RIPPONPETE – ವಿದ್ಯುತ್ ಸ್ಪರ್ಶಿಸಿ ವೃದ್ಧೆ ಸಾ*ವು | ಬಾವಿಗೆ ಹಾರಿ ಮಹಿಳೆ ಆತ್ಮಹ*ತ್ಯೆ !

Written by Mahesh Hindlemane

Published on:

RIPPONPETE | ಕರುವನ್ನು ಮೇಯಲು ಬಿಡಲು ಹೋಗುವಾಗ ಬೇಲಿಯಲ್ಲಿನ ವಿದ್ಯುತ್ ಹರಿದು ಸ್ಥಳದಲ್ಲೇ ವೃದ್ಧೆ ಸಾವನ್ನಪ್ಪಿದ ಘಟನೆ ಗವಟೂರು ಗ್ರಾಮದ ಮಲ್ಲಾಪುರದಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ವಿದ್ಯುತ್ ಪಂಪ್‌ಸೆಟ್‌ಗೆ ತಾತ್ಕಾಲಿಕವಾಗಿ ಅಳವಡಿಸಲಾದ ವಯರ್ ಅನ್ನು ಬೇಲಿ ಕಂಬಕ್ಕೆ ಸುತ್ತಿಡಲಾಗಿದ್ದು ಇದು ಮುಳ್ಳು ತಂತಿ ಬೇಲಿಗೆ ತಾಕಿದ್ದರ ಪರಿಣಾಮದಿಂದಾಗಿ ಕರು ಹೊಡೆಯಲು ಹೋದ ವೃದ್ಧೆ ಬೇಲಿ ಸ್ಪರ್ಶಿಸಿದ್ದರಿಂದ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆನ್ನಲಾಗಿದೆ.

ಮೃತ ವೃದ್ಧೆ ಮಲ್ಲಾಪುರ ಪಾರ್ವತಮ್ಮ ಗಂಗಾಧರಯ್ಯ (67) ಎಂದು ಗುರುತಿಸಲಾಗಿದೆ. ಮೃತರಿಗೆ ಇಬ್ಬರು ಪುತ್ತರಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಎಸ್.ಪಿ.ಪ್ರವೀಣ್ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಬಾವಿಗೆ ಹಾರಿ ಆತ್ಮಹತ್ಯೆ !

RIPPONPETE | ಇಲ್ಲಿಗೆ ಸಮೀಪದ ಮಾದಾಪುರ ಗ್ರಾಮದಲ್ಲಿ ಮಹಿಳೆಯೊಬ್ಬರು ಶನಿವಾರ ರಾತ್ರಿ ಬಾವಿಗೆ ಹಾರಿ ಅತ್ಮಹತ್ಯೆ ಮಾಡಿಕೊಂಡ ಘಟನೆ ರಿಪ್ಪನ್‌ಪೇಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕಳೆದ ನಾಲ್ಕು ವರ್ಷದ ಹಿಂದೆ ಕೊರೊನಾ ಕಾಯಿಲೆಯಿಂದ ಸಾವನ್ನಪ್ಪಿದ ತನ್ನ ಪತಿಯ ಕೊರಗಿನಿಂದಾಗಿ ಮಾದಾಪುರ ವಾಸಿ ಸಾಹಿನಾಬಾನು ಎಂಬ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಹೇಳಲಾಗಿದೆ.
ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author Profile

Mahesh Hindlemane
Mahesh Hindlemane
ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.

Leave a Comment