RIPPONPETE ; ಸಮೀಪದ ಹೆದ್ದಾರಿಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಲ್ಲೂರು, ತಳಲೆ, ಕಗ್ಗಲಿಜಡ್ಡು ಸುತ್ತಮುತ್ತ ಕಾಡಾನೆಗಳು ಕಾಣಿಸಿಕೊಂಡು ರೈತರು ಬೆಳೆದ ಭತ್ತ, ಅಡಿಕೆ, ಬಾಳೆಗಿಡಗಳನ್ನು ನಾಶಗೊಳಿಸಿರುವ ಘಟನೆ ನಡೆದಿದ್ದು ರೈತ ನಾಗರೀಕರಲ್ಲಿ ಆತಂಕಕ್ಕೆ ಕಾರಣವಾಗಿದೆ.
ವಿಡಿಯೋ ನೋಡಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ. https://www.facebook.com/share/v/18nCZkLL4o
ಕಳೆದ ಕೆಲದಿನಗಳಿಂದ ಕಾಡಾನೆಗಳು ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಾರೋಹಿತ್ತಲು, ಬಸವಾಪುರ, ಕೋಣನಜಡ್ಡು, ಸೂಡೂರು, ಹೊರಬೈಲು, ಶೆಟ್ಟಿಕೆರೆ, ಕೊಳವಂಕ, ಬಟಾಣಿಜಡ್ಡು ಸುತ್ತಮುತ್ತ ಓಡಾಡುತ್ತಿವೆ ಎಂಬ ಭಯದಲ್ಲಿ ರೈತನಾಗರೀಕರು ಭಯಪಡುವತ್ತಾಗಿದ್ದು ಈಗ ಹೆದ್ದಾರಿಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬುಧವಾರ, ಗುರುವಾರ ರಾತ್ರಿ ಕಾಡಾನೆಗಳು ಕಾಣಿಸಿಕೊಳ್ಳುವುದರೊಂದಿಗೆ ಭತ್ತ ಮತ್ತು ಅಡಿಕೆ ತೋಟಗಳಲ್ಲಿ ಹಾದು ಹೋಗುವ ಮೂಲಕ ಬೆಳೆಗಳನ್ನು ತಿಂದು ಹಾನಿಗೊಳಿಸಿರುವುರುವುದು ರೈತರನ್ನು ನಿದ್ದೆಗೆಡಿಸುವಂತೆ ಮಾಡಿವೆ.
ಇನ್ನಾದರೂ ಅರಣ್ಯ ಇಲಾಖೆಯವರು ಇತ್ತ ಗಮನಹರಿಸಿ ಕಾಡಾನೆಗಳನ್ನು ಕೂಡಲೇ ಸ್ಥಳಾಂತರ ಮಾಡಿ ರೈತರ ಆತಂಕ ದೂರ ಮಾಡುವಂತೆ ಆಗ್ರಹಿಸಿದ್ದಾರೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.