ಹೊಸನಗರ

ಎಂ.ಗುಡ್ಡೇಕೊಪ್ಪ ಪಿಡಿಒ ರವಿ ಎಸ್. ವಿರುದ್ಧ ಭ್ರಷ್ಟಾಚಾರದ ಆರೋಪ ; ತನಿಖೆಗೆ ಮುಂದಾದ ಜಿ.ಪಂ. ಲೆಕ್ಕಾಧಿಕಾರಿಗಳ ತಂಡ

ಹೊಸನಗರ ; ಎಂ. ಗುಡ್ಡೇಕೊಪ್ಪ ಗ್ರಾಮ ಪಂಚಾಯತಿ ಓರ್ವ ಸದಸ್ಯ ಇಲ್ಲಿನ ಪಿಡಿಎ ರವಿ. ಎಸ್ ವಿರುದ್ದ ಜಿಲ್ಲಾ ಪಂಚಾಯತಿ ಸಿಇಓ ಅವರಿಗೆ ಲಿಖಿತ ದೂರು ನೀಡಿ ಹಲವು ದಿನಗಳ ಬಳಿಕ ಮಂಗಳವಾರ ಗ್ರಾಮ ಪಂಚಾಯತಿ ಕಚೇರಿಗೆ ಜಿಲ್ಲಾ ಪಂಚಾಯತಿ ಲೆಕ್ಕ ಪರಿಶೋಧನ ತಂಡದ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಪರಿಶೀಲನೆಗೆ ಮುಂದಾಗಿರುವುದು ಗ್ರಾಮಸ್ಥರ ಕೌತುಕಕ್ಕೆ ಕಾರಣವಾಗಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಕಳೆದ ಒಂದುವರೆ ವರ್ಷದಿಂದ ಪಿಡಿಒ ರವಿಯವರ ಅಧಿಕಾರ ಅವಧಿಯಲ್ಲಿ ಸಾಮಾನ್ಯ ಸಭೆಯ ನಡಾವಳಿ ದಾಖಲಿಸಲು ವಿಳಂಬ ಧೋರಣೆ ತಾಳಿರುವುದು, ಸ್ವ-ಇಚ್ಛೆಯಂತೆ ಅಕ್ರಮ ದಾಖಲಿಸಿರುವುದು, ವರ್ಗ-1ರಲ್ಲಿ ಸುಮಾರು 3 ಲಕ್ಷ ರೂ. ಮೊತ್ತದ ನಕಲಿ ಬಿಲ್ ಸೃಷ್ಠಿಸಿ ಹಣ ದೋಚಿರುವುದು, 25% ಅನುದಾನದಲ್ಲೂ ಅಕ್ರಮ, ಗ್ರಾಹಕರಿಗೆ ಮೂಲಭೂತ ಸೌಕರ್ಯಗಳನ್ನು ನೀಡದೆ ವಂಚಿಸಿರುವ ಪಂಚಾಯತಿ ವ್ಯಾಪ್ತಿಯ ಖಾಸಗಿ ಲೇಔಟ್ ಮಾಲೀಕರಿಗೆ ಕಾನೂನು ಬಾಹಿರವಾಗಿ ಇ-ಸ್ವತ್ತು ಹಂಚಿಕೆ ಮಾಡಿದ್ದಾರೆ ಎಂಬ ಗಂಭೀರ ಆರೋಪ ಸೇರಿದಂತೆ ಹಲವು ದೂರುಗಳನ್ನು ಲಿಖಿತ ರೂಪದಲ್ಲಿ ಸದಸ್ಯ ಮಹೇಂದ್ರ ಜಿಲ್ಲಾ ಪಂಚಾಯತಿ ಸಿಇಓಗೆ ನೀಡಿದ್ದರು.

ಕಳೆದ ಗ್ರಾಮ ಪಂಚಾಯತಿ ಸಾಮಾನ್ಯ ಸಭೆಯಲ್ಲೂ ಈ ವಿಷಯ ಮಾರ್ಧನಿಸಿತ್ತು. ಪರ-ವಿರೋಧ ಚರ್ಚೆ ತಾರಕ್ಕೇರಿತ್ತು. ಇದೇ ಪ್ರಥಮ ಬಾರಿಗೆ ಸಾಮಾನ್ಯ ಸಭೆಯ ನಡಾವಳಿಯನ್ನು ಆನ್‌ಲೈನ್ ಮೂಲಕ ದಾಖಲಿಸುವ ಕಾರ್ಯಕ್ಕೆ ಗ್ರಾಮ ಪಂಚಾಯತಿ ಅಧ್ಯಕ್ಷ ಜಿ.ಎನ್ ಪ್ರವೀಣ್ ಮುನ್ನುಡಿ ಬರೆದಿದ್ದರು. ಅಲ್ಲದೆ, ಪಿಡಿಓ ರವಿ ಕಾರ್ಯವೈಖರಿ ಕುರಿತಂತೆ ಅಸಮಾಧಾನ ವ್ಯಕ್ತಪಡಿಸಿ, ಸೂಕ್ತ ತನಿಖೆಗೆ ಕೂಡ ಆಗ್ರಹಿಸಿದ್ದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ದೂರು ನೀಡಿ ಮೂರ್ನಾಲ್ಕು ವಾರಗಳೇ ಕಳೆದರೂ ತನಿಖೆಗೆ ಮುಂದಾಗದ ಜಿಲ್ಲಾ ಪಂಚಾಯತಿ ಅಧಿಕಾರಗಳ ಕಾರ್ಯವೈಖರಿ ಅನುಮಾನಕ್ಕೆ ಎಡೆಮಾಡಿಕೊಟ್ಟಿತ್ತು. ಶಾಸಕ ಗೋಪಾಲಕೃಷ್ಣ ಬೇಳೂರು ಮಧ್ಯೆ ಪ್ರವೇಶದಿಂದಾಗಿ ತನಿಖೆ ಚುರುಕುಗೊಂಡಿದೆ ಎಂಬ ಮಾತು ಕೇಳಿಬಂದಿದ್ದು. ಸದಸ್ಯರ ದೂರಿನ ಹಿನ್ನಲೆಯಲ್ಲಿ ತನಿಖಾಧಿಕಾರಿಗಳಾಗಿ ಜಿಲ್ಲಾ ಪಂಚಾಯತಿ ಲೆಕ್ಕಾಧಿಕಾರಿಗಳಾದ ಎಂ. ಪ್ರಕಾಶ್ ಹಾಗೂ ಬಿ.ಚಂದ್ರಪ್ಪ ಸಂಬಂಧಪಟ್ಟ ಕಡತಗಳ ಪರಿಶೀಲನೆ ಕೈಗೊಂಡಿದ್ದು, ಶೀಘ್ರದಲ್ಲೇ ದೂರಿನ ಸತ್ಯಾಸತ್ಯತೆ ಕುರಿತು ಜಿಲ್ಲಾ ಪಂಚಾಯತಿ ಸಿಇಒಗೆ ವರದಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>