2025-26 ಮುಂಗಾರು ಹಂಗಾಮಿನ ಬೆಳೆ ವಿಮೆ ನೋಂದಣಿ ಆರಂಭ – ರೈತರಿಗೆ ಜುಲೈ 31 & ಆಗಸ್ಟ್ 16 ಕೊನೆ ದಿನಾಂಕ

Written by Koushik G K

Published on:

Bele Vime:2025-26 ನೇ ಸಾಲಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆ (PMFBY) ಜಾರಿಗೆ ಬರುವ ಹಿನ್ನೆಲೆಯಲ್ಲಿ, ಮುಂಗಾರು ಹಂಗಾಮಿನ ಬೆಳೆ ವಿಮೆಗೆ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಈ ಹಂಗಾಮಿನಲ್ಲಿ ಶಿವಮೊಗ್ಗ ಜಿಲ್ಲೆಯ ಆಯ್ದ ಹೋಬಳಿಗಳಲ್ಲಿ ಮಳೆ ಆಶ್ರಿತ ಬೆಳೆಗಳಾದ ರಾಗಿ, ಜೋಳ, ಮತ್ತು ಪಂಚಾಯಿತಿ ಮಟ್ಟದ ನೀರಾವರಿ ಅಥವಾ ಮಳೆ ಆಶ್ರಿತ ಬೆಳೆಗಳಾದ ಭತ್ತ ಹಾಗೂ ಮುಸುಕಿನ ಜೋಳ ಬೆಳೆಗಳನ್ನು ಯೋಜನೆಯಡಿ ಒಳಪಡಿಸಲಾಗಿದೆ.

ಈ ಯೋಜನೆಯನ್ನು ಒರಿಯೆಂಟಲ್ ಜನರಲ್ ಇನ್‌ಶೂರೆನ್ಸ್ ಕಂಪನಿಯ ಸಹಯೋಗದೊಂದಿಗೆ ಜಾರಿಗೆ ತರಲಾಗುತ್ತಿದೆ.

ವಿಮೆ ನೋಂದಣಿ ಅಂತಿಮ ದಿನಾಂಕ:

  • ಮುಸುಕಿನ ಜೋಳ – ಜುಲೈ 31, 2025
  • ಭತ್ತ, ರಾಗಿ, ಜೋಳ – ಆಗಸ್ಟ್ 16, 2025

ಯಾರಿಗೆ ನೋಂದಣಿ ಅಗತ್ಯ?

  • ಬೆಳೆ ಸಾಲ ಪಡೆದ ರೈತರಿಗೆ ಯೋಜನೆ ಕಡ್ಡಾಯವಾಗಿ ಅನ್ವಯಿಸುತ್ತದೆ.
  • ಬೆಳೆ ಸಾಲ ಪಡೆಯದ ರೈತರು ತಮ್ಮ ಪಹಣೆ ದಾಖಲೆ, ಆಧಾರ್ ಸಂಖ್ಯೆ, ಮತ್ತು ಬ್ಯಾಂಕ್ ವಿವರಗಳೊಂದಿಗೆ ಹತ್ತಿರದ ಬ್ಯಾಂಕ್, ಆರ್ಥಿಕ ಸಂಸ್ಥೆಗಳು, ಅಥವಾ ಸಿಎಸ್ಸಿ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.
  • ವಿತರಣೆಗೆ ಮುಂಚೆಯೇ ನೋಂದಾಯಿಸುವ ಅವಕಾಶ ಇದೆ.

ಹೆಚ್ಚಿನ ಮಾಹಿತಿಗಾಗಿ: ಹತ್ತಿರದ ಕೃಷಿ ಇಲಾಖೆ ಕಚೇರಿ ಅಥವಾ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಿ..

Read more :ಕಾಡಾನೆ ದಾಳಿ: ಭದ್ರಾವತಿಯಲ್ಲಿ ವ್ಯಕ್ತಿ ದುರ್ಮರಣ !

Leave a Comment