ಶಿವಮೊಗ್ಗ

ಸೆ. 4ರಂದು ಶಿವಮೊಗ್ಗ ನಗರದಲ್ಲಿ ಮಾಂಸ ಮಾರಾಟ ಸಂಪೂರ್ಣ ಬಂದ್‌ ; ಯಾಕೆ ?

InShot 20260902 115748919

ಶಿವಮೊಗ್ಗ : ಸೆಪ್ಟೆಂಬರ್ 4ರಂದು ಶಿವಮೊಗ್ಗ ನಗರ ಪಾಲಿಕೆ ಸರಹದ್ದಿನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಹಬ್ಬದ ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಸರ್ಕಾರದ ಮಾರ್ಗಸೂಚಿಯ ಪ್ರಕಾರ ಈ ದಿನವನ್ನು ‘ಮಾಂಸರಹಿತ ದಿನ’ವನ್ನಾಗಿ ಆಚರಿಸಲಾಗುತ್ತಿದ್ದು, ನಗರದಾದ್ಯಂತ ಕಸಾಯಿಖಾನೆಗಳು ಮತ್ತು ಮಾಂಸದ ಮಳಿಗೆಗಳನ್ನು ಕಡ್ಡಾಯವಾಗಿ ಮುಚ್ಚುವಂತೆ ಮಹಾನಗರ ಪಾಲಿಕೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ವ್ಯಾಪಾರಿಗಳಿಗೆ ಎಚ್ಚರಿಕೆ:

ಪಾಲಿಕೆ ವ್ಯಾಪ್ತಿಯ ಎಲ್ಲ ಮಾಂಸದ ವ್ಯಾಪಾರಿಗಳು ಅಂದು ವಹಿವಾಟು ನಡೆಸದೆ ಅಂಗಡಿಗಳನ್ನು ಮುಚ್ಚಿ ನಿಯಮ ಪಾಲಿಸಬೇಕು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಕಾನೂನು ಕ್ರಮ:

ಪಾಲಿಕೆಯ ಈ ನಿರ್ದೇಶನವನ್ನು ಉಲ್ಲಂಘಿಸಿ ಮಾಂಸ ಮಾರಾಟ ಅಥವಾ ಪ್ರಾಣಿವಧೆ ನಡೆಸಿದರೆ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪಾಲಿಕೆಯ ಪರಿಸರ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಎಚ್ಚರಿಸಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]