Chikmagaluru News

Dengue | ಮಹಾಮಾರಿ ಡೆಂಗ್ಯೂಗೆ 6 ವರ್ಷದ ಬಾಲಕಿ ಬಲಿ !

KADURU | ಮಹಾಮಾರಿ ಡೆಂಗ್ಯೂ (Dengue) ಜ್ವರಕ್ಕೆ 6 ವರ್ಷದ ಬಾಲಕಿ ಬಲಿಯಾದ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಸಾನಿಯಾ (06) ಸಾವನ್ನಪ್ಪಿದ ಬಾಲಕಿ. ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ‌ಚಿಕಿತ್ಸೆ ಫಲಿಸದೆ ಇಂದು ಸಾವನ್ನಪ್ಪಿದ್ದಾಳೆ.

Read more: ಭಾಗ್ಯಲಕ್ಷ್ಮಿ ಬಾಂಡ್ ಇದ್ದವರ ಖಾತೆಗಳಿಗೆ ಸರ್ಕಾರದಿಂದ ಬಿಡುಗಡೆಯಾಗಲಿದೆ 1 ಲಕ್ಷ ಹಣ !

ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಮೃತಳ ತಂದೆ ಆಸಿಫ್ ರಾಜ್ಯ ಸರ್ಕಾರದ ವಿರುದ್ಧ ಬೇಸರ ಹೊರ ಹಾಕಿದ್ದು, ಬಾಲಕಿಯ ಮೃತ ದೇಹದ ಮುಂದೆ ನಿಂತು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ನನ್ನ ಮಗಳಿಗಾದ ಸ್ಥಿತಿ ಯಾರಿಗೂ ಬೇಡ !

‘ನನಗೆ ಯಾವುದೇ ಸಹಾಯ ಬೇಡ, ಸರ್ಕಾರಿ ಆಸ್ಪತ್ರೆ ಅಭಿವೃದ್ಧಿ ಮಾಡಿ. ಡೆಂಗ್ಯೂ ಕಾಯಿಲೆಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ, ಸರ್ಕಾರಿ ಆಸ್ಪತ್ರೆಯಲ್ಲಿ ಬಡವರಿಗೆ ಹೆಚ್ಚಿನ ಸೌಲಭ್ಯ ಸಿಗಬೇಕು. ನನ್ನ ಮಗಳಿಗಾದ ಸ್ಥಿತಿ ಯಾರಿಗೂ ಆಗುವುದು ಬೇಡ’ ಎಂದು ಬೇಸರ ಹೊರಹಾಕಿದ್ದಾರೆ.

Read more: ಭಾಗ್ಯಲಕ್ಷ್ಮಿ ಬಾಂಡ್ ಇದ್ದವರ ಖಾತೆಗಳಿಗೆ ಸರ್ಕಾರದಿಂದ ಬಿಡುಗಡೆಯಾಗಲಿದೆ 1 ಲಕ್ಷ ಹಣ !

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]