಜ್ ಮತ್ತು ರೆಡ್ ಅಲರ್ಟ್

ಹವಾಮಾನ ಇಲಾಖೆ ಈಗಾಗಲೇ ಚಿಕ್ಕಮಗಳೂರು ಜಿಲ್ಲೆಗೆ ಆರೆಂಜ್ ಮತ್ತು ರೆಡ್ ಅಲರ್ಟ್ ಘೋಷಿಸಿದೆ. ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆ ನದಿ, ತೊರೆ, ಹೊಳೆ, ಜಲಾಶಯಗಳಲ್ಲಿ ನೀರಿನ ಮಟ್ಟವನ್ನು ಅಪಾಯಕರ ಮಟ್ಟಕ್ಕೆ ತಳ್ಳಿದೆ. ಕೆಲವೆಡೆ ಸೇತುವೆಗಳು ಜಲಾವೃತಗೊಂಡಿದ್ದು, ಗ್ರಾಮೀಣ ರಸ್ತೆ ಸಂಪರ್ಕ ಸಂಪೂರ್ಣ ಕಡಿತವಾಗಿದೆ. ವಿಶೇಷವಾಗಿ ಮಲೆನಾಡು ಭಾಗದ ಗ್ರಾಮಸ್ಥರು ಸಂಚಾರದಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650