ಶಿವಮೊಗ್ಗ ಸುದ್ದಿ

ಹಬ್ಬಗಳನ್ನು ಸೌಹಾರ್ದಯುತವಾಗಿ ಸಂಭ್ರಮಿಸಬೇಕು : ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

ಶಿವಮೊಗ್ಗ– ಆಗಸ್ಟ್ 27ರಂದು ಗಣೇಶ ಚತುರ್ಥಿ ಹಾಗೂ ಸೆಪ್ಟೆಂಬರ್ 5ರಂದು ಈದ್‌ಮಿಲಾದ್ ಹಬ್ಬಗಳು ಜಿಲ್ಲೆಯಾದ್ಯಂತ ನಡೆಯಲಿದ್ದು, ಎಲ್ಲಾ ಧರ್ಮದ ಭಾಂಧವರು ಸೌಹಾರ್ದಯುತವಾಗಿ, ಶಾಂತಿ-ಸುವ್ಯವಸ್ಥೆಯೊಂದಿಗೆ ಹಬ್ಬಗಳನ್ನು ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಮನವಿ ಮಾಡಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿ, ಹಬ್ಬದ ಮೆರವಣಿಗೆ ವೇಳೆ ಬೈಕ್ ರ‍್ಯಾಲಿ ನಡೆಸದಂತೆ, ಡಿಜೆ ಧ್ವನಿವರ್ಧಕ ಬಳಸದೆ ಮೆರವಣಿಗೆ ನಡೆಸುವಂತೆ ಈಗಾಗಲೇ ಆದೇಶ ನೀಡಲಾಗಿದೆ ಎಂದು ತಿಳಿಸಿದರು. ಗಣಪತಿ ವಿಸರ್ಜನೆ ಸ್ಥಳಗಳಲ್ಲಿ ತೆಪ್ಪ ವ್ಯವಸ್ಥೆ ಕಡ್ಡಾಯವಾಗಿದ್ದು, ನೀರಿಗೆ ಇಳಿಯುವವರು ಈಜು ಬಲ್ಲವರಾಗಿರಬೇಕು. ಒಮ್ಮೆ ಹೆಚ್ಚುಮಟ್ಟಿಗೆ 3-4 ಜನರಷ್ಟೇ ನೀರಿಗೆ ಇಳಿಯಲು ಅವಕಾಶವಿದ್ದು, ಲೈಫ್‌ಜೆಕೆಟ್ ಧರಿಸುವುದು ಕಡ್ಡಾಯ ಎಂದು ಹೇಳಿದರು.

ಶಾಂತಿಯುತ ಮೆರವಣಿಗೆಗೆ ಒತ್ತು

ಗಣಪತಿ ಹಾಗೂ ಈದ್‌ಮಿಲಾದ್ ಹಬ್ಬದ ಮೆರವಣಿಗೆಗಳು ಶಾಂತಿಯುತವಾಗಿ ನಡೆಯಬೇಕು. ಮತ್ತೊಂದು ಸಮುದಾಯ ಅಥವಾ ಧರ್ಮದ ಭಾವನೆಗಳಿಗೆ ಧಕ್ಕೆ ಉಂಟಾಗದಂತೆ ಎಚ್ಚರಿಕೆ ವಹಿಸಬೇಕೆಂದು ಸೂಚಿಸಿದರು. ಮುಖ್ಯ ಬೀದಿಗಳು ಹಾಗೂ ವರ್ತುಲಗಳಲ್ಲಿ ಸಮರ್ಪಕ ಬೀದಿ ದೀಪಗಳನ್ನು ಅಳವಡಿಸಲು ಹಾಗೂ ಸಿಸಿ ಕ್ಯಾಮೆರಾ, ಅಗತ್ಯವಿದ್ದಲ್ಲಿ ಡ್ರೋಣ ಕಣ್ಗಾವಲು ವ್ಯವಸ್ಥೆ ಕಲ್ಪಿಸಲು ಸೂಚನೆ ನೀಡಿದರು.

ಸುರಕ್ಷತಾ ಕ್ರಮಗಳು

ಗ್ರಾಮೀಣ ಪ್ರದೇಶಗಳ ಕೆರೆ, ಕಟ್ಟೆ, ಕಾಲುವೆಗಳಂತಹ ವಿಸರ್ಜನೆ ಸ್ಥಳಗಳಲ್ಲಿ ಸೂಚನಾ ಫಲಕಗಳನ್ನು ಅಳವಡಿಸಿ, ಸುರಕ್ಷತೆಗಾಗಿ ಸ್ಥಳೀಯ ಅಧಿಕಾರಿಗಳು ಗಮನಹರಿಸಬೇಕು. ಶಿವಮೊಗ್ಗ, ಭದ್ರಾವತಿ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ವೀಕ್ಷಣಾ ಗೋಪುರಗಳನ್ನು ನಿರ್ಮಿಸಲು ಸ್ಥಳೀಯ ಆಡಳಿತ ಕ್ರಮ ಕೈಗೊಳ್ಳಲಿದೆ. ಹಬ್ಬದ ದಿನ ವಿದ್ಯುತ್ ವ್ಯತ್ಯಯವಾಗದಂತೆ ಮೆಸ್ಕಾಂ ವಿಶೇಷ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಪೊಲೀಸ್ ಇಲಾಖೆಯ ಸಹಕಾರ

ಜಿಲ್ಲಾ ಪೊಲೀಸ‍್ ವರಿಷ್ಠಾಧಿಕಾರಿ ಜಿ.ಕೆ. ಮಿಥುನಕುಮಾರ್ ಅವರು ಮಾತನಾಡಿ, ಮೆರವಣಿಗೆ, ಉತ್ಸವ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ, ಬೀದಿದೀಪ, ರಾಜ ಬೀದಿಗಳ ಸ್ವಚ್ಛತೆ ಹಾಗೂ ಆರೋಗ್ಯ ಇಲಾಖೆ ಮೂಲಕ ಅಂಬುಲೆನ್ಸ್ ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಸೂಚಿಸಿದರು. ಅಗತ್ಯವಿದ್ದಲ್ಲಿ ಪೊಲೀಸರು ಸಂಪೂರ್ಣ ಸಹಕಾರ ನೀಡಲಿದ್ದಾರೆ ಎಂದರು.

ಪರಿಸರ ಸ್ನೇಹಿ ವಿಗ್ರಹಗಳ ಬಳಕೆ

ಥರ್ಮೋಕೋಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರಿಸ್‌ನ ಗಣಪತಿ ವಿಗ್ರಹಗಳನ್ನು ಬಳಸದಂತೆ ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ಮನವಿ ಮಾಡಿದರು. ಇವು ನೈಸರ್ಗಿಕವಾಗಿ ಕರಗದ ಕಾರಣ ಜಲಮೂಲ ಹಾಗೂ ಪರಿಸರಕ್ಕೆ ಹಾನಿ ಉಂಟಾಗುತ್ತದೆ ಎಂದು ಎಚ್ಚರಿಸಿದರು. ಬದಲಿಗೆ ಜೇಡಿಮಣ್ಣಿನಿಂದ ತಯಾರಿಸಿದ ಪರಿಸರ ಸ್ನೇಹಿ ವಿಗ್ರಹಗಳನ್ನು, ಸಸ್ಯ ಆಧಾರಿತ ಬಣ್ಣಗಳಿಂದ ಅಲಂಕರಿಸಿದ ವಿಗ್ರಹಗಳನ್ನು ಬಳಸುವಂತೆ ಕರೆ ನೀಡಿದರು. “ಈ ಗಣೇಶ ಚತುರ್ಥಿಯನ್ನು ಪರಿಸರ ಸ್ನೇಹಿಯಾಗಿ ಆಚರಿಸಿ, ಹಸಿರು ಪಟಾಕಿ ಬಳಸಿ,” ಎಂದು ಅವರು ಮನವಿ ಮಾಡಿದರು.

ಸಭೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಜ್ಜಯ್ಯ, ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗರೆಡ್ಡಿ, ಮಹಾನಗರಪಾಲಿಕೆ ಆಯುಕ್ತ ಮಾಯಣ್ಣಗೌಡ, ಉಪವಿಭಾಗಾಧಿಕಾರಿ ಸತ್ಯನಾರಾಯಣ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಜಯಲಕ್ಷ್ಮಮ್ಮ ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಜರಿದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650