Ripponpete

ಕಲ್ಲೂರು ಸುತ್ತಮುತ್ತ ಕಾಡಾನೆಗಳಿಂದ ಬೆಳೆ ನಾಶ ; ಆತಂಕದಲ್ಲಿ ರೈತರು !

RIPPONPETE ; ಸಮೀಪದ ಹೆದ್ದಾರಿಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಲ್ಲೂರು, ತಳಲೆ, ಕಗ್ಗಲಿಜಡ್ಡು ಸುತ್ತಮುತ್ತ ಕಾಡಾನೆಗಳು ಕಾಣಿಸಿಕೊಂಡು ರೈತರು ಬೆಳೆದ ಭತ್ತ, ಅಡಿಕೆ, ಬಾಳೆಗಿಡಗಳನ್ನು ನಾಶಗೊಳಿಸಿರುವ ಘಟನೆ ನಡೆದಿದ್ದು ರೈತ ನಾಗರೀಕರಲ್ಲಿ ಆತಂಕಕ್ಕೆ ಕಾರಣವಾಗಿದೆ.

WhatsApp Group Join Now
Telegram Group Join Now
Instagram Group Join Now

ವಿಡಿಯೋ ನೋಡಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ. https://www.facebook.com/share/v/18nCZkLL4o

ಕಳೆದ ಕೆಲದಿನಗಳಿಂದ ಕಾಡಾನೆಗಳು ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಾರೋಹಿತ್ತಲು, ಬಸವಾಪುರ, ಕೋಣನಜಡ್ಡು, ಸೂಡೂರು, ಹೊರಬೈಲು, ಶೆಟ್ಟಿಕೆರೆ, ಕೊಳವಂಕ, ಬಟಾಣಿಜಡ್ಡು ಸುತ್ತಮುತ್ತ ಓಡಾಡುತ್ತಿವೆ ಎಂಬ ಭಯದಲ್ಲಿ ರೈತನಾಗರೀಕರು ಭಯಪಡುವತ್ತಾಗಿದ್ದು ಈಗ ಹೆದ್ದಾರಿಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬುಧವಾರ, ಗುರುವಾರ ರಾತ್ರಿ ಕಾಡಾನೆಗಳು ಕಾಣಿಸಿಕೊಳ್ಳುವುದರೊಂದಿಗೆ ಭತ್ತ ಮತ್ತು ಅಡಿಕೆ ತೋಟಗಳಲ್ಲಿ ಹಾದು ಹೋಗುವ ಮೂಲಕ ಬೆಳೆಗಳನ್ನು ತಿಂದು ಹಾನಿಗೊಳಿಸಿರುವುರುವುದು ರೈತರನ್ನು ನಿದ್ದೆಗೆಡಿಸುವಂತೆ ಮಾಡಿವೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಇನ್ನಾದರೂ ಅರಣ್ಯ ಇಲಾಖೆಯವರು ಇತ್ತ ಗಮನಹರಿಸಿ ಕಾಡಾನೆಗಳನ್ನು ಕೂಡಲೇ ಸ್ಥಳಾಂತರ ಮಾಡಿ ರೈತರ ಆತಂಕ ದೂರ ಮಾಡುವಂತೆ ಆಗ್ರಹಿಸಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]