ಸಿ.ಟಿ. ರವಿ ಹೇಳಿಕೆ ವಿವಾದ – ಸವಿತಾ ಸಮಾಜ ಕಿಡಿ ; ಕ್ಷಮೆಯಾಚಿಸದಿದ್ದರೆ ರಾಜ್ಯವ್ಯಾಪಿ ಚಳವಳಿ ಎಚ್ಚರಿಕೆ

Written by Mahesha Hindlemane

Published on:

ರಿಪ್ಪನ್‌ಪೇಟೆ : ಮಾಜಿ ಸಚಿವ ಸಿ.ಟಿ. ರವಿ ಸವಿತಾ ಸಮಾಜದ ಸದಸ್ಯರ ಕುರಿತು ಅವಹೇಳನಕಾರಿ ಪದ ಬಳಸಿರುವ ಆರೋಪದ ಹಿನ್ನೆಲೆ, ಸವಿತಾ ಸಮಾಜದ ಸದಸ್ಯರು ಕಿಡಿಕಾರಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಸಮಾಜದ ಅಧ್ಯಕ್ಷ ಸಿದ್ದೇಶ್ ಭಂಡಾರಿ ಮಾತನಾಡುತ್ತಾ, “ಒಂದು ಜನಾಂಗದ ಗೌರವಕ್ಕೆ ಧಕ್ಕೆಯಾದಂತೆ ಮಾಜಿ ಸಚಿವರು ಹೇಳಿಕೆ ನೀಡಿರುವುದು ಖಂಡನೀಯ. ಸಿ.ಟಿ. ರವಿ ಅವರು ತಕ್ಷಣವೇ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ರಾಜ್ಯವ್ಯಾಪಿ ಉಗ್ರ ಪ್ರತಿಭಟನೆಗೆ ಸಿದ್ಧರಾಗಿದ್ದೇವೆ” ಎಂದು ಎಚ್ಚರಿಕೆ ನೀಡಿದರು.

ಸಮಾಜದ ಪ್ರತಿನಿಧಿಗಳು ನಾಡಕಚೇರಿ ಮುಖಾಂತರ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿ, ಸಿ.ಟಿ. ರವಿ ಅವರ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದ್ದಾರೆ. “ಈ ರೀತಿಯ ಮಾತುಗಳು ಸಾಮಾಜಿಕ ಸೌಹಾರ್ದಕ್ಕೆ ಧಕ್ಕೆಯುಂಟುಮಾಡುತ್ತವೆ,” ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ರಿಪ್ಪನ್‌ಪೇಟೆ ಸವಿತಾ ಸಮಾಜದ ಕಾರ್ಯದರ್ಶಿ ಸುನೀಲ್‌ಕುಮಾರ್ ವೈ.ಎಸ್., ಪದಾಧಿಕಾರಿಗಳಾದ ಕೆ.ಎನ್. ಮಂಜುನಾಥ್, ಬಾಲರಾಜ್, ರಾಜೇಶ್, ಅರುಣ, ವಾಸು, ಸತೀಶ್, ಚಿರಂತ್, ಪಾಂಡುರಂಗ, ಮಂಜುನಾಥ್ ಬೈರಾಪುರ ಹಾಗೂ ಇತರರು ಉಪಸ್ಥಿತರಿದ್ದರು.

Leave a Comment