SHIVAMOGGA ; ಮಲೆನಾಡಿನಲ್ಲಿ ಕಾಡಾನೆಗಳ ಹಾವಳಿ ಮುಂದುವರೆದಿದ್ದು ಭಾನುವಾರ ತಡರಾತ್ರಿ ಎರಡು ಕಾಡಾನೆಗಳು ದಾಳಿ ನಡೆಸಿ ರೈತರು ಬೆಳೆದ ಬೆಳೆಗಳನ್ನು ಸಂಪೂರ್ಣ ನಾಶ ಮಾಡಿರುವ ಘಟನೆ ಶಿವಮೊಗ್ಗ ನಗರದಿಂದ 9 ಕಿ.ಮೀ. ದೂರದಲ್ಲಿರುವ ಪುರದಾಳು ಗ್ರಾಮದಲ್ಲಿ ನಡೆದಿದೆ.


ಪುರದಾಳು ಗ್ರಾಮದ ರಾಜೇಶ್ ಹಾಗೂ ಬೀರಪ್ಪ, ನಾಗರಾಜ್ ಎಂಬುವರ ಜಮೀನಿಗೆ ಎರಡು ಕಾಡಾನೆಗಳು ದಾಳಿ ಮಾಡಿ ಅಡಿಕೆ ಹಾಗೂ ತೆಂಗಿನ ಮರಗಳನ್ನು ಬುಡಮೇಲು ಮಾಡಿದ್ದು ಜೊತೆಗೆ ಜೋಳ ಹಾಗೂ ಕಬ್ಬು ಬೆಳೆಗಳನ್ನು ನಾಶ ಮಾಡಿದ್ದು ಲಕ್ಷಾಂತರ ರೂ. ನಷ್ಟ ಸಂಭವಿಸಿದೆ.

ಆನೆಗಳ ಬಗ್ಗೆ ಮಾಹಿತಿ ನೀಡಿದ್ರೂ ಕ್ರಮ ಕೈಗೊಳ್ಳದ ಅರಣ್ಯ ಇಲಾಖೆ ವಿರುದ್ಧ ರೈತರು ಆಕ್ರೋಶ ಹೊರಹಾಕಿದ್ದಾರೆ, ಆನೆ ದಾಳಿಗೆ ಪರಿಹಾರ ನೀಡುವಂತೆ ರೈತರು ಒತ್ತಾಯಿಸಿದ್ದಾರೆ.

ಕೂಡಿ ಗ್ರಾಮಕ್ಕೂ ಲಗ್ಗೆ ಇಟ್ಟ ಆನೆಗಳು !
ಇನ್ನೂ ಕಳೆದ ರಾತ್ರಿ ಶಿವಮೊಗ್ಗ ತಾಲೂಕಿನ ಕೂಡಿ ಗ್ರಾಮದ ಕಿರುವಾಸೆ ನಾರಾಯಣಪ್ಪ ಜಮೀನಿಗೆ ಸುಮಾರು 2 ರಿಂದ 3 ಕಾಡಾನೆಗಳು ದಾಳಿ ಮಾಡಿ ಜೋಳ ಮತ್ತು ಅಡಿಕೆ ಗಿಡಗಳನ್ನು ತಿಂದು ನಾಶ ಮಾಡಿವೆ. ಅರಣ್ಯ ಇಲಾಖೆ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಸೂಕ್ತ ಪರಿಹಾರ ಒದಗಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.



ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.