ಹೊಸನಗರ

ವಿದ್ಯಾರ್ಥಿ ದೆಸೆಯಲ್ಲೆ ಕ್ರೀಡಾಸ್ಪೂರ್ತಿ ರೂಢಿಸಿಕೊಳ್ಳಿ ; ರಾಷ್ಟ್ರೀಯ ಪ್ರೋ ಕಬಡ್ಡಿ ಕ್ರೀಡಾಪಟು ಗಗನ್ ಗೌಡ ಕಿವಿಮಾತು

HOSANAGARA ; ವಿದ್ಯಾರ್ಥಿ ದೆಸೆಯಲ್ಲಿ ಪಠ್ಯದ ಜೊತೆ ಕ್ರೀಡಾಸಕ್ತಿ ವೃದ್ದಿಸಿಕೊಂಡಲ್ಲಿ ಉತ್ತಮ ಕ್ರೀಡಾಪಟುವಾಗಿ ರೂಪುಗೊಳ್ಳಲು ಸತತ ಪರಿಶ್ರಮ ಹಾಕಬೇಕೆಂದು ರಾಷ್ಟ್ರೀಯ ಪ್ರೋ ಕಬ್ಬಡಿ ಕ್ರೀಡಾಪಟು, ಸ್ಥಳೀಯರಾದ ಗಗನ್ ಗೌಡ ತಿಳಿಸಿದರು.

WhatsApp Group Join Now
Telegram Group Join Now
Instagram Group Join Now

ಇದೇ ಅಕ್ಟೋಬರ್ 18 ಮತ್ತು 19 ರಂದು ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ನಡೆದ 2024-25ನೇ ಸಾಲಿನ 17 ವರ್ಷ ವಯೋಮಿತಿ ಒಳಗಿನ ಬಾಲಕಿಯರ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ವಿಜೇತರಾಗಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ತಂಡಕ್ಕೆ ಪಟ್ಟಣದ ಶ್ರೀ ರಾಮಕೃಷ್ಣ ವಿದ್ಯಾಸಂಸ್ಥೆ ಆವರಣದಲ್ಲಿ ಆಯೋಜಿಸಿರುವ ಐದು ದಿನಗಳ ತರಬೇತಿ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸಮಯಪಾಲನೆ, ಶಿಸ್ತು, ಸತತ ಪರಿಶ್ರಮದಿಂದ ಮಹತ್ತರ ಸಾಧಿಸಲು ಸಾಧ್ಯವಿದೆ ಎಂದ ಗಗನ್ ಗೌಡ, ರಾಷ್ಟ್ರೀಯ ಕ್ರೀಡಾಕೂಟದಲ್ಲಿ ವಿಜೇತರಾಗಿ ಹೆತ್ತವರಿಗೆ, ಓದಿದ ಶಾಲೆ, ನಾಡಿಗೆ ಕೀರ್ತಿ ತರುವಂತೆ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಈ ಸಂದರ್ಭದಲ್ಲಿ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆ ರಾಮಕೃಷ್ಣ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿಯರಾದ ಹೆಚ್.ಓ.ಶ್ರಾವ್ಯ, ಬಿ.ಆರ್.ಶ್ರೇಯಾ, ವಿ.ಎಸ್.ಐಶ್ವರ್ಯ, ಎನ್.ಸಂಜನ, ಆರ್. ದೀಕ್ಷಾ ಸೇರಿದಂತೆ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಬಾಲಚಂದ್ರ ರಾವ್, ರಾಮಕೃಷ್ಣ ವಿದ್ಯಾಸಂಸ್ಥೆ ಮುಖ್ಯಸ್ಥ ದೇವರಾಜ್ ತರಬೇತುದಾರ ವಿನಯ್, ಧನಂಜಯ, ಪತ್ರಕರ್ತ ಶ್ರೀಕಂಠ, ಮನು ಸುರೇಶ್ ಉಪಸ್ಥಿತರಿದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]