SAGARA ; ರೈಲ್ವೆ ಹಳಿ ಮೇಲೆ ಯುವಕನೋರ್ವನ ಶವ ಪತ್ತೆಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಅಂದಾಸುರ ರೈಲ್ವೆ ಗೇಟ್ ಬಳಿ ನಡೆದಿದೆ.
ಅಂದಾಸುರ ರೈಲ್ವೆ ಗೇಟ್ ಸಮೀಪದಲ್ಲಿರುವ ದೇವಸ್ಥಾನವೊಂದರ ಮುಂಭಾಗದಲ್ಲಿ ಮೃತದೇಹ ಪತ್ತೆಯಾಗಿದ್ದು, ಮೃತನನ್ನು ದಾವಣಗೆರೆ ಮೂಲದ ಬಸವರಾಜ್ ಎಂದು ಗುರುತಿಸಲಾಗಿದೆ. ಈತ ರಿಪ್ಪನ್ಪೇಟೆ ಸಮೀಪದ ಕೋಡೂರಿನಲ್ಲಿ ಕಳೆದೆರಡು ವರ್ಷಗಳಿಂದ ಜೆಸಿಬಿ ಆಪರೇಟರ್ ಕೆಲಸ ಮಾಡುತ್ತಿರುವುದಾಗಿ ತಿಳಿದುಬಂದಿದೆ.

ರೈಲು ಹಳಿಯ ಮೇಲೆ ಮೃತದೇಹ ಪತ್ತೆಯಾಗಿದ್ದು ಮುಖದ ಭಾಗದಲ್ಲಿ ಗಾಯವಾಗಿದೆ. ಮೃತ ವ್ಯಕ್ತಿಗೆ ಸಂಬಂಧಿಸಿದ ಬೈಕ್ ಹಾಗೂ ವಸ್ತುಗಳು ರೈಲು ಹಳಿಯ ಪಕ್ಕದಲ್ಲಿರಿಸಲಾಗಿದ್ದು ಇದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಪೊಲೀಸ್ ತನಿಖೆಯಿಂದ ಈ ಪ್ರಕರಣದ ಸತ್ಯಾಂಶ ಹೊರಬರಬೇಕಾಗಿದೆ.
ರೈಲು ಗುದ್ದಿ ಮೃತಪಟ್ಟಿದ್ದಲ್ಲಿ ಮೃತದೇಹ ಚೆಲ್ಲಾಪಿಲ್ಲಿಯಾಗಿ ಬೇರೆ ಕಡೆ ಬೀಳಬೇಕಾಗಿತ್ತು, ಒಂದು ವೇಳೆ ರೈಲು ಹರಿದು ಸಾವನ್ನಪ್ಪಿದ್ದರೆ ಮೃತದೇಹ ತುಂಡಾಗುತಿತ್ತು ಹಾಗಾಗಿ ಎಲ್ಲೋ ಕೊಲೆ ಮಾಡಿ ಇಲ್ಲಿ ತಂದು ಬಿಸಾಕಿದ್ದಾರೆ ಎಂದು ಸಾರ್ವಜನಿಕರು ಸಂಶಯ ವ್ಯಕ್ತಪಡಿಸುತ್ತಿದ್ದಾರೆ.
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
RipponpeteJune 4, 2025ಅಮ್ಮನಘಟ್ಟ ನೂತನ ಶಿಲಾಮಯ ದೇವಾಲಯ ಲೋಕಾರ್ಪಣೆ ; ದೇವಸ್ಥಾನದಲ್ಲಿ ಜಾತಿ ಭೇದ ಭಾವನೆ ಬೇಡ
ShivamoggaJune 3, 2025ಸಂಪತ್ತಿನೊಂದಿಗೆ ಒಂದಿಷ್ಟಾದರೂ ಧರ್ಮ ಪ್ರಜ್ಞೆ ಅವಶ್ಯಕ ; ರಂಭಾಪುರಿ ಜಗದ್ಗುರುಗಳು
RipponpeteJune 3, 2025ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ ದೇವಸ್ಥಾನದ 108 ಮೆಟ್ಟಿಲುಗಳ ನಿರ್ಮಾಣಕ್ಕೆ ಸಂಸದ ಬಿ.ವೈ. ರಾಘವೇಂದ್ರ ಶಿಲನ್ಯಾಸ
RipponpeteJune 2, 2025ಕೊಪ್ಪಳ ಗವಿಸಿದ್ದೇಶ್ವರ ಮಠದ ಶ್ರೀಗಳು ಶಿವಮೊಗ್ಗ ಬೆಕ್ಕಿನಕಲ್ಮಠಕ್ಕೆ ಭೇಟಿ