ಅರಣ್ಯ ಪ್ರದೇಶದಲ್ಲಿ ಅರೆಬರೆ ಸುಟ್ಟು ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ !
ಸಾಗರ : ತಾಲೂಕಿನ ತ್ಯಾಗರ್ತಿ ಸಮೀಪದ ಬೆಳಂದೂರು ಚೆನ್ನಾಪುರ ಗ್ರಾಮದ ಅರಣ್ಯ ಪ್ರದೇಶದಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಅರೆಬರೆ ಸುಟ್ಟು ಕೊಳೆತ ಸ್ಥಿತಿಯಲ್ಲಿ ಗುರುವಾರ ಸಂಜೆ ಪತ್ತೆಯಾಗಿರುವ ಘಟನೆ ನಡೆದಿದೆ.
ಮೃತದೇಹ ಬೆಳಂದೂರು ಗ್ರಾಮದ ಬತ್ತಿ ರಮೇಶಪ್ಪ (55) ಎಂದು ಗುರುತಿಸಲಾಗಿದೆ. ಬೆಳಂದೂರು ಗ್ರಾಮದ ಬತ್ತಿ ರಮೇಶಪ್ಪ ಎಂಬ ವ್ಯಕ್ತಿ ಕಳೆದ 4 ದಿನಗಳಿಂದ ಕಾಣೆಯಾಗಿದ್ದು ಎಲ್ಲಾ ಕಡೆ ಹುಡುಕಿ ಸಂಬಂಧಿಕರ ಮನೆಗೆ ಹೋಗಿರಬಹುದು ತಿರುಗಿ ಬರುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದ ಕುಟುಂಬಸ್ಥರಿಗೆ ಸುದ್ಧಿ ತಿಳಿದು ತೀವ್ರ ದುಖಃತಪ್ತರಾಗಿದ್ದಾರೆ.
ಚೆನ್ನಾಪುರ ಗ್ರಾಮದ ವ್ಯಕ್ತಿಯೊಬ್ಬರು ಕಳೆದು ಹೋಗಿದ್ದ ಆಕಳು ಕರು ಅರಣ್ಯದಲ್ಲಿ ಹುಡುಕುತ್ತಿದ್ದಾಗ ಮೃತದೇಹ ಕಂಡುಬಂದಿದೆ ಮೃತ ಶರೀರ ಹಾಗೂ ಸುತ್ತಮುತ್ತಲೂ ಕರಕಲು ಸ್ಥಿತಿಯಲ್ಲಿದ್ದುದರಿಂದ ಸಿಡಿಲು ಬಡಿದು ಮೃತಪಟ್ಟಿರಬಹುದೆಂದು ಗ್ರಾಮಸ್ಥರು ಶಂಕಿಸಿದ್ದು ಮರಣೋತ್ತರ ವರದಿ ಹಾಗೂ ಪೊಲೀಸ್ ತನಿಖೆಯಿಂದ ಸತ್ಯಾಂಶ ಹೊರಬರಬೇಕಾಗಿದೆ.