ಶಿವಮೊಗ್ಗ ಸುದ್ದಿ

ದ್ವಿತೀಯ ಪಿಯು ಫಲಿತಾಂಶ ; ತೀರ್ಥಹಳ್ಳಿಯ ದೀಕ್ಷಾ ರಾಜ್ಯಕ್ಕೆ ಟಾಪರ್ !

ತೀರ್ಥಹಳ್ಳಿ ; ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ವಿಜ್ಞಾನ ವಿಭಾಗದಲ್ಲಿ ತೀರ್ಥಹಳ್ಳಿಯ ವಾಗ್ದೇವಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ದೀಕ್ಷಾ ಆರ್. ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

WhatsApp Group Join Now
Telegram Group Join Now
Instagram Group Join Now

ತೀರ್ಥಹಳ್ಳಿಯ ಬೆಟ್ಟಮಕ್ಕಿ ನಿವಾಸಿ, ರಾಘವೇಂದ್ರ ಕಲ್ಕೂರು ಹಾಗೂ ಉಷಾ ದಂಪತಿಗಳ ಪುತ್ರಿ ದೀಕ್ಷಾ ತೀರ್ಥಹಳ್ಳಿಯ ವಾಗ್ದೇವಿ ಪಿ.ಯು. ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ್ದರು. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ 600ಕ್ಕೆ 599 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಅಪ್ಪ-ಅಮ್ಮ ಇಬ್ಬರೂ ಸರ್ಕಾರಿ ಶಾಲೆ ಶಿಕ್ಷಕರಾಗಿದ್ದು ಮಗಳ ಸಾಧನೆಗೆ ಸಂತಸ ವ್ಯಕ್ತಪಡಿಸಿದ್ದಾರೆ. ತಂದೆ ರಾಘವೇಂದ್ರ ಕಲ್ಕೂರು ಮೇಗರವಳ್ಳಿ ಶಾಲೆಯಲ್ಲಿ ಶಿಕ್ಷಕ, ತಾಯಿ ಉಷಾ.ವಿ. ತೀರ್ಥಹಳ್ಳಿಯ ಬಾಲಕಿಯ ಪ್ರೌಢಶಾಲೆ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ನಾನು ಪ್ರತಿದಿನ ಓದುತ್ತಿದ್ದೆ. ಕಾಲೇಜಿನಲ್ಲಿ ಉಪನ್ಯಾಸಕರು ಚೆನ್ನಾಗಿ ಕಲಿಸುತ್ತಿದ್ದರು. ಯಾವುದೇ ಡೌಟುಗಳಿದ್ದರು ತಿಳಿಸಿ ಕೊಡುತ್ತಿದ್ದರು. ಅಲ್ಲದೆ ಯೂಟ್ಯೂಬ್‌ನಲ್ಲಿಯೂ ವಿಷಯಕ್ಕೆ ಸಂಬಂಧಿಸಿದ ವಿಡಿಯೋಗಳನ್ನು ನೋಡುತ್ತಿದ್ದೆ. ಆದ್ದರಿಂದ ವಿಷಯಗಳು ಹೆಚ್ಚು ಮನದಟ್ಟಾದವು. ಇದು ಪರೀಕ್ಷೆಯಲ್ಲಿ ಅನುಕೂಲವಾಯಿತು. ಮುಂದೆ ಇಂಜಿನಿಯರ್‌ ಆಗಬೇಕು ಎಂಬ ಹಂಬಲವಿದೆ.
– ದೀಕ್ಷಾ ಆರ್‌, ವಿದ್ಯಾರ್ಥಿನಿ

ಸಮುದಾಯದತ್ತ ಶಾಲೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದೆ. ಮಧ್ಯಾಹ್ನ ಫಲಿತಾಂಶ ಚೆಕ್ ಮಾಡಿದಾಗ 599 ಅಂಕ ಬಂದಿರುವುದು ಕಂಡು ನಂಬಲು ಸಾಧ್ಯವಾಗಲಿಲ್ಲ. ಶಾಲೆಯಿಂದ ಅನುಮತಿ ಪಡೆದು ಮನೆಗೆ ಬಂದು ಮಗಳನ್ನು ಅಪ್ಪಿಕೊಂಡು ಸಂಭ್ರಮಿಸಿದೆ.
– ಉಷಾ ಶಿಕ್ಷಕಿ, ದೀಕ್ಷಾ ತಾಯಿ

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]