ಹೊಸನಗರ ; ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಐದು ವಿವಿಧ ಉಚಿತ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ವ್ಯಾಪಕ ಸರ್ವರ್ನ ತಾಂತ್ರಿಕ ದೋಷ ಕಂಡು ಬರುತ್ತಿರುವ ಹಿನ್ನಲೆಯಲ್ಲಿ ಈ ಕುರಿತು ಜಿಲ್ಲಾ ಮಟ್ಟದ ನಿಯೋಗದೊಂದಿಗೆ ಯೋಜನೆಯ ರಾಜ್ಯಾಧ್ಯಕ್ಷರ ಭೇಟಿ ಮಾಡಿ ಯೋಜನೆ ಜನಪರವಾಗಿ ಜಾರಿಗೊಳಿಸಲು ಅನುಕೂಲ ಆಗುವಂತೆ ಕ್ರಮಕೈಗೊಳ್ಳಲು ಮನವಿ ಸಲ್ಲಿಸಲಾಗುವುದು ಎಂದು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಬಿ. ಚಿದಂಬರ್ ವಿಷಯ ಪ್ರಸ್ತಾಪಿಸಿದರು.
ಇಲ್ಲಿನ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ 7ನೇ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಿಡಿಪಿಓ ಗಾಯತ್ರಿ ಮಾತನಾಡಿ, ತಾಲೂಕಿನಲ್ಲಿ ಈವರೆಗೆ 29,011 ಕಾರ್ಡ್ದಾರರು ಪೈಕಿ 26,534 ಮಂದಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗಿದ್ದು ಉಳಿದ 2437 ಮಂದಿ ಯೋಜನೆಗೆ ಅರ್ಜಿ ಸಲ್ಲಿಸಿಲ್ಲ. ಇಂದಿಗೆ 265 ಫಲಾನುಭವಿಗಳಲ್ಲಿ 154 ಜನರಿಗೆ ಹಣ ಸಂದಾಯವಾಗಿದ್ದು, ಆಧಾರ್ ಲಿಂಕ್ ಆಗದ ಕಾರಣ 111 ಜನರಿಗೆ ಗೃಹಲಕ್ಷ್ಮಿ ಹಣ ಜಮಾ ಆಗಿಲ್ಲ. 157 ಮಂದಿ ಮರಣ ಹೊಂದಿದ್ದು, ಮರಣಪತ್ರ ಸಲ್ಲಿಸಿದ ಬಳಿಕ 80 ಜನರಿಗೆ ಬಿಲ್ಲಿಂಗ್ಗೆ ಹೋಗಿದೆ. 35 ಫಲಾನುಭವಿಗಳ ಹೆಸರು ಇನ್ನೂ ಬದಲಾವಣೆ ಆಗಿಲ್ಲ. 42 ಫಲಾನುಭವಿಗಳ ಹೆಸರು ಬದಲಾವಣೆ ಕಂಡಿದ್ದು ಕುಟುಂಬದ ಮತ್ತೋರ್ವ ಯಜಮಾನಿ ಅರ್ಜಿ ಸಲ್ಲಿಸಿದ್ದಾರೆ ಎಂಬ ಮಾಹಿತಿಯನ್ನು ಸಭೆಗೆ ನೀಡಿದರು.
ಗೃಹಜ್ಯೋತಿ ಯೋಜನೆ ಅಡಿಯಲ್ಲಿ ತಾಲೂಕಿನಲ್ಲಿ ಈವರೆಗೆ ಒಟ್ಟು 519656 ಸ್ಥಾವರಗಳ ಬಿಲ್ ಜಾರಿಗೊಳಿಸಿದ್ದು, 1,94,95,648 ಯೂನಿಟ್ ವಿದ್ಯುತ್ ಬಳಕೆ ಆಗಿದ್ದು 18,39,80,561 ರೂ. ಉಚಿತ ವಿದ್ಯುತ್ ನೀಡಲಾಗಿದೆ ಎಂದು ಸಭೆಗೆ ಮೆಸ್ಕಾಂ ಸಿಬ್ಬಂದಿ ತಿಳಿಸಿದರು.
ಕೆಎಸ್ಆರ್ಟಿಸಿ ಸಾಗರ ವಿಭಾಗದ ಡಿಪೋ ಮ್ಯಾನೇಜರ್ ಎಸ್.ಎಸ್. ಬಿರಾದರ್ ಮಾತನಾಡಿ, ಸಾಗರ ಘಟಕದಲ್ಲಿ ಶಕ್ತಿ ಯೋಜನೆಯಲ್ಲಿ ಡಿಸೆಂಬರ್ನಲ್ಲಿ ಒಟ್ಟು 15,050 ಮಹಿಳೆಯರು ಉಚಿತ ಪ್ರಯಾಣಿಸಿದ್ದು, ರೂ 6,63,114 ಸಂಸ್ಥೆಗೆ ಆದಾಯ ಲಭಿಸಿದೆ ಎಂಬುದಾಗಿ ತಿಳಿಸಿದರು.
ಯುವನಿಧಿ ಯೋಜನೆಯಡಿಯಲ್ಲಿ ತಾಲೂಕಿನ 475 ಪದವಿ ಹಾಗು 4 ಡಿಪ್ಲೋಮಾ ವಿದ್ಯಾರ್ಥಿಗಳು ಯೋಜನೆಯ ರೂ. 14,31,000 ಫಲಾನುಭವಿಗಳಾಗಿದ್ದಾರೆ ಎಂದು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಅಧಿಕಾರಿ ಸಭೆಗೆ ಮಾಹಿತಿ ನೀಡಿದರು.
ಉತ್ತರದಿಂದ ತೃಪ್ತರಾಗದ ಅಧ್ಯಕ್ಷ ಚಿದಂಬರ್, ತಾಲೂಕಿನಲ್ಲಿ ಮುಂಬರುವ ಫೆಬ್ರವರಿ 15 ರೊಳಗೆ ಯುವಕರಿಗಾಗಿ ಯುವನಿಧಿ ಜಾಗೃತಿ ಆಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಸಭೆಗೆ ಸೂಚಿಸಿದರು.
ಸಭೆಯಲ್ಲಿ ಕಾರ್ಯದರ್ಶಿ ಇಒ ನರೇಂದ್ರ ಕುಮಾರ್, ತಾಲೂಕು ಪಂಚಾಯತಿ ವ್ಯವಸ್ಥಾಪಕ ಶಿವಕುಮಾರ್, ಪಿಡಿಒ ಪವನ್ ಕುಮಾರ್, ಯೋಜನೆಯ ಜಿಲ್ಲಾ ಸದಸ್ಯ ಅಮೀರ್ ಹಂಜಾ, ಸದಸ್ಯರಾದ ಅನಿಲ್ ಕುಮಾರ್, ಸಂತೋಷ್ ಮಳವಳ್ಳಿ, ಕರುಣಾಕರ್, ರವೀಂದ್ರ ಕೆರೆಹಳ್ಳಿ, ರಮೇಶ್, ಮಹೇಂದ್ರ ಬುಕ್ಕಿವರೆ, ಸಿಂಥಿಯಾ ಶರಾವೋ, ಸುಮಂಗಳ ದೇವರಾಜ್, ಪೂರ್ಣಿಮಾ ಮೂರ್ತಿ, ಅಕ್ಷತಾ ನಾಗರಾಜ್, ನರಸಿಂಹ ಪೂಜಾರ್, ಎಸ್ಡಿಎ ಮಂಜುನಾಥ್ ಉಪಸ್ಥಿತರಿಸಿದ್ದರು.
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
RipponpeteJune 1, 2025ಶ್ರುತಪಂಚಮಿ ಆಚರಣೆ | ಜೈನಧರ್ಮ ಸಿದ್ಧಾಂತಗಳು ಜೀವನ ಮೌಲ್ಯಗಳನ್ನು ವರ್ಧಿಸುತ್ತದೆ ; ಹೊಂಬುಜ ಶ್ರೀಗಳು
HosanagaraJune 1, 2025ಹೊಸನಗರ ; ಜೂ. 2 ಮತ್ತು 3ಕ್ಕೆ ತಾಲೂಕಿನಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ 2025 ಕಾರ್ಯಕ್ರಮ
Adike RateJune 1, 2025Arecanut, Black Pepper Price 31 May 2025 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?
SagaraMay 31, 2025ಪತ್ರಕರ್ತನ ಮೇಲೆ ಹಲ್ಲೆ ಯತ್ನ, ಜೀವ ಬೆದರಿಕೆ ; ಕ್ರಮಕ್ಕೆ ಒತ್ತಾಯ