Ripponpete

ಗವಟೂರು ಶಾಲೆಯಲ್ಲಿ ಮಕ್ಕಳ ಸಂತೆ | ಓದಿನ ಮೂಲಕ ಮಕ್ಕಳಲ್ಲಿ ವ್ಯವಹಾರಿಕಾ ಜ್ಞಾನ ಬೆಳೆಸಿ ; ಪೋಷಕರಿಗೆ ಬಿಇಒ ಕರೆ

ರಿಪ್ಪನ್‌ಪೇಟೆ ; ಮಕ್ಕಳು ಓದಿನೊಂದಿಗೆ ವ್ಯವಹಾರಿಕಾ ಜ್ಞಾನ ಬೆಳೆಸಿಕೊಳ್ಳಲು ಸರ್ಕಾರ ಶಾಲೆಗಳಲ್ಲಿ ಮಕ್ಕಳ ಸಂತೆ ಕಾರ್ಯಕ್ರಮವನ್ನು ಅನುಷ್ಟಾನಗೊಳಿಸಿದ್ದು ಅದರಂತೆ ಗವಟೂರು ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸಂತೆ ಯಶಸ್ವಿಯಾಗಿ ನಿರ್ವಹಣೆ ಮಾಡುವ ಮೂಲಕ ಮಕ್ಕಳ ಪೋಷಕವರ್ಗ ಸಹ ಬೆಂಬಲ ನೀಡಿ ಪ್ರೋತ್ಸಾಹಿಸುತ್ತಿರುವುದು ಸಂತೋಷ ತಂದಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವೈ. ಗಣೇಶ ಹೇಳಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಗವಟೂರು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಇಂದು ಮಕ್ಕಳ ಸಂತೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಲ್ಲಿ ಓದಿನೊಂದಿಗೆ ಹಣಕಾಸಿನ ವ್ಯವಹಾರವನ್ನು ಹೇಗೆ ನಿರ್ವಹಣೆ ಮಾಡಬೇಕೆಂಬ ಬಗ್ಗೆ ಜಾಗೃತಗೊಳಿಸುವ ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮವಾದ ಮಕ್ಕಳ ಸಂತೆ ಬಹಳ ಯಶಸ್ವಿಯಾಗುತ್ತಿದ್ದು ಇದರಿಂದ ಮಕ್ಕಳ ಪೋಷಕರು ತಮ್ಮ ಮಕ್ಕಳ ಆರ್ಥಿಕ ಜ್ಞಾನದ ಕುರಿತು ಅರಿಯಲು ಸಾದ್ಯವಾಗಿದೆ ಎಂದರು.

ಎಸ್.ಡಿ.ಎಂ.ಸಿ. ಅಧ್ಯಕ್ಷ ಸೀತಾರಾಮ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯಿತಿ ಸದಸ್ಯ ಜಿ.ಡಿ.ಮಲ್ಲಿಕಾರ್ಜುನ, ಮಂಜುಳಾ ಕೇತಾರ್ಜಿ, ಗಣಪತಿ ಗವಟೂರು, ಪ್ರದೀಪ, ಶಾಲಾ ಮುಖ್ಯೋಪಾಧ್ಯಾಯ ಗಂಗಾನಾಯ್ಕ್, ಶಿರೋಮಣಿ, ಶಿಕ್ಷಕರಾದ ರವಿಕುಮಾರ್, ಕು|| ರಂಜಿತಾ, ಕು|| ನಂದಿನಿ, ಚಂದ್ರಮೋಹನ್, ತಾಲ್ಲೂನ್ ನೌಕರ ಸಂಘದ ಉಪಾಧ್ಯಕ್ಷ ಶಿವಮೂರ್ತಿ, ಎಸ್.ಡಿ.ಎಂ.ಸಿ ಸದಸ್ಯರು ಹಾಗೂ ಪೋಷಕ ವರ್ಗ ಹಾಜರಿದ್ದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಲೇಖನವನ್ನು ಮುಂದುವರಿಸಿ ಓದಿ
ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>