ಶಿವಮೊಗ್ಗ ; ನಗರದ ಬಿ.ಹೆಚ್. ರಸ್ತೆಯ ಮೈಲಾರೇಶ್ವರ ದೇವಾಲಯದ ಬಳಿ ನಗರ ಸಾರಿಗೆ ಬಸ್ನಿಂದ ಬಿದ್ದು ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದು, ಗುರುಪುರದಿಂದ ಆತ ಸಿಟಿಯಲ್ಲಿನ ಕಾಲೇಜಿಗೆ ಬರುವಾಗ ಈ ಘಟನೆ ಸಂಭವಿಸಿದೆ.
ಪ್ರಥಮ ಪಿಯು ಕಾಮರ್ಸ್ ವಿದ್ಯಾರ್ಥಿ ಯಶವಂತ್ (17) ಮೃತ ವಿದ್ಯಾರ್ಥಿ. ಈತ ನಗರ ಸಾರಿಗೆ ಬಸ್ನಲ್ಲಿ ಪುಟ್ ಬೋರ್ಡ್ ಮೇಲೆ ನಿಂತು ಪ್ರಯಾಣಿಸುತ್ತಿದ್ದ. ಸಿಟಿ ಬಸ್ ಮೈಲಾರೇಶ್ವರ ದೇವಾಲಯದ ಬಳಿ ಬರುವಾಗ ಚಾಲಕ ಬ್ರೇಕ್ ಹಾಕಿದ್ದಾನೆ. ಇದಕ್ಕಿದ್ದಂತೆ ಬ್ರೇಕ್ ಬಿದ್ದ ಹಿನ್ನೆಲೆಯಲ್ಲಿ ಪುಟ್ ಬೋರ್ಡ್ನ ಮೇಲಿದ್ದ ವಿದ್ಯಾರ್ಥಿ ಆಯತಪ್ಪಿ ಬಸ್ನಿಂದ ಕೆಳಕ್ಕೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಈ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪೂರ್ವ ಸಂಚಾರಿ ಪೊಲೀಸ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
ShivamoggaJune 3, 2025ಸಂಪತ್ತಿನೊಂದಿಗೆ ಒಂದಿಷ್ಟಾದರೂ ಧರ್ಮ ಪ್ರಜ್ಞೆ ಅವಶ್ಯಕ ; ರಂಭಾಪುರಿ ಜಗದ್ಗುರುಗಳು
RipponpeteJune 3, 2025ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ ದೇವಸ್ಥಾನದ 108 ಮೆಟ್ಟಿಲುಗಳ ನಿರ್ಮಾಣಕ್ಕೆ ಸಂಸದ ಬಿ.ವೈ. ರಾಘವೇಂದ್ರ ಶಿಲನ್ಯಾಸ
RipponpeteJune 2, 2025ಕೊಪ್ಪಳ ಗವಿಸಿದ್ದೇಶ್ವರ ಮಠದ ಶ್ರೀಗಳು ಶಿವಮೊಗ್ಗ ಬೆಕ್ಕಿನಕಲ್ಮಠಕ್ಕೆ ಭೇಟಿ
RipponpeteJune 1, 2025ಶ್ರುತಪಂಚಮಿ ಆಚರಣೆ | ಜೈನಧರ್ಮ ಸಿದ್ಧಾಂತಗಳು ಜೀವನ ಮೌಲ್ಯಗಳನ್ನು ವರ್ಧಿಸುತ್ತದೆ ; ಹೊಂಬುಜ ಶ್ರೀಗಳು