ಹೊಸನಗರ

ಸೆ.19ಕ್ಕೆ ತೀರ್ಥಹಳ್ಳಿಗೆ ಸಿಎಂ ಡಿಕೆಶಿ ಭೇಟಿ : ಕಸ್ತೂರಿ ರಂಗನ್ ವರದಿ ವಿರೋಧಿಸಿ ಹೊಸನಗರದಿಂದ 5 ಸಾವಿರ ರೈತರು ಭಾಗಿ ನಿರೀಕ್ಷೆ

ಹೊಸನಗರ: ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಕಸ್ತೂರಿ ರಂಗನ್ ವರದಿಯ ಸಾಧಕ-ಬಾಧಕಗಳ ಕುರಿತು ಸ್ಥಳೀಯ ರೈತರು ಮತ್ತು ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೆಪ್ಟೆಂಬರ್ 19ರಂದು ತೀರ್ಥಹಳ್ಳಿಗೆ ಭೇಟಿ ನೀಡಲಿದ್ದಾರೆ.

InShot 20260917 120841479

ಹೊಸನಗರ: ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಕಸ್ತೂರಿ ರಂಗನ್ ವರದಿಯ ಸಾಧಕ-ಬಾಧಕಗಳ ಕುರಿತು ಸ್ಥಳೀಯ ರೈತರು ಮತ್ತು ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೆಪ್ಟೆಂಬರ್ 19ರಂದು ತೀರ್ಥಹಳ್ಳಿಗೆ ಭೇಟಿ ನೀಡಲಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಮನವಿ ಮೇರೆಗೆ ಈ ಸಭೆ ನಡೆಯುತ್ತಿದ್ದು, ಹೊಸನಗರ ತಾಲೂಕಿಗೆ ಮಾರಕವಾಗಿರುವ ಈ ವರದಿಯನ್ನು ವಿರೋಧಿಸಿ ಶಾಸಕರ ನೇತೃತ್ವದಲ್ಲಿ ತಾಲೂಕಿನಿಂದ ಸುಮಾರು 5,000ಕ್ಕೂ ಹೆಚ್ಚು ರೈತರು ಭಾಗವಹಿಸಲಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿ ತಿಳಿಸಿದ್ದಾರೆ.

ಹೊಸನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡುತ್ತಾ ಕಾರ್ಯಕ್ರಮದ ವಿವರ ನೀಡಿದರು.

ಸಂವಾದ ಹಾಗೂ ಬಹಿರಂಗ ಸಭೆ:

ತೀರ್ಥಹಳ್ಳಿಯ ಪದವಿಪೂರ್ವ ಕಾಲೇಜಿನಲ್ಲಿ ರೈತರೊಂದಿಗೆ ಸಂವಾದ ಹಾಗೂ ಅನಂತಮೂರ್ತಿ ಪ್ರೌಢಶಾಲೆ ಮೈದಾನದಲ್ಲಿ ಬಹಿರಂಗ ಸಭೆ ನಡೆಯಲಿದೆ.

ವಿಶೇಷ ಅಧಿವೇಶನ:

ಸೆಪ್ಟೆಂಬರ್ 21ರಿಂದ 23ರವರೆಗೆ ನಡೆಯಲಿರುವ ವಿಶೇಷ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳುವ ಮುನ್ನ ಈ ಅಭಿಪ್ರಾಯ ಸಂಗ್ರಹ ಸಭೆ ಅತ್ಯಂತ ಪ್ರಮುಖವೆನಿಸಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ರೈತರಿಗೆ ಕರೆ:

ಮಲೆನಾಡಿನ ರೈತರು ಮತ್ತು ಕೃಷಿ ಕಾರ್ಮಿಕರ ಹಿತದೃಷ್ಟಿಯಿಂದ ಹೊಸನಗರ ತಾಲೂಕಿನ ಎಲ್ಲಾ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಸ್ತೂರಿ ರಂಗನ್ ವರದಿಯ ವಿರುದ್ಧ ಧ್ವನಿ ಎತ್ತಬೇಕು ಎಂದು ಕೋರಿದರು.

ಪತ್ರಿಕಾಗೋಷ್ಠಿಯಲ್ಲಿ ಗ್ಯಾರಂಟಿ ಯೋಜನೆಯ ತಾಲೂಕು ಅಧ್ಯಕ್ಷ ಎಚ್.ಬಿ. ಚಿದಂಬರ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸದಾಶಿವ ಶ್ರೇಷ್ಠಿ, ಜಯಶೀಲಪ್ಪ ಗೌಡ, ಪ್ರಭಾಕರ್, ಅಶ್ವಿನಿಕುಮಾರ್, ಜಯನಗರ ಗುರು ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]